Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ಮರಳಿ ಐದು ವರ್ಷಗಳ ಬಳಿಕ ತನ್ನ...

ಭಾರತಕ್ಕೆ ಮರಳಿ ಐದು ವರ್ಷಗಳ ಬಳಿಕ ತನ್ನ ಹೆತ್ತ ತಾಯಿಯ ಜೊತೆ ಸೇರಿದ ಗೀತಾ

ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದ ಮೂಗ, ಕಿವುಡ ಯುವತಿ

ವಾರ್ತಾಭಾರತಿವಾರ್ತಾಭಾರತಿ11 March 2021 3:43 PM IST
share
ಭಾರತಕ್ಕೆ ಮರಳಿ ಐದು ವರ್ಷಗಳ ಬಳಿಕ ತನ್ನ ಹೆತ್ತ ತಾಯಿಯ ಜೊತೆ ಸೇರಿದ ಗೀತಾ

ಮುಂಬೈ: ಹನ್ನೊಂದು-ಹನ್ನೆರಡು ವರ್ಷದವಳಿರುವಾಗ ಆಕಸ್ಮತ್ತಾಗಿ ಭಾರತದ ಗಡಿ ದಾಟಿ ಪಾಕಿಸ್ತಾನ ಪ್ರವೇಶಿಸಿ ಅಲ್ಲಿನ ಕರಾಚಿ ರೈಲು ನಿಲ್ದಾಣದಲ್ಲಿ ಕಂಡು ಬಂದು ಅಲ್ಲಿ ಟ್ರಸ್ಟ್ ಒಂದನ್ನು ನಡೆಸುತ್ತಿರುವ ಮುಸ್ಲಿಂ ಕುಟುಂಬದ ಆಶ್ರಯ ಪಡೆದು ಕೊನೆಗೆ 2015ರಲ್ಲಿ ಭಾರತಕ್ಕೆ ಕಳುಹಿಸಲ್ಪಟ್ಟಿದ್ದ ಮೂಗ ಮತ್ತು ಕಿವುಡ ಯುವತಿ ಗೀತಾ ಕೊನೆಗೂ ಮಹಾರಾಷ್ಟ್ರದಲ್ಲಿ ತನಗೆ ಜನ್ಮ ನೀಡಿದ ತಾಯಿಯ ಬಳಿ ಸೇರಿದ್ದಾಳೆ.

ಈ ಕುರಿತು ಆಕೆಗೆ ಪಾಕಿಸ್ತಾನದಲ್ಲಿ ಆಶ್ರಯ ನೀಡಿದ್ದ ಈಧಿ ವೆಲ್ಫೇರ್ ಟ್ರಸ್ಟಿನ ಬಿಲ್ಖೀಸ್ ಈಧಿ ಮಾಹಿತಿ ನೀಡಿದ್ದಾರೆ. ಯುವತಿಯ ನಿಜನಾಮಧೇಯ ರಾಧಾ ವಾಘ್ಮರೆಯಾಗಿದ್ದು ಆಕೆಯ ತಾಯಿ ಮಹಾರಾಷ್ಟ್ರದ ನೈಗಾಂವ್ ಗ್ರಾಮದಲ್ಲಿ ಆಕೆಗೆ ದೊರಕಿದ್ದಾರೆ ಎಂದು ಬಿಲ್ಖೀಸ್ ತಿಳಿಸಿದ್ದಾರೆ.

ಹಲವಾರು ವರ್ಷಗಳ ಹಿಂದೆ ಕರಾಚಿ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಹುಡುಗಿಯನ್ನು ಬಿಲ್ಖೀಸ್ ಅವರ ಟ್ರಸ್ಟ್ ನಡೆಸುವ ಈಧಿ ಸೆಂಟರ್‍ನಲ್ಲಿ  ಆಶ್ರಯ ನೀಡಿ ಆಕೆಗೆ ಫಾತಿಮಾ ಎಂಬ ಹೆಸರಿಡಲಾಗಿತ್ತು. ಮುಂದೆ ಆಕೆ ಹಿಂದೂ ಧರ್ಮೀಯಳು ಎಂದು ತಿಳಿದ ನಂತರ ಆಕೆಗೆ ಗೀತಾ ಎಂಬ ಹೆಸರಿಡಲಾಗಿತ್ತು ಎಂದು ಬಿಲ್ಖೀಸ್ ತಿಳಿಸಿದ್ದಾರೆ.

2015ರಲ್ಲಿ ಗೀತಾಳ ಪ್ರಕರಣ ಸುದ್ದಿಯಾದಾಗ ಅಂದಿನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆಕೆಯನ್ನು ಭಾರತಕ್ಕೆ ಕರೆತರಲು ಸಹಾಯ ಮಾಡಿದ್ದರು.

ಗೀತಾ ಈಗ ನೈಗಾಂವ್ ಗ್ರಾಮದಲ್ಲಿ ತನ್ನ ತಾಯಿ ಹಾಗೂ ಕುಟುಂಬದೊಂದಿಗೆ ಇದ್ದಾಳೆ. ಆಕೆಯ ತಂದೆ ಕೆಲ ವರ್ಷಗಳ ಹಿಂದೆ ತೀರಿಕೊಂಡ ನಂತರ ಆಕೆಯ ತಾಯಿ ಮರುವಿವಾಹವಾಗಿದ್ದಾರೆ ಎಂದು ಬಿಲ್ಖೀಸ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪರ್ಭನಿ ಎಂಬಲ್ಲಿ ಗೀತಾಗೆ ಪಹಲ್ ಎಂಬ ಎನ್‍ಜಿಒ ಸಂಜ್ಞೆ ಭಾಷೆಯಲ್ಲಿ ತರಬೇತಿ ನೀಡುತ್ತಿದೆ. ಗೀತಾಳನ್ನು ಇಂದೋರ್ ಮೂಲದ ಎನ್‍ಜಿಒ ಆನಂದ್ ಸರ್ವಿಸಸ್ ಸೊಸೈಟಿಗೆ ಜುಲೈ 2020ರಲ್ಲಿ ಹಸ್ತಾಂತರಿಸಲಾಗಿತ್ತು  ಹಾಗೂ ಆ ಸಂಘಟನೆಯ  ಗ್ಯಾನೇಂದ್ರ ಪುರೋಹಿತ್ ಎಂಬವರು ಕಳೆದ ಡಿಸೆಂಬರಿನಲ್ಲಿ ಪರ್ಭನಿಗೆ ಬಂದಿದ್ದರು.  ಆಕೆಯ ರಕ್ತ ಸಂಬಂಧಿಗಳೆಂದು ಹೇಳಿಕೊಂಡ ಉತ್ತರ ಪ್ರದೇಶ, ಬಿಹಾರ, ತೆಲಂಗಾಣ ಮತ್ತು ರಾಜಸ್ಥಾನದ ಕನಿಷ್ಠ ಒಂದು ಡಜನ್ ಕುಟುಂಬಗಳ ಬಗ್ಗೆ ವಿಚಾರಿಸಲಾಗಿತ್ತು ಹಾಗೂ  ಅಂತಿಮವಾಗಿ  ಪರ್ಭಾನಿ ಜಿಲ್ಲೆಯ ಜಿಂಟೂರ್ ಎಂಬಲ್ಲಿ ವಾಸವಾಗಿದ್ದ ಮೀನಾ ವಾಘ್ಮರೆ (71) ಅವರ ಮಗಳು ರಾಧಾ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿತ್ತು. ತನ್ನ ಪುತ್ರಿಯ ಹೊಟ್ಟೆ ಭಾಗದಲ್ಲಿ ಸುಟ್ಟ ಗಾಯವಿತ್ತು ಎಂದು ಮೀನಾ ಹೇಳಿದ್ದರು ಹಾಗೂ ಗೀತಾಳನ್ನು ಪರಿಶೀಲಿಸಿದಾಗ  ಮೀನಾ  ಆಕೆಯ ತಾಯಿ ಎಂಬುದು ದೃಢಪಟ್ಟಿತ್ತು.

"ಗೀತಾಳ ತಂದೆ ಸುಧಾಕರ್ ವಾಘ್ಮರೆ ಕೆಲ ವರ್ಷಗಳ ಹಿಂದೆ ನಿಧನರಾದ ನಂತರ ಆಕೆಯ ತಾಯಿ ಈಗ ತನ್ನ ಎರಡನೇ ಪತಿಯೊಂದಿಗೆ ನೆಲೆಸಿದ್ದಾರೆ. ಇಷ್ಟು ವರ್ಷ ನಾಪತ್ತೆಯಾಗಿದ್ದ ಪುತ್ರಿಯನ್ನು ಮೊದಲ ಬಾರಿ ನೋಡಿದಾಗ ಆ ತಾಯಿಯ ಕಣ್ಣುಗಳಲ್ಲಿ ನೀರು ತುಂಬಿತ್ತು" ಎಂದು ಪುರೋಹಿತ್ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X