Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಿಟಿಷ್ ಸಂಸತ್ತಿನಲ್ಲಿ ರೈತ ಪ್ರತಿಭಟನೆ...

ಬ್ರಿಟಿಷ್ ಸಂಸತ್ತಿನಲ್ಲಿ ರೈತ ಪ್ರತಿಭಟನೆ ಕುರಿತ ಚರ್ಚೆಯನ್ನು ಖಂಡಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ9 March 2021 1:06 PM IST
share
ಬ್ರಿಟಿಷ್ ಸಂಸತ್ತಿನಲ್ಲಿ ರೈತ ಪ್ರತಿಭಟನೆ ಕುರಿತ ಚರ್ಚೆಯನ್ನು ಖಂಡಿಸಿದ ಭಾರತ

ಹೊಸದಿಲ್ಲಿ,ಮಾ.9: ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಯ ನಡುವೆಯೇ ಶಾಂತಿಯುತ ಪ್ರತಿಭಟನೆಗಳು ಮತ್ತು ಭಾರತದಲ್ಲಿ ಪತ್ರಿಕಾ ಸ್ವಾತಂತ್ರ ಕುರಿತು ಬ್ರಿಟಿಷ್ ಸಂಸದರ ಗುಂಪೊಂದು ಸೋಮವಾರ ನಡೆಸಿದ,ಸ್ಪಷ್ಟವಾಗಿ ಏಕಪಕ್ಷೀಯವಾಗಿದ್ದ ಚರ್ಚೆಗಳಲ್ಲಿ ವ್ಯಕ್ತವಾಗಿದ್ದ ಸುಳ್ಳು ಪ್ರತಿಪಾದನೆಗಳನ್ನು ಲಂಡನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಖಂಡಿಸಿದೆ.

ಭಾರತದಲ್ಲಿ ರೈತರ ಪ್ರತಿಭಟನೆಗಳ ಸುತ್ತಲಿನ ಘಟನಾವಳಿಗಳಿಗೆ ಬ್ರಿಟಿಷ್ ಮಾಧ್ಯಮಗಳು ಸೇರಿದಂತೆ ವಿದೇಶಿ ಮಾಧ್ಯಮಗಳು ಸ್ಥಳದಲ್ಲಿ ಖುದ್ದಾಗಿ ಉಪಸ್ಥಿತವಿದ್ದು ಸಾಕ್ಷಿಯಾಗಿದ್ದವು,ಹೀಗಾಗಿ ಭಾರತದಲ್ಲಿ ಪತ್ರಿಕಾ ಸ್ವಾತಂತ್ರದ ಕೊರತೆಯ ಪ್ರಶ್ನೆಯೇ ಏಳುವುದಿಲ್ಲ ಎಂದು ಹೇಳಿಕೆಯಲ್ಲಿ ಬೆಟ್ಟು ಮಾಡಿರುವ ರಾಯಭಾರ ಕಚೇರಿಯು,ಸಮತೋಲಿತ ಚರ್ಚೆಗಳನ್ನು ನಡೆಸುವ ಬದಲು ಯಾವುದೇ ಸಮರ್ಥನೆಗಳಿಲ್ಲದ ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗಿದೆ. ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳ ವಿರುದ್ಧ ದೋಷಾರೋಪಣೆಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ.

ಬ್ರಿಟಿಷ್ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಒಂದು ಲಕ್ಷಕ್ಕೂ ಅಧಿಕ ಸಹಿಗಳೊಂದಿಗಿನ ಇ-ಅಹವಾಲಿನ ಹಿನ್ನೆಲೆಯಲ್ಲಿ ಸುಮಾರು ಒಂದು ಡಝನ್ ಸಂಸದರು ಪಕ್ಷಭೇದವನ್ನು ಮರೆತು ಒಟ್ಟು ಸೇರಿ ಭಾರತದಲ್ಲಿ ಪ್ರತಿಭಟನಾನಿರತ ರೈತರ ವಿರುದ್ಧ ಬಲಪ್ರಯೋಗ ಮತ್ತು ಪ್ರತಿಭಟನೆಗಳ ವರದಿ ಮಾಡುವ ಪತ್ರಕರ್ತರನ್ನು ಗುರಿಯಾಗಿಸಿಕೊಳ್ಳುತ್ತಿರುವ ಬಗ್ಗೆ ಚರ್ಚೆಗಳನ್ನು ನಡೆಸಿತ್ತು.

ಸೀಮಿತ ಕೋರಮ್‌ನಲ್ಲಿ ಸಂಸದರ ಸಣ್ಣ ಗುಂಪೊಂದು ಭಾಗಿಯಾಗಿದ್ದ ಆಂತರಿಕ ಚರ್ಚೆಯ ಬಗ್ಗೆ ಮಾತನಾಡುವುದರಿಂದ ತಾನು ಸಾಮಾನ್ಯವಾಗಿ ದೂರ ಉಳಿಯುತ್ತೇನಾದರೂ ಯಾರಾದರೂ ಭಾರತದ ವಿರುದ್ಧ ದೋಷಾರೋಪಣೆ ಮಾಡಿದಾಗ ಭಾರತದೊಂದಿಗೆ ತಮ್ಮ ಗೆಳೆತನ,ಅದರ ಮೇಲೆ ತಮ್ಮ ಪ್ರೀತಿ ಅಥವಾ ತಮ್ಮ ಆಂತರಿಕ ರಾಜಕೀಯ ಅನಿವಾರ್ಯತೆಗಳ ಬಗ್ಗೆ ಅವರ ಹೇಳಿಕೆಗಳು ಏನೇ ಇದ್ದರೂ ತಪ್ಪು ಗ್ರಹಿಕೆಯನ್ನು ನಿವಾರಿಸುವ ಅಗತ್ಯವಿದೆ ಎಂದಿರುವ ಹೇಳಿಕೆಯು,ರಾಯಭಾರ ಕಚೇರಿಯು ಅಹವಾಲಿನಲ್ಲಿ ಎತ್ತಲಾಗಿರುವ ವಿಷಯಗಳ ಬಗ್ಗೆ ಸಂಬಂಧಪಟ್ಟವರಿಗೆ ಆಗಾಗ್ಗೆ ಮಾಹಿತಿ ನೀಡಲು ಕಾಳಜಿಯನ್ನು ವಹಿಸುತ್ತಿದ್ದರೂ ರೈತರ ಪ್ರತಿಭನೆಯ ಕುರಿತು ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ.

  ಪ್ರಧಾನಿ ಬೋರಿಸ್ ಜಾನ್ಸನ್ ಅವರ ಮುಂಬರುವ ಭಾರತ ಭೇಟಿ ಸಂದರ್ಭವನ್ನು ಅಗತ್ಯವಾದರೆ ‘ಗಂಭೀರ ಮತ್ತು ನಿರ್ದಿಷ್ಟ’ ವಿಷಯಗಳನ್ನೆತ್ತಲು ಬಳಸಿಕೊಳ್ಳಲಾಗುವುದು ಎಂದು ಬ್ರಿಟಿಷ್ ಸರಕಾರವು ಸೋಮವಾರ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X