Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಹ್ಮಪುತ್ರ ನದಿಗೆ ಟಿಬೆಟ್‌ನಲ್ಲಿ...

ಬ್ರಹ್ಮಪುತ್ರ ನದಿಗೆ ಟಿಬೆಟ್‌ನಲ್ಲಿ ಅಣೆಕಟ್ಟು: ಚೀನಾ ಸಂಸತ್ತು ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ11 March 2021 11:10 PM IST
share
ಬ್ರಹ್ಮಪುತ್ರ ನದಿಗೆ ಟಿಬೆಟ್‌ನಲ್ಲಿ ಅಣೆಕಟ್ಟು: ಚೀನಾ ಸಂಸತ್ತು ಅನುಮೋದನೆ

ಬೀಜಿಂಗ್, ಮಾ.11: ಬ್ರಹ್ಮಪುತ್ರ ನದಿಗೆ ಟಿಬೆಟ್‌ನಲ್ಲಿ ಜಲವಿದ್ಯುತ್ ಯೋಜನೆ ಅಣೆಕಟ್ಟು ನಿರ್ಮಿಸುವ ವಿವಾದಾತ್ಮಕ ಯೋಜನೆ ಸಹಿತ ಹಲವು ಬಿಲಿಯನ್ ಡಾಲರ್ ಮೊತ್ತದ ಯೋಜನೆಗಳ ನೀಲನಕಾಶೆ ಹೊಂದಿರುವ 14ನೇ ಪಂಚವಾರ್ಷಿಕ ಯೋಜನೆಗೆ ಚೀನಾ ಸಂಸತ್ತು ಗುರುವಾರ ಅನುಮೋದನೆ ನೀಡಿದೆ ಎಂದು ಚೀನಾದ ಸರಕಾರಿ ಮಾಧ್ಯಮ ವರದಿ ಮಾಡಿದೆ.

ಭಾರತದ ಅರುಣಾಚಲ ಪ್ರದೇಶ ಗಡಿಭಾಗಕ್ಕೆ ಸಮೀಪದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಗೆ ಭಾರತ ಆತಂಕ ವ್ಯಕ್ತಪಡಿಸಿದೆ. ಗುರುವಾರ ಮುಕ್ತಾಯಗೊಂಡ ಚೀನಾದ ಸಂಸತ್ತು ‘ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್(ಎನ್‌ಪಿಸಿ)’ನ ಅಧಿವೇಶನದಲ್ಲಿ ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ದೀರ್ಘಾವಧಿಯ ಉದ್ದೇಶದ 14ನೇ ಪಂಚವಾರ್ಷಿಕ ಯೋಜನೆ(2021-2025)ಗೆ ಅನುಮೋದನೆ ದೊರಕಿದೆ. ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್, ಪ್ರಧಾನಿ ಲಿ ಕೆಕಿಯಾನ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದ ಅಧಿವೇಶನದಲ್ಲಿ ಚೀನಾದ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದ 60 ಯೋಜನೆಗಳಿಗೆ ಅನುಮೋದನೆ ದೊರಕಿದೆ. ಈ ಯೋಜನೆಗಳ ನೀಲನಕ್ಷೆಗೆ ಕಳೆದ ವರ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಅಂಗೀಕಾರ ನೀಡಿದೆ. ಅಣೆಕಟ್ಟಿನ ನಿರ್ಮಾಣ ಕಾರ್ಯ ಈ ವರ್ಷ ಆರಂಭಿಸಲು ಅಧಿಕಾರಿಗಳು ಶ್ರಮಿಸಬೇಕು.

ಪರಿಸರದ ಮೇಲಾಗುವ ಪರಿಣಾಮದ ಮೌಲ್ಯಮಾಪನವನ್ನು ತಕ್ಷಣ ನಡೆಸಿ ಯೋಜನೆಗೆ ಸಂಬಂಧಿಸಿದ ಸಮಗ್ರ ಪೂರ್ವಸಿದ್ಧತೆಗೆ ಅನುಮೋದನೆ ಪಡೆಯಬೇಕು ಎಂದು ಟಿಬೆಟ್ ಸ್ವಾಯತ್ತ ಪ್ರದೇಶದ ಕಮ್ಯುನಿಸ್ಟ್ ಪಕ್ಷದ ಉಪಾಧ್ಯಕ್ಷರು ಸಂಸತ್ ಅಧಿವೇಶನಕ್ಕೂ ಮುನ್ನ ಹೇಳಿರುವುದಾಗಿ ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಬ್ರಹ್ಮಪುತ್ರ ನದಿಯ ಕೆಳಹರಿವಿನ ಭಾಗದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಗೆ ಭಾರತ ಮತ್ತು ಬಾಂಗ್ಲಾದೇಶ ಎತ್ತಿರುವ ಆಕ್ಷೇಪಕ್ಕೆ ಪ್ರತ್ರಿಕ್ರಿಯಿಸಿರುವ ಚೀನಾ, ಈ ಎರಡೂ ದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗಿದೆ ಎಂದು ಹೇಳಿತ್ತು. ಗಡಿರೇಖೆ ದಾಟಿ ಸಾಗುವ ನದಿಗಳ ನೀರನ್ನು ಬಳಸುವ ಹಕ್ಕು ಕೆಳಭಾಗದ ನದಿ ತೀರದ ದೇಶಗಳಿಗೆ ಇರುವುದರಿಂದ ನದಿಯ ಪಾತ್ರದ ಮೇಲ್ಭಾಗದಲ್ಲಿ ನಡೆಸಲಾಗುವ ಯಾವುದೇ ಚಟುವಟಿಕೆ ಈ ದೇಶಗಳ ಹಿತಾಸಕ್ತಿಗೆ ತೊಡಕಾಗಬಾರದು ಎಂದು ಭಾರತ ಈಗಾಗಲೇ ಆಕ್ಷೇಪ ಎತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X