Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕ ಸಂಗಮೇಶ್ ಅಂಗಿ ಬಿಚ್ಚಿದ ವಿಚಾರ:...

ಶಾಸಕ ಸಂಗಮೇಶ್ ಅಂಗಿ ಬಿಚ್ಚಿದ ವಿಚಾರ: ಗದ್ದಲದ ನಡುವೆ ‘ಹಕ್ಕುಚ್ಯುತಿ ಸಮಿತಿ'ಗೆ ಒಪ್ಪಿಸಲು ಸ್ಪೀಕರ್ ರೂಲಿಂಗ್

ಸದನದಲ್ಲಿ ಗದ್ದಲ, "ಸಿಡಿ,ಸಿಡಿ" ಘೋಷಣೆ ಕೂಗಿದ ಕಾಂಗ್ರೆಸ್‌ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ9 March 2021 1:37 PM IST
share
ಶಾಸಕ ಸಂಗಮೇಶ್ ಅಂಗಿ ಬಿಚ್ಚಿದ ವಿಚಾರ: ಗದ್ದಲದ ನಡುವೆ ‘ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸಲು ಸ್ಪೀಕರ್ ರೂಲಿಂಗ್

ಬೆಂಗಳೂರು, ಮಾ. 9: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರು ಸದನದಲ್ಲಿ ಅಂಗಿ ಬಿಚ್ಚಿ ಘೋಷಣೆ ಕೂಗಿ ಅಸಭ್ಯ, ಅಶಿಸ್ತು ಮತ್ತು ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ವಿಧಾನಸಭೆ ‘ಹಕ್ಕುಚ್ಯುತಿ ಸಮಿತಿ'ಗೆ ವಹಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರೂಲಿಂಗ್ ನೀಡಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಅರಗ ಜ್ಞಾನೇಂದ್ರ, ‘ಸಂಗಮೇಶ್ ಅವರು ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಕರ್ನಾಟಕ ವಿಧಾನಸಭೆಗೆ ತನ್ನದೇ ಆದ ಇತಿಹಾಸವಿದೆ. ಸ್ಪೀಕರ್ ಪೀಠಕ್ಕೆ ತನ್ನದೇ ಘನತೆ, ಗೌರವವಿದೆ. ಅಲ್ಲದೆ, ತಮ್ಮನ್ನು ಮಾಧ್ಯಮಗಳಲ್ಲಿ ಟೀಕಿಸಿದ್ದಾರೆ' ಎಂದು ಉಲ್ಲೇಖಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ‘ಈಗಾಗಲೇ ಸಂಗಮೇಶ್ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಿದರೆ ಸಮರ್ಥನೆ ಮಾಡಿಕೊಳ್ಳಲು ಅವರು ಸದನದಲ್ಲಿ ಇಲ್ಲ. ಹೀಗಾಗಿ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡಬಾರದು. ಈ ಹಿಂದೆ ನಿಮ್ಮ ಪಕ್ಷದ ಶಾಸಕ ಗೂಳಿಹಟ್ಟಿ ಶೇಖರ್ ಅವರ ಅಂಗಿ ಹರಿದುಕೊಂಡ ಮೇಜು ಏರಿ ಪ್ರತಿಭಟನೆ ನಡೆಸಿದ್ದಾರೆ. ಅವರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ' ಎಂದು ಪ್ರಶ್ನಿಸಿದರು.

ಸಂಗಮೇಶ್ ಮತ್ತವರ ಕುಟುಂಬದ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಅವರು ಪ್ರಶ್ನಿಸಿದ್ದು, ಪ್ರತಿಭಟನಾತ್ಮಕವಾಗಿ ತಮ್ಮ ಶರ್ಟ್ ಬಿಚ್ಚಿ ಘೋಷಣೆ ಕೂಗಿದ್ದಾರೆ. ಈಗಾಗಲೇ ಅವರನ್ನು ಅಮಾನತು ಮಾಡಿದ್ದು, ಹಕ್ಕುಚ್ಯುತಿ ಸಮಿತಿಗೆ ಪ್ರಕರಣವನ್ನು ವಹಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದರು. ಹೀಗಾಗಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ಗದ್ದಲ ಸೃಷ್ಟಿಯಾಯಿತು.

ತರಾತುರಿಯಲ್ಲೇ ಸ್ಪೀಕರ್, ಹಕ್ಕುಚ್ಯುತಿ ಸಮಿತಿಗೆ ವಹಿಸುವ ತೀರ್ಮಾನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಗಮೇಶ್ ಪ್ರಕರಣ ಹಕ್ಕುಚ್ಯುತಿ ಸಮಿತಿ ವಹಿಸುವುದನ್ನು ವಿರೋಧಿಸಿ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಪ್ರತಿಭಟನೆಗೆ ಮುಂದಾದರು. ಕಾಂಗ್ರೆಸ್ ಸದಸ್ಯರು ಅವರನ್ನು ಅನುಸರಿಸಿ, ಸಿಡಿ, ಸಿಡಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಇದರಿಂದ ಸದನದಲ್ಲಿ ಗದ್ದಲ-ಕೋಲಾಹಲ ಸೃಷ್ಟಿಯಾಯಿತು. ಇತ್ತ ಕಾಂಗ್ರೆಸ್ ಸದಸ್ಯರು ಸಿಡಿ ಸಿಡಿ ಎಂದು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರೆ, ಬಿಜೆಪಿ ಸದಸ್ಯರು ಪಾಕಿಸ್ತಾನಿ ಏಜೆಂಟರು, ಸಿಡಿ, ಸಿಡಿಯಲ್ಲ ನೀವೆಲ್ಲ ಹೇಡಿಗಳು' ಎಂದು ತಿರುಗೇಟು ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ, ‘ಸಂಗಮೇಶ್ ಪ್ರಕರಣವನ್ನು ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸುವುದು ಸೂಕ್ತ' ಎಂದು ಹೇಳಿದರು.

ಈ ಗದ್ದಲದ ನಡುವೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸಂಗಮೇಶ್ ಸದನದಲ್ಲಿ ಅಸಭ್ಯ ಮತ್ತು ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸಿದ್ದು, ಈ ಪ್ರಕರಣದ ತನಿಖೆಯನ್ನು ಸದನದ ‘ಹಕ್ಕುಚ್ಯುತಿ ಸಮಿತಿ'ಗೆ ವಹಿಸಲಾಗುವುದು. ಯಾರು ಎಷ್ಟೇ ಅಡ್ಡಿ, ಆತಂಕ ಸೃಷ್ಟಿಸಿದರೂ, ಸ್ಪೀಕರ್ ಪೀಠದ ಘನತೆ, ಗೌರವವನ್ನು ಎತ್ತಿ ಹಿಡಿಯುತ್ತೇನೆ' ಎಂದು ಸ್ಪಷ್ಟಪಡಿಸಿದರು.

‘ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಸದಸ್ಯರ ಅನುಚಿತ ವರ್ತನೆ ಸಮರ್ಥಿಸುವುದು ದುರದೃಷ್ಟಕರ. ಈ ಪ್ರಕರಣದಿಂದ ಕಾಂಗ್ರೆಸ್ ಸದಸ್ಯ ಅಂಗಿ ಬಿಚ್ಚಿದ್ದನ್ನು ಸಮರ್ಥಿಸುವ ಮೂಲಕ ಕಾಂಗ್ರೆಸ್ ಪಕ್ಷ ಬೀದಿಗೆ ಬಂದಿದೆ. ದೇಶದ ಜನತೆ ಇವರಿಗೆ ಅಂಗಿ ಬಿಚ್ಚಿಸಿದ್ದಾರೆ. ಹೀಗಾಗಿ ಶಾಸಕ ಸಂಗಮೇಶ್ ಅವರನ್ನು ವಜಾ ಮಾಡಬೇಕು'

-ಅರಗ ಜ್ಞಾನೇಂದ್ರ, ಆಡಳಿತ ಪಕ್ಷ ಸದಸ್ಯ

‘ಈ ಹಿಂದೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಅಂಗಿ ಹರಿದುಕೊಂಡು ಮೇಜು ಏರಿ ಪ್ರತಿಭಟನೆ ನಡೆಸಿದ್ದರು. ಆಗ ಯಾವುದೇ ಕ್ರಮ ಕೈಗೊಳ್ಳದೇ ಇದೀಗ ಸಂಗಮೇಶ್ ವಿರುದ್ಧ ಕ್ರಮ ಕೈಗೊಳ್ಳುವುದು ಸರಿಯಲ್ಲ. ಸಂಗಮೇಶ್ ಅವರು ಯಾವುದೆ ಅಸಭ್ಯ ವರ್ತನೆ ತೋರಿಲ್ಲ. ತಮ್ಮ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರತಿಭಟನಾತ್ಮಕವಾಗಿ ಅಂಗಿ ಕಳಚಿ ಘೋಷಣೆ ಕೂಗಿದ್ದಾರೆ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X