Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಲಿ ಸೆರೆಗೆ ಆಗ್ರಹಿಸಿ ಪೊನ್ನಂಪೇಟೆ...

ಹುಲಿ ಸೆರೆಗೆ ಆಗ್ರಹಿಸಿ ಪೊನ್ನಂಪೇಟೆ ತಾಲೂಕು ಸಂಪೂರ್ಣ ಬಂದ್: ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ ಶಾಸಕರು

ವಾರ್ತಾಭಾರತಿವಾರ್ತಾಭಾರತಿ11 March 2021 8:37 PM IST
share
ಹುಲಿ ಸೆರೆಗೆ ಆಗ್ರಹಿಸಿ ಪೊನ್ನಂಪೇಟೆ ತಾಲೂಕು ಸಂಪೂರ್ಣ ಬಂದ್: ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ ಶಾಸಕರು

ಮಡಿಕೇರಿ, ಮಾ.11: ದಕ್ಷಿಣ ಕೊಡಗಿನಲ್ಲಿ ಮೂವರು ಅಮಾಯಕರ ಸಾವಿಗೆ ಕಾರಣವಾಗಿರುವ ಹುಲಿಯನ್ನು ನಿಗ್ರಹಿಸುವಲ್ಲಿ ಸರ್ಕಾರ ವೈಫಲ್ಯ ಕಂಡಿದೆ ಎಂದು ಆರೋಪಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನೀಡಿದ ಕರೆಯಂತೆ ಗುರುವಾರ ಪೊನ್ನಂಪೇಟೆ ತಾಲೂಕಿನಲ್ಲಿ ಮಧ್ಯಾಹ್ನದವರೆಗೆ ‘ಬಂದ್’ ಸಂಪೂರ್ಣ ಯಶಸ್ವಿಯಾಯಿತು.

ಪೊನ್ನಂಪೇಟೆ ತಾಲೂಕಿನ ಪ್ರಮುಖ ವಾಣಿಜ್ಯಕ ನಗರಿ ಗೋಣಿಕೊಪ್ಪಲು ಸೇರಿದಂತೆ ನಿಟ್ಟೂರು, ಬಾಳೆಲೆ, ಶ್ರೀಮಂಗಲ, ಕುಟ್ಟ, ಟಿ.ಶೆಟ್ಟಿಗೇರಿ, ಹುದಿಕೇರಿ ವಿಭಾಗಗಳಲ್ಲಿ ಇಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟು ಸಂಪೂರ್ಣ ಬಂದ್ ನಡೆಸುವ ಮೂಲಕ ಹುಲಿ ಸೆರೆಗೆ, ಇಲ್ಲವೇ ಗುಂಡಿಕ್ಕುವುದಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು.

ಹೆಚ್ಚಿದ ಪ್ರತಿಭಟನೆಯ ಕಾವು
ಹುಲಿ ದಾಳಿಯಿಂದ ಜೀವಹಾನಿ ಸಂಭವಿಸಿದ ಬೆಳ್ಳೂರು ಗ್ರಾಮದಲ್ಲಿ ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಬಟನೆ ಮುಂದುವರಿದಿದ್ದು, ಗುರುವಾರ ಅಹೋರಾತ್ರಿ ಧರಣಿಗೆ ಮುಂದಾಗಿರುವ ಗ್ರಾಮೀಣರು, ಹುಲಿ ಸೆರೆ ಹಿಡಿಯುವ ಇಲ್ಲವೇ ಗುಂಡಿಕ್ಕುವವರೆಗೆ ಪ್ರತಿಭಟನೆ ಮುಂದುವರಿಸುವ ದೃಢ ನಿರ್ಧಾರ ಕೈಗೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 6ರಿಂದ 8 ಹುಲಿಗಳು ನಿರಂತರವಾಗಿ ಜಾನುವಾರುಗಳನ್ನು ಬೇಟೆಯಾಡುತ್ತಿದ್ದು, ಇದೀಗ ಮನುಷ್ಯರ ಸಾವಿಗೆ ಕಾರಣವಾಗುತ್ತಿದೆ. ಹೀಗಿದ್ದೂ ಕೇವಲ ಒಂದು ಹುಲಿಯನ್ನು ಹಿಡಿಯಲು ಸಾಧ್ಯವಾಗದ ಅರಣ್ಯ ಇಲಾಖೆಯ ಅಧಿಕಾರಿಗಳು ಏಕೆ ಬೇಕೆಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಹಿತ ಕಾಪಾಡುವಲ್ಲಿ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹುಲಿಯ ನಿರಂತರ ಹಾವಳಿಯಿಂದ ಪರಿಸ್ಥಿತಿ ಬಿಗಡಾಯಿಸಿದ್ದರೂ ಈ ಸರ್ಕಾರದ ಅರಣ್ಯ ಮಂತ್ರಿಗಳು ಕೇವಲ ಎಸಿ ರೂಮ್‍ನಲ್ಲಿ ಕುಳಿತು ಆಡಳಿತ ನಡೆಸುತ್ತಿದ್ದಾರೆಂದು ಟೀಕಿಸಿರುವ ಪ್ರತಿಭಟನಾಕಾರರು, ಮನುಷ್ಯರಿಗೆ ಬದುಕಲು ಬಿಡಿ ಕಾಡು ಪ್ರಾಣಿಗಳನ್ನು ಕಾಡಿಗೆ ಬಿಡಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸ್ಥಳಕ್ಕೆ ಶಾಸಕರು-ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಬೆಳ್ಳೂರಿಗೆ ತೆರಳಿ, ಪ್ರತಿಭಟನಾ ನಿರತದೊಂದಿಗೆ ಸಮಾಲೋಚನೆ ನಡೆಸುವುದರೊಂದಿಗೆ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಿದ್ದಾರೆ.

ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಜನ ಜಾನುವಾರುಗಳ ಸಾವಿಗೆ ಕಾರಣವಾಗಿರುವ ಹುಲಿ ಸೆರೆಗೆ ಅಧಿವೇಶನದ ಸಂದರ್ಭ ಸರ್ಕಾರವನ್ನು ಆಗ್ರಹಿಸಲಾಗಿದೆ. ಗ್ರಾಮೀಣರ ಬದುಕನ್ನು ಸಂಕಷ್ಟಕ್ಕೆ ದೂಡಿರುವ ಹುಲಿ ನಿಗ್ರಹದ ಗ್ರಾಮೀಣರ ಹೋರಾಟದೊಂದಿಗೆ ತಾವು ಕೂಡ ನಿಮ್ಮೊಂದಿಗೆ ಇರುವುದಾಗಿ ಸ್ಪಷ್ಟಪಡಿಸಿದರಲ್ಲದೆ, ಮೂರು ದಿವಸಗಳ ಕಾಲಾವಕಾಶ ಕೊಡಿ. ಸರಕಾರದ ಮುಂದೆ ಕಾಡು ಪ್ರಾಣಿಗಳ ಉಪಟಳ ತಡೆಗೆ ಶಾಶ್ವತ ಪರಿಹಾರದ ಬೇಡಿಕೆ ಇಟ್ಟಿದ್ದೇವೆ. ಅತೀ ಶೀಘ್ರದಲ್ಲೆ ಉತ್ತಮ ನಿರ್ಧಾರವನ್ನು ಸರಕಾರ ಕೈಗೊಳ್ಳಲಿದೆ ಎಂದರು. ಶಾಸಕ ಅಪ್ಪಚ್ಚುರಂಜನ್ ಅವರು ಕೂಡಾ ಭರವಸೆಯ ಮಾತುಗಳನ್ನಾಡಿದರು. 

ಪ್ರತಿಭಟನಾಕಾರರನ್ನು ಬೆದರಿಸಿದ ಹೆಜ್ಜೇನು
ಹುಲಿ ದಾಳಿ ನಿಗ್ರಹಕ್ಕೆ ಆಗ್ರಹಿಸಿ ಪೊನ್ನಂಪೇಟೆ ತಾಲೂಕಿನ ಬೆಳ್ಳೂರಿನಲ್ಲಿ ಪ್ರತಿಭಟನೆಗೆ ಇಳಿದಿರುವವರ ಮೇಲೆ ಹೆಜ್ಜೇನುಗಳು ಹಠಾತ್ ದಾಳಿ ನಡೆಸಿರುವ ಘಟನೆ ಗುರುವಾರ ಸಂಜೆ ನಡೆಯಿತು.

ಬೆಳ್ಳೂರು ಗ್ರಾಮದಲ್ಲಿ ಅಹೋರಾತ್ರಿ ಪ್ರತಿಭಟನೆಗೆ ಇಳಿದಿರುವ ರೈತ ಸಂಘದ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರ ಮೇಲೆ, ಅಲ್ಲೇ ಸಮೀಪದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ದಾಳಿ ನಡೆಸಿದವು.

ತಕ್ಷಣ ಎಚ್ಚೆತ್ತುಕೊಂಡ ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿಗಳು ಹೆಜ್ಜೇನುಗಳಿಂದ ಪಾರಾಗಲು ತಮ್ಮಲ್ಲಿದ್ದ ಟವೆಲ್, ಕರವಸ್ತ್ರಗಳಿಂದ ಮುಖ ಮುಚ್ಚಿಕೊಂಡು ಹೆಜ್ಜೇನು ಗೂಡು ಇದ್ದ ಪ್ರದೇಶದಿಂದ ದೂರ ಸರಿದರು. ಅಲ್ಲದೆ ವಾಹನಗಳಲ್ಲಿ ಆಶ್ರಯ ಪಡೆದರು. ಸ್ವಲ್ಪ ಹೊತ್ತಿನ ಬಳಿಕ ಹೆಜ್ಜೇನುಗಳು ಸ್ಥಳದಿಂದ ಚದುರಿದವು. ವಿವಿಧ ಸಂಘ, ಸಂಸ್ಥೆಗಳು ಹಾಗೂ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X