Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿನ್ನಜೆ ನಾರಾಯಣ ನಾಯಕ್‌ಗೆ ಮಂಗಳೂರು...

ಕಿನ್ನಜೆ ನಾರಾಯಣ ನಾಯಕ್‌ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ9 March 2021 6:48 PM IST
share
ಕಿನ್ನಜೆ ನಾರಾಯಣ ನಾಯಕ್‌ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಮಂಗಳೂರು, ಮಾ.9: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನಗಳ ಮಾಹಿತಿ ಕೊಡುವ ಮೂಲಕ ಬಡ ಮಕ್ಕಳು ಕೂಡಾ ಆರ್ಥಿಕ ನೆರವು ಪಡೆದು ಉತ್ತಮ ಶಿಕ್ಷಣ ಪಡೆಯಲು ನೆರವು ನೀಡುತ್ತಿರುವ ನಿವೃತ್ತ ಶಿಕ್ಷಕ ಕಿನ್ನಜೆ ನಾರಾಯಣ ನಾಯಕ್ 2020ನೇ ಸಾಲಿನ ಪ್ರತಿಷ್ಠಿತ ಮಂಗಳೂರು ಪ್ರೆಸ್‌ಕ್ಲಬ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಎಂ.ರಘುರಾಮ್, ಜಾದೂಗಾರ ಗಣೇಶ್ ಕುದ್ರೋಳಿ ಮತ್ತು ಸಾಮಾಜಿಕ ಕಾರ್ಯಕರ್ತ ಯತೀಶ್ ಬೈಕಂಪಾಡಿ ನೇತೃತ್ವದ ಆಯ್ಕೆ ಸಮಿತಿಯು ಮಂಗಳವಾರ ಈ ಆಯ್ಕೆ ಮಾಡಿದೆ.

ಮಾ.21ರಂದು ಅಬ್ಬಕ್ಕ ರಾಣಿ ಕ್ರೂಸ್‌ನಲ್ಲಿ ನಡೆಯಲಿರುವ ಪ್ರೆಸ್‌ಕ್ಲಬ್ ದಿನಾಚರಣೆ ಕಾರ್ಯಕ್ರಮದಲ್ಲಿ ಕಿನ್ನಜೆ ನಾರಾಯಣ ನಾಯಕ್‌ಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ಪ್ರೆಸ್‌ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪರಿಚಯ

ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕಿನ್ನಜೆಯ ರಾಮಪ್ಪನಾಯಕ್-ಜಲಜಣಕ್ಷಿ ದಂಪತಿಯ ಪುತ್ರ ಕಿನ್ನಜೆ ನಾರಾಯಣ ನಾಯಕ್ 1963ರಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದವರು. ಮುಂದೆ ಖಾಸಗಿಯಾಗಿ ಹೆಚ್ಚು ಶಿಕ್ಷಣ ಪಡೆದು ಹೈಸ್ಕೂಲ್ ಮುಖ್ಯಶಿಕ್ಷಕರಾಗಿ ಸೇವಾ ನಿವೃತ್ತರಾಗಿದ್ದರು.

2001ರ ಜೂ.30ರಂದು ವಾಮದಪದವು ಹೈಸ್ಕೂಲ್‌ನಲ್ಲಿ ನಿವೃತ್ತರಾದ ನಾರಾಯಣ ಮಾಸ್ಟರ್ ಆ ಸಾಲಿನ ಶೈಕ್ಷಣಿಕ ವರ್ಷ ಮುಗಿಯುವ ತನಕ ಅಲ್ಲಿಯೇ ಸೇವೆಯಲ್ಲಿ ಮುಂದುವರಿದರು. ಮತ್ತೆ ಎರಡು ವರ್ಷ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.

ನಾರಾಯಣ ಮಾಸ್ಟರ್ ವಾಮದಪದವು ಹೈಸ್ಕೂಲಿಗೆ ಸೇರುವ ಹೊತ್ತಿನಲ್ಲಿ ಅಲ್ಲಿಯ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿ ವೇತನ ಬರುತ್ತಿತ್ತು. ನಾಯಕರು ಅಲ್ಲಿಗೆ ಬೆನ್ನು ಹಾಕುವ ಸಂದರ್ಭದಲ್ಲಿ ಆ ಮೊತ್ತ 10 ಲಕ್ಷ ರೂ.ಗೆ ಏರಿಕೆಯಾಗಿತ್ತು. ತಾವು ಕರ್ತವ್ಯ ನಿರ್ವಹಿಸಿದ ಶಿಕ್ಷಣ ಸಂಸ್ಥೆಗಳ ಹೆಚ್ಚಿನ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆಯಲು ಮಾರ್ಗದರ್ಶನ ನೀಡುವುದು ಅವರ ಪ್ರವೃತ್ತಿಯಾಗಿತ್ತು. ಯಾವುದೇ ವಿದ್ಯಾರ್ಥಿಯು ಆರ್ಥಿಕ ಅಡಚಣೆಯಿಂದ ಅರ್ಧದಲ್ಲಿ ಶಿಕ್ಷಣ ಮೊಟಕುಗೊಳಿಸಬಾರದು ಎಂಬುದು ಅವರ ಉದ್ದೇಶವಾಗಿತ್ತು.

2007ರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳ ಮಾಹಿತಿ ನೀಡಲು ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ದೂರದ ಬೈಂದೂರಿನಿಂದ ಸುಳ್ಯ ತನಕವೂ ಅವರು ಹೋಗುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳು ತೆರೆದು ಕೊಳ್ಳುತ್ತಿದ್ದಂತೆ ನಾರಾಯಣ ನಾಯಕರು ಕಾಲೇಜುಗಳ ಕಚೇರಿಯ ಬಾಗಿಲು ತಟ್ಟುತ್ತಾರೆ. ಅಲ್ಲಿನ ಪ್ರಾಂಶುಪಾಲರ ಒಪ್ಪಿಗೆ ಪಡೆದು ತರಗತಿ ಗಳಿಗೆ ತೆರಳಿ ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ ನೀಡುತ್ತಾರೆ. ಹೆಚ್ಚುವರಿ ಮಾಹಿತಿ ಬಯಸುವ ವಿದ್ಯಾರ್ಥಿಗಳಿಗೆ ಫೋನ್ ನಂಬರ್ ನೀಡಿ ರಾತ್ರಿ 8 ಗಂಟೆಯಿಂದ 10 ಗಂಟೆಯ ಮಧ್ಯೆ ಕರೆ ಮಾಡುವಂತೆ ತಿಳಿಸಿ, ಸೂಕ್ತ ಸಲಹೆ ನೀಡುತ್ತಾರೆ.

ವಿದ್ಯಾರ್ಥಿಗಳಿಗೆ ಬಲ ತುಂಬುವ ಕೆಲಸದಲ್ಲಿ ತೊಡಗಿರುವ ಮಾಸ್ಟರ್‌ಗೆ ಇದೀಗ 78 ವರ್ಷ ಪ್ರಾಯ. ಎರಡೂ ಜಿಲ್ಲೆಗಳ ಕನಿಷ್ಠ ಒಂದೂವರೆ ಲಕ್ಷದಷ್ಟು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆಯಲು ನಾರಾಯಣ ನಾಯಕ್ ಮಾರ್ಗದರ್ಶನ ನೀಡಿದ್ದಾರೆ. ಅಂಗನವಾಡಿ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, ಆಯ್ದ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು, ಶಿಕ್ಷಕ ಶಿಕ್ಷಣ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವ ಈ ಶಿಕ್ಷಣ ಪ್ರೇಮಿ, ಓಡಾಟಕ್ಕೆ ತನ್ನ ಪಿಂಚಣಿ ಹಣವನ್ನೇ ಬಳಸುತ್ತಿದ್ದಾರೆ. ಬಡ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಬೆಂಬಲಿಸಿದ್ದಾರೆ.

2018ರಲ್ಲಿ ಸುವರ್ಣ ಟಿವಿಯ ಅಸಮಾನ್ಯ ಕನ್ನಡಿಗ ಪ್ರಶಸ್ತಿ ಸಿಕ್ಕಿದೆ. ಅದರಲ್ಲಿ ಬಂದ 25 ಸಾವಿರ ರೂ. ನಗದಿಗೆ ಅಷ್ಟೇ ಮೊತ್ತವನ್ನು ಸೇರಿಸಿ ಎರಡು ಶಾಲೆಗಳಿಗೆ ದತ್ತಿ ಕೊಟ್ಟಿದ್ದಾರೆ. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯ ನೀಡಿದ್ದ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿ ಮೊತ್ತ 10 ಸಾವಿರ ರೂ.ಗೆ 15 ಸಾವಿರ ರೂ. ಸೇರಿಸಿ ಇನ್ನೊಂದು ಶಾಲೆಗೆ ದತ್ತಿ ನೀಡುವ ಮೂಲಕ ನಾರಾಯಣ ನಾಯಕರು ಆದರ್ಶ ಮೆರೆದಿದ್ದಾರೆ. ಬೆಳಗ್ಗೆ ಎಂಟು ಗಂಟೆಗೆ ಮನೆ ಬಿಡುವ ನಾರಾಯಣ ನಾಯಕ್, ರಾತ್ರಿ 8 ಸುಮಾರಿಗೆ ಮನೆಗೆ ತಲುಪುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X