Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ: 6 ದಿನಗಳಲ್ಲಿ 1 ಲಕ್ಷಕ್ಕೂ ಅಧಿಕ...

ಭಾರತ: 6 ದಿನಗಳಲ್ಲಿ 1 ಲಕ್ಷಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ಪತ್ತೆ

24 ತಾಸುಗಳಲ್ಲಿ 23,285 ಹೊಸ ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ12 March 2021 8:57 PM IST
share
ಭಾರತ:  6 ದಿನಗಳಲ್ಲಿ 1 ಲಕ್ಷಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ಪತ್ತೆ

 ಹೊಸದಿಲ್ಲಿ,ಮಾ.12: ಕಳೆದ ಆರು ದಿನಗಳಲ್ಲಿ ಭಾರತದಲ್ಲಿ ಒಟ್ಟು ಒಂದು ಲಕ್ಷಕ್ಕೂ ಅಧಿಕ ಕೊರೋನ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಶುಕ್ರವಾರ ಬೆಳಗ್ಗಿನ ತನಕ ಕಳೆದ 24 ತಾಸುಗಳಲ್ಲಿ 23,285 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು 78 ದಿನಗಳಲ್ಲೇ ಅತ್ಯಧಿಕ ಏರಿಕೆಯಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶಾದ್ಯಂತ ಈವರೆಗೆ ಕೋವಿಡ್-19 ಪ್ರಕರಣಗಳ ಸಂಖ್ಯೆ 1,13,08,446ಕ್ಕೆ ತಲುಪಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,58,306ಕ್ಕೆ ತಲುಪಿದೆ. ಕಳೆದ 24 ತಾಸುಗಳಲ್ಲಿ 117 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ದೇಶಾದ್ಯಂತ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 1,97,237ಕ್ಕೇರಿದ್ದು ಇದು ಒಟ್ಟು ಸೋಂಕಿನ ಪ್ರಕರಣಗಳ ಶೇ.1.74ರಷ್ಟಾಗಿದೆ ಇದೇ ವೇಳೆ ಚೇತರಿಕೆಯ ಪ್ರಮಾಣವು ಶೇ.96.86ಕ್ಕೆ ಕುಸಿದಿದೆ.

  ಡಿಸೆಂಬರ್‌ನಲ್ಲಿ ಪ್ರತಿ 24 ತಾಸುಗಳ ಅಂತರದಲ್ಲಿ ಸರಾಸರಿ 24,24,712 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಕಳೆದ ಆರು ದಿನಗಳಲ್ಲಿ ದೇಶದಲ್ಲಿ 1,16,758 ಪ್ರಕರಣಗಳು ದಾಖಲಾಗಿದ್ದವು.

 ಇದೇ ವೇಳೆ ಕೊರೋನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,09,53,303ಕ್ಕೇರಿದ್ದರೆ, ಸಾವಿನ ಪ್ರಕರಣಗಳ ಪ್ರಮಾಣ ಶೇ.1.40 ಆಗಿದೆ ಎಂದು ಆರೋಗ್ಯ ಸಚಿವಾಲಯ ಅಂಕಿಅಂಶಗಳು ತಿಳಿಸಿವೆ.

 ಭಾರತದ ಕೋವಿಡ್-19 ಸಂಖ್ಯೆಯು 2020ರ ಆಗಸ್ಟ್ 7ರಂದು 20 ಲಕ್ಷ, ಆಗಸ್ಟ್ 23ರಂದು 30 ಲಕ್ಷ, ಸೆಪ್ಟೆಂಬರ್ 5ರಂದು 40 ಲಕ್ಷ ಹಾಗೂ ಸೆಪ್ಟೆಂಬರ್ 16ರಂದು 50 ಲಕ್ಷದ ಗಡಿಯನ್ನು ದಾಟಿತ್ತು. ಸೆಪ್ಟೆಂಬ 28ರಂದು 60 ಲಕ್ಷ, ಅಕ್ಟೋಬರ್ 11ರಂದು 70 ಲಕ್ಷ, ಅಕ್ಟೋಬರ್ 29ರಂದು 80 ಲಕ್ಷ, ನವೆಂಬರ್ 90 ಲಕ್ಷ ಹಾಗೂ ಡಿಸೆಂಬರ್ 19ರಂದು ಒಂದು ಕೋಟಿಯ ಗಡಿಯನ್ನು ದಾಟಿತ್ತು.

ಮಹಾರಾಷ್ಟ್ರದಲ್ಲಿ 57, ಪಂಜಾಬ್ 18 ಹಾಗೂ ಕೇರಳದಿಂದ 13 ಸೇರಿದಂತೆ ಶುಕ್ರವಾರ ದೇಶಾದ್ಯಂತ 117 ಹೊಸ ಸಾವಿನ ಪ್ರಕರಣಗಳು ವರದಿಯಾಗಿವೆ.

ಈವರೆಗೆ ದೇಶಾದ್ಯಂತ 1,58,306 ಸಾವಿನ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಗರಿಷ್ಠ 52,667 ಸಾವಿನ ಪ್ರಕರಣಗಳು ವರದಿಯಾಗಿವೆ. ತಮಿಳುನಾಡು 12,535, ಕರ್ನಾಟಕ 12,381,ದಿಲ್ಲಿಯಲ್ಲಿ 10,934, ಪಶ್ಚಿಮಬಂಗಾಳ 10,286, ಉತ್ತರಪ್ರದೇಶ 8741 ಹಾಗೂ ಆಂಧ್ರಪ್ರದೇಶದಲ್ಲಿ 7,179 ಪ್ರಕರಣಗಳು ವರದಿಯಾಗಿವೆ.

ಕೋವಿಡ್-19ನಿಂದ ಮೃತಪಟ್ಟವರ ಪೈಕಿ ಶೇ.70ಕ್ಕೂ ಅಧಿಕ ಮಂದಿ ಇತರ ಅನಾರೋಗ್ಯಗಳಿಂದಲೂ ಬಳಲುತ್ತಿದ್ದರು ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X