Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಿಯ ಕೊಲೆಯಲ್ಲಿ ಪೊಲೀಸ್ ಅಧಿಕಾರಿಯ...

ಪತಿಯ ಕೊಲೆಯಲ್ಲಿ ಪೊಲೀಸ್ ಅಧಿಕಾರಿಯ ಕೈವಾಡ: ಮೃತ ಮನ್ಸುಖ್ ಹಿರೇನ್ ಪತ್ನಿಯ ಶಂಕೆ

ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ9 March 2021 7:49 PM IST
share
ಪತಿಯ ಕೊಲೆಯಲ್ಲಿ ಪೊಲೀಸ್ ಅಧಿಕಾರಿಯ ಕೈವಾಡ: ಮೃತ ಮನ್ಸುಖ್ ಹಿರೇನ್ ಪತ್ನಿಯ ಶಂಕೆ

ಮುಂಬೈ,ಮಾ.9: ಖ್ಯಾತ ಉದ್ಯಮಿ ಮುಕೇಶ ಅಂಬಾನಿ ಅವರ ನಿವಾಸದ ಹೊರಗೆ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿದ್ದ ಪ್ರಕರಣವೀಗ ವಾಹನದ ಮಾಲಿಕ ಮನ್ಸುಖ್ ಹಿರೇನ್ ಪತ್ನಿ ವಿಮಲಾ ಹಿರೇನ್ ತನ್ನ ಪತಿಯ ಹತ್ಯೆಯಲ್ಲಿ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ (ಎಪಿಐ) ಸಚಿನ್ ವಝೆ ಪಾತ್ರವಿರುವ ಬಗ್ಗೆ ಶಂಕೆ ವ್ಯಕ್ತಪಡಿಸುವುದರೊಂದಿಗೆ ಹೊಸ ತಿರುವನ್ನು ಪಡೆದುಕೊಂಡಿದೆ. ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದ ಮುಂದೆ ನೀಡಿರುವ ಹೇಳಿಕೆಯಲ್ಲಿ ವಿಮಲಾ,ತನ್ನ ಪತಿಯ ಸ್ಕೊರ್ಪಿಯೊ ವಾಹನವನ್ನು 2020 ನವಂಬರ್‌ನಿಂದ ಫೆ.5ರವರೆಗೆ ವಝೆ ಬಳಸುತ್ತಿದ್ದರು. ಪ್ರಕರಣದಲ್ಲಿ ಬಂಧನಕ್ಕೊಳಗಾಗುವಂತೆ ವಝೆ ತನ್ನ ಪತಿಗೆ ಸೂಚಿಸಿದ್ದರು ಮತ್ತು ಕೆಲವೇ ದಿನಗಳಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಹಿರೇನ್‌ಗೆ ಸೇರಿದ ಬೊಲೆರೊ ವಾಹನ ಫೆ.25ರಂದು ಅಂಬಾನಿಯವರ ನಿವಾಸಾ ಆ್ಯಂಟಿಲಾದ ಹೊರಗೆ ಪತ್ತೆಯಾಗಿತ್ತು ಮತ್ತು ಅದರಲ್ಲಿ ಜಿಲೆಟಿನ್ ಕಡ್ಡಿಗಳಿದ್ದವು.

ಫೆ.17ರಂದು ವಿಕ್ರೋಲಿಯಲ್ಲಿ ತನ್ನ ವಾಹನದ ಸ್ಟಿಯರಿಂಗ್ ವ್ಹೀಲ್ ಜಾಮ್ ಆಗಿದ್ದರಿಂದ ತಾನದನ್ನು ಅಲ್ಲಿಯೇ ನಿಲ್ಲಿಸಿ ಮನೆಗೆ ತೆರಳಿದ್ದೆ ಮತ್ತು ಅಲ್ಲಿಂದ ಅದನ್ನು ಯಾರೋ ಕಳವು ಮಾಡಿದ್ದರು ಎಂದು ತನಿಖೆಯ ವೇಳೆ ಹಿರೇನ್ ಪೊಲೀಸರಿಗೆ ತಿಳಿಸಿದ್ದ.

ಮಾ.4ರಂದು ರಾತ್ರಿ ಮನೆಯಿಂದ ಹೊರಗೆ ತೆರಳಿದ್ದ ಹಿರೇನ್ ವಾಪಸಾಗಿರಲಿಲ್ಲ. ಮರುದಿನ ಆತನ ಕುಟುಂಬವು ನವಪಾಡಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರನ್ನು ದಾಖಲಿಸಿತ್ತು. ಕೆಲವು ಗಂಟೆಗಳ ಬಳಿಕ ಥಾಣೆ ಜಿಲ್ಲೆಯ ಮುಂಬ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ವಾದ ರೇತಿಬಂದರ್ ಬಳಿಕ ಖಾಡಿಯಲ್ಲಿ ಹಿರೇನ್ ಮೃತದೇಹ ಪತ್ತೆಯಾಗಿತ್ತು.

ಸ್ಫೋಟಕ ಪತ್ತೆ ಪ್ರಕರಣವು ಎಸಿಪಿ ನಿತಿನ್ ಅಲಖ್ನೂರ್‌ಗೆ ಹಸ್ತಾಂತರವಾಗುವ ಮುನ್ನ ವಝೆ ತನಿಖೆಯನ್ನು ನಡೆಸುತ್ತಿದ್ದರು. ಪ್ರಕರಣವನ್ನೀಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ವಹಿಸಿಕೊಂಡಿದ್ದು,ಎಟಿಎಸ್ ಹಿರೇನ್ ಸಾವಿಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದೆ.

ವಝೆ ತನ್ನ ಪತಿಗೆ ಪರಿಚಿತರಾಗಿದ್ದರು ಮತ್ತು ಅವರು ತಮ್ಮ ಬೊಲೆರೊ ವಾಹನವನ್ನು ಬಳಸುತ್ತಿದ್ದರು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿರುವ ವಿಮಲಾ,ಅಂಬಾನಿ ನಿವಾಸದ ಹೊರಗೆ ಸ್ಫೋಟಕಗಳಿಂದ ತುಂಬಿದ್ದ ಬೊಲೆರೊ ವಾಹನ ಪತ್ತೆಯಾದ ಬಳಿಕ ಪೊಲೀಸ್ ಅಧಿಕಾರಿಗಳು ವಿಚಾರಣೆಗಾಗಿ ತಮ್ಮ ಮನೆಗೆ ಭೇಟಿ ನೀಡಲು ಆರಂಭಿಸಿದ್ದರು. ತನ್ನ ಪತಿ ಫೆ.26ರಿಂದ 28ರವರೆಗೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ವಝೆಯವರ ಜೊತೆಯಲ್ಲಿದ್ದರು. ಮಾ.2ರಂದು ವಝೆಯವರ ಸೂಚನೆಯ ಮೇರೆಗೆ ಅವರೊಂದಿಗೆ ತೆರಳಿದ್ದ ತನ್ನ ಪತಿ ಪೊಲೀಸರು ಮತ್ತು ಮಾಧ್ಯಮಗಳು ತನಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದೂರನ್ನು ದಾಖಲಿಸಿದ್ದರು ಮತ್ತು ದೂರಿನ ಪ್ರತಿಗಳನ್ನು ಮುಖ್ಯಮಂತ್ರಿ,ಗೃಹಸಚಿವರು ಹಾಗೂ ಮುಂಬೈ ಮತ್ತು ಥಾಣೆಯ ಪೊಲೀಸ್ ಆಯುಕ್ತರಿಗೆ ರವಾನಿಸಿದ್ದರು ಎಂದು ಹೇಳಿದ್ದಾರೆ.

ತಾನು ಪ್ರಶ್ನಿಸಿದಾಗ ಪೊಲೀಸರು ತನಗೆ ಯಾವುದೇ ಕಿರುಕುಳ ನೀಡಿಲ್ಲವೆಂದು ಪತಿ ಉತ್ತರಿಸಿದ್ದರು. ಮನೆಯಲ್ಲಿಯೂ ಅವರು ಸಂತೋಷದಿಂದಲೇ ಇದ್ದರು ಎಂದು ತಿಳಿಸಿರುವ ವಿಮಲಾ,ತನ್ನ ಪತಿಯನ್ನು ಕೊಲೆ ಮಾಡಲಾಗಿದೆ ಎಂದು ತಾನು ನಂಬಿದ್ದೇನೆ ಮತ್ತು ಅವರ ಹತ್ಯೆಯಲ್ಲಿ ವಝೆ ಪಾತ್ರವಿದೆ ಎಂದು ಶಂಕಿಸಿದ್ದೇನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯನ್ನು ನಡೆಸುವಂತೆ ಅವರು ಕೋರಿದ್ದಾರೆ.

ವಝೆ ಬಂಧನಕ್ಕೆ ಫಡ್ನವೀಸ್ ಆಗ್ರಹ

ಅಂಬಾನಿ ನಿವಾಸದ ಹೊರಗೆ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್‌ನ ‘ಎನ್‌ಕೌಂಟರ್ ವಿಶೇಷಜ್ಞ’ ವಝೆಯವರನ್ನು ಬಂಧಿಸುವಂತೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.

ವಿಮಲಾ ಹಿರೇನ್ ಎಟಿಎಸ್‌ಗೆ ನೀಡಿರುವ ಹೇಳಿಕೆಯನ್ನು ಸದನದಲ್ಲಿ ಓದಿದ ಅವರು,ಪ್ರಕರಣದಲ್ಲಿ ಬಂಧನಕ್ಕೊಳಗಾಗುವಂತೆ ಮತ್ತು ತಾನು ಜಾಮೀನಿನಲ್ಲಿ ಬಿಡುಗಡೆಗೊಳಿಸುವುದಾಗಿ ವಝೆ ಹಿರೇನ್‌ಗೆ ತಿಳಿಸಿದ್ದರು. ಇದನ್ನು ವಿಮಲಾ ವಿರೋಧಿಸಿದ್ದರು. ವಝೆ ಹಿರೇನ್‌ನನ್ನು ಕೊಲೆ ಮಾಡಿದ್ದಾರೆಂದು ಅವರು ಶಂಕಿಸಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X