Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾಭೋಲ್ಕರ್, ಪನ್ಸಾರೆ ಕೊಲೆ ಪ್ರಕರಣಗಳ...

ದಾಭೋಲ್ಕರ್, ಪನ್ಸಾರೆ ಕೊಲೆ ಪ್ರಕರಣಗಳ ತನಿಖೆ ವಿಳಂಬಕ್ಕೆ ಬಾಂಬೆ ಹೈಕೋರ್ಟ್ ಅಸಮಾಧಾನ

ತನಿಖೆ ಪೂರ್ಣಗೊಳಿಸಲು ಇನ್ನೂ ಎಷ್ಟು ವರ್ಷಗಳು ಬೇಕಾದೀತು ಎಂದು ಪ್ರಶ್ನಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ12 March 2021 11:35 PM IST
share
ದಾಭೋಲ್ಕರ್, ಪನ್ಸಾರೆ ಕೊಲೆ ಪ್ರಕರಣಗಳ ತನಿಖೆ ವಿಳಂಬಕ್ಕೆ ಬಾಂಬೆ ಹೈಕೋರ್ಟ್ ಅಸಮಾಧಾನ

ಮುಂಬೈ, ಮಾ.12: ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್ ಹಾಗೂ ಗೋವಿಂದ್ ಪನ್ಸಾರೆ ಅವರು ಕ್ರಮವಾಗಿ 2013 ಹಾಗೂ 2015ರಲ್ಲಿ ಹತ್ಯೆಯಾಗಿದ್ದು, ಈ ಎರಡೂ ಕೊಲೆ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ತನಿಖಾ ಸಂಸ್ಥೆಗಳಿಗೆ ಇನ್ನೂ ಎಷ್ಟು ವರ್ಷಗಳು ಬೇಕಾದೀತು ಎಂದು ಖಾರವಾಗಿ ಪ್ರಶ್ನಿಸಿದೆ.

ನ್ಯಾಯಾಧೀಶರಾದ ಎಸ್‌ಎಸ್.ಶಿಂಧೆ ಹಾಗೂ ಮನೀಶ್ ಪಿತಾಳೆ ಅವರನ್ನೊಳಗೊಂಡ ಬಾಂಬೆ ಹೈಕೋರ್ಟ್‌ನ ವಿಭಾಗೀಯ ಪೀಠ ಪನ್ಸಾರೆ ಹಾಗೂ ದಾಭೋಲ್ಕರ್ ಕುಟುಂಬಗಳ ಸದಸ್ಯರು ಸಲ್ಲಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭ ಈ ಹತ್ಯೆ ಪ್ರಕರಣಗಳ ತನಿಖೆ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

ದಾಬೋಲ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಹಾಗೂ ಪನ್ಸಾರೆ ಹತ್ಯೆ ಪ್ರಕರಣವನ್ನು ಮಹಾರಾಷ್ಟ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸುತ್ತಿದೆ.

ಸಂತ್ರಸ್ತ ಕುಟುಂಬಗಳ ಪರವಾಗಿ ವಾದಿಸಿದ ನ್ಯಾಯವಾದಿ ಅಭಯ್ ನಾವ್‌ಗೆ ಅವರು, ಕರ್ನಾಟಕದಲ್ಲಿ 2017ರಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಈಗಾಗಲೇ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ದಾಖಲಿಸಿದೆ ಎಂದರು.

ದಾಬೋಲ್ಕರ್ ಹಾಗೂ ಪನ್ಸಾರೆ ಕೊಲೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠವು, ‘‘ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ, ತನಿಖೆಯು ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದನ್ನು ತಿಳಿಯುವ ಹಕ್ಕನ್ನು ದೇಶದ ಜನತೆ ಹೊಂದಿದ್ದಾರೆ. ಈ ಕೊಲೆ ಘಟನೆಗಳು 2013 ಹಾಗೂ 2015ರಲ್ಲಿ ನಡೆದಿವೆ. ಈಗ ನಾವು 2021ನೇ ಇಸವಿಯಲ್ಲಿದ್ದೇವೆ. ಇದು (ತನಿಖೆ) ಹೀಗೆ ಎಷ್ಟು ಸಮಯ ಸಾಗಲಿದೆ? ಎಂದು ಪ್ರಶ್ನಿಸಿದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಪ್ರಸ್ತಾವಿಸಿದ ನ್ಯಾಯಪೀಠವು ‘‘ಕರ್ನಾಟಕದಲ್ಲಿ ನಡೆದಂತಹ ಇದೇ ರೀತಿಯ ಘಟನೆಯ ನ್ಯಾಯಾಂಗ ವಿಚಾರಣೆಯು ಈಗಾಗಲೇ ಆರಂಭಗೊಂಡಿದೆ. ಆದರೆ ಮಹಾರಾಷ್ಟ್ರದಲ್ಲಿ ತನಿಖೆ ಯಾವಾಗ ಪೂರ್ಣಗೊಳ್ಳುವುದೆಂಬ ಬಗ್ಗೆ ಸ್ಪಷ್ಟವಾಗಿ ತಿಳಿದುಬರುತ್ತಿಲ್ಲ’’ ಎಂದರು.

ಸಿಬಿಐ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಮಾತನಾಡಿ, “ತನಿಖೆಯ ಪ್ರಗತಿಯ ವರದಿಗಳನ್ನು ತನಿಖಾ ಸಂಸ್ಥೆಗಳು ಈಗಾಗಲೇ ಸಲ್ಲಿಸಿವೆ. ಆದರೂ, ಕೊಲೆಗೆ ಬಳಸಲಾದ ಆಯುಧವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ’’ ಎಂದು ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ‘‘ನಾವು ಸಂಸ್ಥೆಗಳ ಕಾರ್ಯದಕ್ಷತೆಯನ್ನು ಸಂದೇಹಿಸುತ್ತಿಲ್ಲ. ಆದರೆ ಈ ಪ್ರಕರಣಗಳ ತನಿಖೆಯು ತಾರ್ಕಿಕ ನಿರ್ಣಯವನ್ನು ತಲುಪುವ ಅಗತ್ಯವಿದೆ’’ ಎಂದಿತು.

ಮುಂದಿನ ಆಲಿಕೆಯನ್ನು ಮಾರ್ಚ್ 30ಕ್ಕೆ ಮುಂದೂಡಿದ ನ್ಯಾಯಪೀಠವು, ತನಿಖೆ ಪೂರ್ತಿಯಾಗಲು ಇನ್ನೂ ಹೆಚ್ಚು ಸಮಯ ಬೇಕಾಗುತ್ತದೆ ಎಂಬ ಬಗ್ಗೆ ಸ್ಪಷ್ಟ ಹಾಗೂ ದೃಢವಾದ ಸೂಚನೆಗಳನ್ನು ಪಡೆದುಕೊಳ್ಳುವಂತೆ ಸಿಬಿಐ ಹಾಗೂ ಸಿಐಡಿ ನ್ಯಾಯವಾದಿಗಳಿಗೆ ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X