Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಹ್ಮರಕೂಟ್ಲು ಟೋಲ್ ಗೇಟ್ ದುಸ್ಥಿತಿ...

ಬ್ರಹ್ಮರಕೂಟ್ಲು ಟೋಲ್ ಗೇಟ್ ದುಸ್ಥಿತಿ ಜನಪ್ರತಿನಿಧಿಗಳ ಬದ್ಧತೆ, ಇಚ್ಛಾಶಕ್ತಿಯ ಕೊರತೆಗೆ ಸಾಕ್ಷಿ: ರಮಾನಾಥ ರೈ

ಅವಧಿ ಮೀರಿದ, ಅವೈಜ್ಞಾನಿಕ ಬ್ರಹ್ಮರಕೂಟ್ಲು ಟೋಲ್ ಸಂಗ್ರಹ ರದ್ದುಗೊಳಿಸಲು ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ9 March 2021 1:28 PM IST
share
ಬ್ರಹ್ಮರಕೂಟ್ಲು ಟೋಲ್ ಗೇಟ್ ದುಸ್ಥಿತಿ ಜನಪ್ರತಿನಿಧಿಗಳ ಬದ್ಧತೆ, ಇಚ್ಛಾಶಕ್ತಿಯ ಕೊರತೆಗೆ ಸಾಕ್ಷಿ: ರಮಾನಾಥ ರೈ

ಬಂಟ್ವಾಳ, ಮಾ.9: ಬ್ರಹ್ಮರಕೂಟ್ಲು ಟೋಲ್ ಗೇಟ್ ಇಡೀ ದೇಶದಲ್ಲಿಯೇ ಅವೈಜ್ಞಾನಿಕ ಮತ್ತು ಅಪಾಯಕಾರಿ ಸ್ಥಳದಲ್ಲಿದೆ. ಇದು ಈ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಯ ಬದ್ಧತೆ ಮತ್ತು ಇಚ್ಛಾಶಕ್ತಿಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬ್ರಹ್ಮರಕೂಟ್ಲುವಿನಲ್ಲಿ ಅವಧಿ ಮೀರಿದ, ಅವೈಜ್ಞಾನಿಕ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿ, ಟೋಲ್ ಸಂಗ್ರಹವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಇಂದು ಟೋಲ್ ಗೇಟ್ ಬಳಿ ನಡೆದ ಧರಣಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಇಲ್ಲಿನ ಟೋಲ್ ಗೇಟ್ ನಲ್ಲಿ ಯಾವುದೇ ಮೂಲಭೂತ ಸೌಕರ್ಯ ಇಲ್ಲ. ಸರ್ವೀಸ್ ರಸ್ತೆಯೂ ಇಲ್ಲ. ಟೋಲ್ ಗೇಟ್ ಮುಗಿದಂತೆ ಕಿರಿದಾದ ರಸ್ತೆಯಿಂದ ವಾಹನ ಸವಾರರು ಅಪಾಯವನ್ನು ಎದುರಿಸುತ್ತಿದ್ದಾರೆ. ಇಲ್ಲಿ ವಾಹನಗಳು ಸರಾಗವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಅವೈಜ್ಞಾನಿಕ ಟೋಲ್ ಗೇಟ್ ನಿಂದಾಗಿ ಟ್ರಾಫಿಕ್ ವ್ಯವಸ್ಥೆಗೂ ನಿರಂತರ ಸಮಸ್ಯೆಯಾಗುತ್ತಿದೆ ಎಂದು ರೈ ಹೇಳಿದರು.

ಪೆಟ್ರೋಲ್, ಡೀಸೆಲ್‌, ಗ್ಯಾಸ್, ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ನಡುವೆ ಟೋಲ್ ಸಂಗ್ರಹದ ನೀತಿಯಲ್ಲಿ ಬದಲಾವಣೆಯ ಹೆಸರಿನಲ್ಲಿ ಕೇಂದ್ರ ಸರಕಾರ ಜನರ ಮೇಲೆ ಮತ್ತಷ್ಟು ಹೊರೆ ಹಾಕುತ್ತಿದೆ. ಈ ಮೂಲಕ ಕೇಂದ್ರ ಸರಕಾರ ಬಡವರ ಜೇಬಿಗೆ ಕೈಹಾಕಿ ಬಂಡವಾಳಶಾಹಿಗಳ ಜೇಬು ತುಂಬಿಸುತ್ತಿದೆ ಎಂದು ಆರೋಪಿಸಿದರು.

ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸಂಚಾಲಕ ಪ್ರಭಾಕರ ದೈವಗುಡ್ಡೆ ಮಾತನಾಡಿ, ನಾಳೆಯಿಂದ ನಾವು ಟೋಲ್ ಪಾವತಿಸುವುದಿಲ್ಲ. ಹೊಸ ವಾಹನ ಖರೀದಿಸುವಾಗ ರಸ್ತೆ ತೆರಿಗೆ ಸಹಿತ ಎಲ್ಲಾ ತರದ ತೆರಿಗೆಯನ್ನು ಪಾವತಿಸಲಾಗುತ್ತದೆ. ಮತ್ತೆಯೂ ಸರಕಾರ ಜನರಿಂದ ಹಣ ಲೂಟಿ ಮಾಡುತ್ತಿದೆ. ಟೋಲ್ ಸಂಗ್ರಹದಲ್ಲಿ ದಿನಕ್ಕೊಂದು ನೀತಿ ತಂದು ಜನರು ರಸ್ತೆ ಇಳಿಯದ ಪರಿಸ್ಥಿತಿಯನ್ನು ನಿರ್ಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ವಕೀಲ ಉಮೇಶ್ ಕುಮಾರ್ ಮಾತನಾಡಿ, ಬ್ರಹ್ಮರಕೂಟ್ಲು ಟೋಲ್ ಗೇಟ್ ಅವೈಜ್ಞಾನಿಕವಾಗಿದ್ದು, ಇದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿಂತಿಸಲಾಗುವುದು ಎಂದರು.

ಸಿಪಿಎಂ ನಾಯಕ ರಾಮಣ್ಣ ವಿಟ್ಲ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ರೈ, ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ವಕೀಲ ತುಳಸೀದಾಸ್, ಪ್ರಮುಖರಾದ ಇಬ್ರಾಹೀಂ ನವಾಝ್ ಬಡಕಬೈಲ್, ಮಧುಸೂದನ್, ಮೋಹನ್ ಗೌಡ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪದ್ಮನಾಭ ರೈ, ಹಾರೂನ್ ರಶೀದ್, ಅಲ್ತಾಫ್ ತುಂಬೆ, ಪ್ರವೀಣ್ ತುಂಬೆ, ಪ್ರಕಾಶ್ ಶೆಟ್ಟಿ ಶ್ರೀಶೈಲ, ಮುಹಮ್ಮದ್ ವಲವೂರ್, ಸದಾಶಿವ ಬಂಗೇರ, ಮುಹಮ್ಮದ್ ನಂದಾವರ, ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ, ವೆಂಕಪ್ಪ ಪೂಜಾರಿ, ಬಿ.ಶೇಖರ್, ಸುರೇಶ್ ಕುಮಾರ್, ಪ್ರಶಾಂತ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X