Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಟ್ಲಾ ಹೌಸ್ ಎನ್‍ಕೌಂಟರ್: ಬಂಧಿತ ಐಎಂ...

ಬಾಟ್ಲಾ ಹೌಸ್ ಎನ್‍ಕೌಂಟರ್: ಬಂಧಿತ ಐಎಂ ಉಗ್ರ ಆರಿಝ್ ಖಾನ್ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ8 March 2021 6:04 PM IST
share
ಬಾಟ್ಲಾ ಹೌಸ್ ಎನ್‍ಕೌಂಟರ್: ಬಂಧಿತ ಐಎಂ ಉಗ್ರ ಆರಿಝ್ ಖಾನ್ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ

 ಹೊಸದಿಲ್ಲಿ: ರಾಜಧಾನಿಯಲ್ಲಿ 2008ರಲ್ಲಿ ನಡೆದ ಬಾಟ್ಲಾ ಹೌಸ್ ಶೂಟೌಟ್ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್ ಉಗ್ರ ಆರಿಝ್ ಖಾನ್‍ ನನ್ನು ಇಂದು ಸ್ಥಳೀಯ ನ್ಯಾಯಾಲಯ ದೋಷಿಯೆಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮುಂದಿನ ಸೋಮವಾರ ಘೋಷಿಸಲಿದೆ.

ರಾಜಧಾನಿಯ ಒಖ್ಲಾ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರ ತಂಡ ಹಾಗೂ ದಿಲ್ಲಿ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದರೆ ಇಬ್ಬರು ಇತರರು ಗಾಯಗೊಂಡಿದ್ದರು. ಘಟನೆ ಸಂದರ್ಭ ಆರಿಝ್ ಖಾನ್ ತಪ್ಪಿಸಿಕೊಂಡಿದ್ದ. ದಿಲ್ಲಿ, ರಾಜಸ್ಥಾನ, ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿ 2008ರಲ್ಲಿ ನಡೆದಿದ್ದ ಸರಣಿ ಸ್ಫೋಟ ಪ್ರಕರಣಗಳಲ್ಲೂ ಆತ ಆರೋಪಿಯಾಗಿದ್ದ.

ಉತ್ತರ ಪ್ರದೇಶದ ಆಝಂಘರ್ ನಿವಾಸಿಯಾಗಿರುವ ಆರಿಝ್ ಖಾನ್‍ನನ್ನು ದಿಲ್ಲಿ ಪೊಲೀಸರ ವಿಶೇಷ ಸೆಲ್ ಫೆಬ್ರವರಿ 2018ರಲ್ಲಿ ಬಂಧಿಸಿತ್ತು. ಇದಕ್ಕೂ ಮುಂಚೆ ಆತನ ಸುಳಿವು ನೀಡಿದವರಿಗೆ ರೂ. 15 ಲಕ್ಷ ಬಹುಮಾನ ಘೋಷಿಸಲಾಗಿತ್ತಲ್ಲದೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿಯಾಗಿತ್ತು.

ಮುಝಫ್ಫರನಗರದ ಎಸ್ ಡಿ ಕಾಲೇಜಿನ ಬಿಟೆಕ್ ಪದವೀಧರನಾಗಿರುವ ಖಾನ್ ಸ್ಫೋಟಕ ತಜ್ಞನಾಗಿದ್ದಾನೆ. ದಿಲ್ಲಿ ಶೂಟೌಟ್‍ನಲ್ಲಿ ಮೃತಪಟ್ಟಿದ್ದ ಆತಿಫ್ ಅಮೀನ್ ಎಂಬಾತ ಈತನನ್ನು ಉಗ್ರ ಸಂಘಟನೆಗೆ ಸೇರಿಸಿಕೊಂಡಿದ್ದ. 2008 ಘಟನೆ ನಂತರ ಆತ ನೇಪಾಳಕ್ಕೆ ತೆರಳಿ ಅಲ್ಲಿನ ಪಾಸ್‍ಪೋರ್ಟ್ ಅನ್ನು ಸಲೀಂ ಎಂಬ ಹೆಸರಿನಲ್ಲಿ ಪಡೆದುಕೊಂಡು ಅಲ್ಲಿ ರೆಸ್ಟಾರೆಂಟ್ ಒಂದನ್ನು ನಡೆಸುತ್ತಿದ್ದನಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷಣ ಕೂಡ ನೀಡುತ್ತಿದ್ದ. ನೇಪಾಳದಲ್ಲಿ ಆತನಿಗೆ ರಿಯಾಝ್ ಭಟ್ಕಳನ ಪರಿಚಯವಾದ ನಂತರ ಆತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯನ್ನು ಮರು ಆರಂಭಿಸುವಂತೆ ಖಾನ್‍ನಿಗೆ ಪ್ರೇರೇಪಿಸಿದ್ದ. ಮುಂದೆ ಸೌದಿಗೆ ತೆರಳಿದ್ದ ಖಾನ್ ಫೆಬ್ರವರಿ 2018ರಲ್ಲಿ ಭಾರತಕ್ಕೆ ಬಂದಿದ್ದ ವೇಳೆ ಭಾರತ-ಗಡಿಯಲ್ಲಿ ಬಂಧಿತನಾಗಿದ್ದ ಎನ್ನಲಾಗಿದೆ.

ಬಾಟ್ಲಾ ಹೌಸ್ ಪ್ರಕರಣದ ಇನ್ನೊಬ್ಬ ಆರೋಪಿ ಶಹಝಾದ್ ಅಹ್ಮದ್ ಎಂಬಾತನನ್ನು ಅಪರಾಧಿ ಎಂದು 2013ರಲ್ಲಿ ಘೋಷಿಸಲಾಗಿತ್ತು. ಇನ್ನಿಬ್ಬರು ಆರೋಪಿಗಳಾದ ಆತಿಫ್ ಅಮೀನ್ ಹಾಗೂ ಮುಹಮ್ಮದ್ ಸಾಜಿದ್ ಘಟನೆ ಸಂದರ್ಭ ಹತ್ಯೆಗೀಡಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X