Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತನಿಖೆಯನ್ನು 'ತಿಪ್ಪೆ ಸಾರಿಸುವ ತನಿಖೆ' ಎಂದ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ11 March 2021 2:57 PM IST
share
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತನಿಖೆಯನ್ನು ತಿಪ್ಪೆ ಸಾರಿಸುವ ತನಿಖೆ ಎಂದ ಕುಮಾರಸ್ವಾಮಿ

ಮೈಸೂರು,ಮಾ.11: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ತಿಪ್ಪೆ ಸಾರಿಸುವ ತನಿಖೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ನಗರದಲ್ಲಿರುವ ಶಾಸಕ ಸಾ.ರಾ.ಮಹೇಶ್ ಅವರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಮೇಶ್ ಜಾರಕಿ ಹೊಳಿ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮಾಡಿಸುವಂತೆ ಹೇಳುತ್ತಿದ್ದಾರೆ. ಯಾರ ವಿರುದ್ಧ ತನಿಖೆ ಮಾಡುತ್ತಾರೆ. ಎಫ್ಎಸ್ಎಲ್ ತನಿಖೆಗಳೆಲ್ಲಾ ಬೋಗಸ್ ತನಿಖೆಗಳು ಎಂದು ಕಿಡಿಕಾರಿದರು.

ಪೊಲೀಸ್ ತನಿಖೆಯಾಗಲಿ, ಯಾವುದಾದರೂ ಸಮಿತಿ ರಚನೆ ಮಾಡಿದ ತನಿಖೆಯಾಗಲಿ ಸ್ವಾತಂತ್ರ್ಯ ಬಂದಾಗಿನಿಂದ ನಡೆದ ಯಾವುದೇ ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಿಲ್ಲ. ಇದೆಲ್ಲಾ ಒಂದು ರೀತಿಯಲ್ಲಿ ತಿಪ್ಪೆ ಸಾರಿಸುವ ತನಿಖೆಗಳು ಎಂದು ಲೇವಡಿ ಮಾಡಿದರು.

ಸಿಡಿ ಭಯಲಿನ ಹಿಂದೆ ಕಾಂಗ್ರೆಸ್ ನವರು ಇದ್ದಾರೆ ಎಂಬ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಚಿವ ಸೋಮಶೇಖರ್ ಕಾಂಗ್ರೆಸ್ ನಲ್ಲೇ ಇದ್ದವರು. ಅವರಿಗೆ ಬಹುಶಃ ಸಿಡಿ ಹಿಂದೆ ಯಾರಿದ್ದಾರೆ ಎಂದು ಗೊತ್ತಿರಬಹುದು. ಅದನ್ನು ಆವರು ಬಹಿರಂಗಗೊಳಿಸಲಿ ಎಂದು ಹೇಳಿದರು.

ಆರು ಮಂದಿ ಮಹಾನುಭಾವರು ಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ನೋಡಿ ನಮಗೆ ಆಶ್ಚರ್ಯವಾಯ್ತು. ಸಚಿವರಾದವರು ನಮ್ಮ ತೇಜೋವಧೆ  ಮಾಡುವಂತಹ ಅಪಪ್ರಚಾರಗಳಿಗೆ ಅವಕಾಶ ಕೊಡಬೇಡಿ ಅಂತ ಕೇಳಿಕೊಳ್ಳಬಹುದಿತ್ತು. ಆದರೆ ನಮಗೆ ಸಂಬಂಧಪಟ್ಟ ಸಿಡಿ ವಿಚಾರ ಪ್ರಸಾರ ಮಾಡಬಾರದು ಅಂತ ಕೋರಿದ್ದಾರೆ. ಈ ವಿಚಾರವನ್ನು ವಕೀಲರಿಂದ ಕೇಳಿ ಆಶ್ಚರ್ಯವಾಯ್ತು ಎಂದರು.

ಈ ಆರು ಮಹಾನುಭಾವರು ತಮಗೆ ರಕ್ಷಣೆ ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಸಚಿವರಾಗಿದ್ದುಕೊಂಡು ತಮಗೆ ತಾವೇ ರಕ್ಷಣೆ ಮಾಡಿಕೊಳ್ಳಲಾರದವರು ರಾಜ್ಯದ ಜನರನ್ನು ಹೇಗೆ ರಕ್ಷಣೆ ಮಾಡ್ತಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಅಲ್ಲ 5 ರೂ. ಗಳನ್ನು ಕೊಡುವುದಿಲ್ಲ ಎಂದು ವಾಗ್ದಾಳಿ ನಡೆಸಿ ಕುಮಾರಸ್ವಾಮಿ, ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಬರಿ ಘೋಷಣೆಯನ್ನಷ್ಟೇ ಮಾಡಿದ್ದಾರೆ. ಯಾವ ಹಣವನ್ನು ಪ್ರತ್ಯೇಕಗೊಳಿಸಿಲ್ಲ, ಪ್ರಾಧಿಕಾರಕ್ಕೆ ಇಷ್ಟು ಅವಧಿಯೊಳಗೆ ಹಣ ನೀಡುತ್ತೇನೆ ಎಂದು ಸಹ ಹೇಳಿಲ್ಲ, ಪೇಪರ್ ನಲ್ಲಿ ಬರೆದಿರುವುದನ್ನು ಓದಿದ್ದಾರೆ ಅಷ್ಟೆ ಎಂದು ಹೇಳಿದರು.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನಂಬಿದವರೆಲ್ಲಾ ಬೆನ್ನಿಗೆ ಚಾಕು ಹಾಕುವವರೆ. ಯಾರನ್ನು ನಂಬುತ್ತಾರೊ ಅವರೆಲ್ಲಾ ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಚಾಕು ಹಾಕಿ ಹೋದವರಿಗೆ ಜನರೇ ಪಾಠ ಕಲಿಸುತ್ತಾರೆ. ಜೆಡಿಎಸ್ ಹುಟ್ಟಿದಾಗಿನಿಂದ ಇದೇ ಆಗಿದೆ. ಯಾರನ್ನು ನಂಬುತ್ತಾರೆ ಅವರೇ ಚೂರಿ ಹಾಕುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮಧು ಬಂಗಾರಪ್ಪ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ವಿಚಾರ ಕುರಿತು ಮಾತನಾಡಿದ ಕುಮಾರಸ್ವಾಮಿ, ಇದರಲ್ಲಿ ಯಾವುದೇ ವಿಶೇಷ ಇಲ್ಲ, ಒಂದು ವರ್ಷದಿಂದ ಈ ಪ್ರಕ್ರಿಯೆ ನಡೆಯತ್ತಿದೆ. ಈ ಬೆಳವಣಿಗೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ, ಇನ್ನು ಮುಂದೆ ನಿಷ್ಠೆ ಇಲ್ಲದವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದಿಲ್ಲ. ಪಕ್ಷ ನಿಷ್ಠೆ ಇಲ್ಲದವರನ್ನು ದೂರ ಇಡಲಾಗುವುದು. ಯಾರು ಪಕ್ಷ ಬಿಟ್ಟು ಹೋಗುತ್ತಾರೊ ಅವರು ಹೋಗಬಹುದು, ಜೆಡಿಎಸ್ ಗೆ ಹಳಬರು ಹೋದರೆ ಹೊಸಬರು ಬರುತ್ತಾರೆ. ಪಕ್ಷ ಬಿಡುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬುಧವಾರ ಚಾಮುಂಡಿ ಬೆಟ್ಟಕ್ಕೆ ತರಳಿ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು. ನಂತರ ನಂಜನಗೂಡಿಗೆ ತೆರಳಿ ಶ್ರೀನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯರುಗಳಾದ ಭೋಜೇಗೌಡ, ರಮೇಶ್ ಗೌಡ, ನಗರ ಜೆಡಿಎಸ್ ಅಧ್ಯಕ್ಷ ಚಲುವೇಗೌಡ, ಜೆಡಿಎಸ್ ಮುಖಂಡರುಗಳಾದ ಅಬ್ದುಲ್ಲಾ, ರವಿಕುಮಾರ್, ಪಡುವಾರಹಳ್ಳಿ ಸೋಮು, ವಿವೇಕ, ಬೀರಿಹುಂಡಿ ಬಸವಣ್ಣ, ಬೆಳವಾಡಿ ಶಿವಮೂರ್ತಿ, ಉಮಾಶಂಕರ್, ರಾಮು, ಪ್ರಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಾಸಕ ಜಿ.ಟಿ.ದೇವೆಗೌಡ ಎಲ್ಲಿದ್ದಾರೆ ಅಂತ ನನಗೆ ಗೊತ್ತಿಲ್ಲ. ಅವರು ನಮ್ಮ ಪಕ್ಷದ ಸಿಂಬಲ್‍ನಿಂದ ಗೆದ್ದಿರಬಹುದು. ಅವರು ಚುನಾವಣೆಯಲ್ಲಿ ಗೆಲ್ಲಲು ನನ್ನ ಕಾಣಿಕೆಯೂ ಇರಬಹುದು. ಆದರೆ ನಮ್ಮ ಸಭೆಗಳಿಗೆ ಬರುತ್ತಿಲ್ಲ, ನಮ್ಮ ಪಕ್ಷದ ಚಟುವಟಿಕೆಗಳಿಂದ ದೂರ ಇದ್ದಾರೆ. ಅವರು ಯಾವ ಪಾರ್ಟಿಯಲ್ಲಿದ್ದಾರೆ ಅಂತ ಅವರೇ ಹೇಳಬೇಕಿದೆ. ಈಗ ಎಲ್ಲಿದ್ದಾರೆ ಮುಂದೆ ಎಲ್ಲಿರುತ್ತಾರೆ ಅನ್ನೋದನ್ನು ಅವರೇ ಸ್ಪಷ್ಟ ಪಡಿಸಬೇಕು.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X