Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಕ್ರಮ ಹಣ, ಚಿನ್ನ ಪಾವತಿಸಿದ್ದನ್ನು ಸೂ...

ಅಕ್ರಮ ಹಣ, ಚಿನ್ನ ಪಾವತಿಸಿದ್ದನ್ನು ಸೂ ಕಿ ಒಪ್ಪಿಕೊಂಡಿದ್ದಾರೆ: ಮ್ಯಾನ್ಮಾರ್ ಸೇನೆ ಹೇಳಿಕೆ

ಸೈನಿಕರ ಗುಂಡಿಗೆ 7 ಪ್ರತಿಭಟನಾಕಾರರು ಬಲಿ

ವಾರ್ತಾಭಾರತಿವಾರ್ತಾಭಾರತಿ11 March 2021 9:47 PM IST
share
ಅಕ್ರಮ ಹಣ, ಚಿನ್ನ ಪಾವತಿಸಿದ್ದನ್ನು ಸೂ ಕಿ ಒಪ್ಪಿಕೊಂಡಿದ್ದಾರೆ: ಮ್ಯಾನ್ಮಾರ್ ಸೇನೆ ಹೇಳಿಕೆ

ಯಾಂಗನ್ (ಮ್ಯಾನ್ಮಾರ್), ಮಾ. 11: ಅಧಿಕಾರದಲ್ಲಿರುವಾಗ ಅಕ್ರಮವಾಗಿ 6 ಲಕ್ಷ ಡಾಲರ್ ನಗದು ಮತ್ತು ಚಿನ್ನವನ್ನು ಅಕ್ರಮವಾಗಿ ಪಾವತಿಸಿರುವುದನ್ನು ಮ್ಯಾನ್ಮಾರ್‌ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿ ಒಪ್ಪಿಕೊಂಡಿದ್ದಾರೆ ಎಂದು ದೇಶದ ಸೇನಾ ಸರಕಾರದ ವಕ್ತಾರರೊಬ್ಬರು ಹೇಳಿದ್ದಾರೆ.

ಈ ಮಾಹಿತಿಯ ಆಧಾರದಲ್ಲಿ ತನಿಕೆ ನಡೆಸಲಾಗಿದೆ ಹಾಗೂ ಈ ಸಂಬಂಧ ಹಲವಾರು ಮಂದಿಯನ್ನು ಪ್ರಶ್ನಿಸಲಾಗುತ್ತಿದೆ ಎಂದು ಸೇನಾ ವಕ್ತಾರ ಬ್ರಿಗೇಡಿಯರ್ ಜನರಲ್ ಝಾವ್ ಮಿನ್ ಟುನ್ ಹೇಳಿದರು.

ಅಧ್ಯಕ್ಷ ವಿನ್ ಮ್ಯಿಂಟ್ ಹಾಗೂ ಹಲವು ಸಚಿವರು ಕೂಡ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿದ ಸೇನಾ ವಕ್ತಾರ, ಚುನಾವಣೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಸೇನೆಯ ದೂರಿನ ಬಗ್ಗೆ ಕ್ರಮ ತೆಗೆದುಕೊಳ್ಳದಂತೆ ಅಧ್ಯಕ್ಷರು ದೇಶದ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಿದರು.

ಫೆಬ್ರವರಿ 1ರಂದು ಮ್ಯಾನ್ಮಾರ್ ಸೇನೆಯು ಕ್ಷಿಪ್ರಕ್ರಾಂತಿ ನಡೆಸಿ ದೇಶದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಅಂದಿನಿಂದ ಸೂ ಕಿ ಮತ್ತು ವಿನ್ ಮ್ಯಿಂಟ್ ಸೇರಿದಂತೆ ದೇಶದ ಹಿರಿಯ ನಾಗರಿಕ ನಾಯಕರನ್ನು ಜೈಲಿನಲ್ಲಿರಿಸಲಾಗಿದೆ.

ಮ್ಯಾನ್ಮಾರ್‌ನಲ್ಲಿ ಹಿಂಸೆ ಖಂಡಿಸಿದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ

ನ್ಯೂಯಾರ್ಕ್, ಮಾ. 11: ಮ್ಯಾನ್ಮಾರ್‌ನ ಸೇನಾಡಳಿತದ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿರುವವರ ವಿರುದ್ಧ ಸೇನೆ ಹರಿಯಬಿಡುತ್ತಿರುವ ಹಿಂಸೆಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಬುಧವಾರ ಖಂಡಿಸಿದೆ ಹಾಗೂ ಸಂಯಮವನ್ನು ಕಾಪಾಡಿಕೊಳ್ಳುವಂತೆ ಸೇನೆಗೆ ಕರೆ ನೀಡಿದೆ.

  ಆದರೆ, ದೇಶದ ಆಡಳಿತವನ್ನು ಸೇನೆ ತನ್ನ ವಶಕ್ಕೆ ತೆಗೆದುಕೊಂಡಿರುವುದನ್ನು ‘ಸೇನಾ ಕ್ಷಿಪ್ರಕ್ರಾಂತಿ’ ಎಂಬುದಾಗಿ ಕರೆಯಲು, ಅದನ್ನು ಖಂಡಿಸಲು ಹಾಗೂ ಸೇನೆಯ ವಿರುದ್ಧ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಬೆದರಿಸಲು ಅದು ನಿರಾಕರಿಸಿದೆ. ಈ ಕ್ರಮಗಳಿಗೆ ಚೀನಾ ಮತ್ತು ರಶ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಸೇನಾಧಿಕಾರಿಗಳ ಮಕ್ಕಳ ಮೇಲೆ ಅಮೆರಿಕ ದಿಗ್ಬಂಧನ

ಮ್ಯಾನ್ಮಾರ್‌ನಲ್ಲಿ ಸೇನಾಡಳಿತದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ದಮನ ಕಾರ್ಯಾಚರಣೆ ನಡೆಸುತ್ತಿರುವ ಸೇನೆಯ ಮೇಲೆ ಒತ್ತಡ ಹೇರುವುದಕ್ಕಾಗಿ, ಸೇನಾ ನಾಯಕ ಮಿನ್ ಆಂಗ್ ಹಲಯಂಗ್‌ರ ಇಬ್ಬರು ಮಕ್ಕಳು ಮತ್ತು ಅವರು ನಿಯಂತ್ರಿಸುತ್ತಿರುವ ಆರು ಕಂಪೆನಿಗಳ ಮೇಲೆ ಅಮೆರಿಕ ಬುಧವಾರ ದಿಗ್ಬಂಧನ ವಿಧಿಸಿದೆ.

‘‘ಮ್ಯಾನ್ಮಾರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರ ಮೇಲೆ ಸೇನೆ ನಡೆಸುತ್ತಿರುವ ಅವ್ಯಾಹತ ಹಿಂಸಾಚಾರ ಅಸ್ವೀಕಾರಾರ್ಹ’’ ಎಂದು ವಿದೇಶಿ ಸೊತ್ತುಗಳ ನಿಯಂತ್ರಣ ಕಚೇರಿಯ ನಿರ್ದೇಶಕ ಆ್ಯಂಡ್ರೀ ಗ್ಯಾಕಿ ಹೇಳಿದ್ದಾರೆ.

ಪ್ರತಿಭಟನಕಾರರ ಮೇಲೆ ಗುಂಡು: 7 ಸಾವು

ಸೇನಾಡಳಿತ ವಿರೋಧಿ ಪ್ರತಿಭಟನಕಾರರ ಮೇಲೆ ಮ್ಯಾನ್ಮಾರ್‌ನ ಭದ್ರತಾ ಪಡೆಗಳು ಗುರುವಾರ ನಡೆಸಿದ ವಿವೇಚನಾರಹಿತ ಗೋಲಿಬಾರಿನಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ನಡುವೆ, ಮ್ಯಾನ್ಮಾರ್ ಸೇನೆಯು ಶಾಂತಿಯುತವಾಗಿ ಧರಣಿ ನಡೆಸುತ್ತಿರುವ ಜನರ ವಿರುದ್ಧ ಯುದ್ಧ ಭೂಮಿಯಲ್ಲಿ ಅನುಸರಿಸಲಾಗುವ ಯುದ್ಧತಂತ್ರಗಳನ್ನು ಬಳಸುತ್ತಿದೆ ಎಂದು ಮಾನವಹಕ್ಕುಗಳ ಸಂಸ್ಥೆ ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X