Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ನಿಂದ...

"ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ನಿಂದ ನಿಮಗೆ ಬೇಕಾದ ಮಾಹಿತಿಯನ್ನು ಮಾತ್ರ ಹೇಗೆ ಸಂಗ್ರಹಿಸುತ್ತೀರಿ?"

ವಕೀಲ ಮೆಹಮೂದ್ ಪ್ರಾಚಾ ಕಚೇರಿ ದಾಳಿ ಪ್ರಕರಣದಲ್ಲಿ ಪೊಲೀಸರನ್ನು ಪ್ರಶ್ನಿಸಿದ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 March 2021 1:23 PM IST
share
ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ನಿಂದ ನಿಮಗೆ ಬೇಕಾದ ಮಾಹಿತಿಯನ್ನು ಮಾತ್ರ ಹೇಗೆ ಸಂಗ್ರಹಿಸುತ್ತೀರಿ?

ಹೊಸದಿಲ್ಲಿ: ವಕೀಲ ಮೆಹಮೂದ್ ಪ್ರಾಚಾ ಅವರ ಇತರ ಕಕ್ಷಿಗಾರರ ಮಾಹಿತಿ ಬಹಿರಂಗಗೊಳ್ಳದ ರೀತಿಯಲ್ಲಿ ಅವರ ಪೆನ್ ಡ್ರೈವ್‍ ಹಾಗೂ ಹಾರ್ಡ್‌ ಡಿಸ್ಕ್‌ ನಿಂದ ಅಗತ್ಯ ಡಾಟಾ ಹೊರತೆಗೆಯುವ ಪ್ರಕ್ರಿಯೆಯನ್ನು ಹೇಗೆ ಮಾಡುವಿರಿ ಎಂದು ದಿಲ್ಲಿಯ ನ್ಯಾಯಾಲಯ ಶುಕ್ರವಾರ ಪೊಲೀಸರನ್ನು ಕೇಳಿದೆ. ಈ ಕುರಿತಂತೆ ಮಾರ್ಚ್ 19ರೊಳಗಾಗಿ  ಪ್ರತಿಕ್ರಿಯೆ ಸಲ್ಲಿಸುವಂತೆ ದಿಲ್ಲಿ ಪೊಲೀಸರಿಗೆ  ಪಟಿಯಾಲಾದ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಶರ್ಮ ಸೂಚಿಸಿದ್ದಾರೆ.

ರಾಜಧಾನಿಯಲ್ಲಿ ಕಳೆದ ವರ್ಷದ ಫೆಬ್ರವರಿಯಲ್ಲಿ ಸಂಭವಿಸಿದ ಕೋಮು ಹಿಂಸಾಚಾರದಲ್ಲಿ ಆರೋಪಗಳನ್ನು ಎದುರಿಸುತ್ತಿರುವ  ಹಲವರ ವಕೀಲರಾಗಿರುವ ಪ್ರಾಚಾ ಅವರು ದಿಲ್ಲಿ ಪೊಲೀಸರು  ತಮ್ಮ ಕಚೇರಿಗೆ ದಾಳಿ ನಡೆಸಿದ ಸರ್ಚ್ ವಾರಂಟ್‍ಗಳನ್ನು  ಪ್ರಶ್ನಿಸಿ ಮಾರ್ಚ್ 10ರಂದು ನ್ಯಾಯಾಲಯದ ಕದ ತಟ್ಟಿದ್ದರು. ಮಾರ್ಚ್ 12ರ ತನಕ ಸರ್ಚ್ ವಾರಂಟ್‍ಗಳಿಗೆ ಕೋರ್ಟ್ ತಡೆಯಾಜ್ಞೆ ವಿಧಿಸಿದೆ. ಡಿಸೆಂಬರ್ ತಿಂಗಳಲ್ಲೂ ಪೊಲೀಸರು ಪ್ರಾಚಾ ಅವರ ಕಚೇರಿಯಲ್ಲಿ ಶೋಧಿಸಿದ್ದರು.

ಶುಕ್ರವಾರದ ವಿಚಾರಣೆ ವೇಳೆ ನ್ಯಾಯಾಲಯವು ಪ್ರಾಚಾ ಅವರ ಕಕ್ಷಿಗಾರರ ಕುರಿತ ಮಾಹಿತಿಯ ಗೌಪ್ಯತೆಯನ್ನು ರಕ್ಷಿಸುವ ಅನಿವಾರ್ಯತೆ ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 126 ಅನ್ವಯ ಅನಿವಾರ್ಯವಾಗಿದೆ ಎಂದು  ಹೇಳಿದೆಯಲ್ಲದೆ ಪ್ರಾಚಾ ಅವರು  ಪೊಲೀಸರು ತಮ್ಮ ಸರ್ಚ್ ವಾರಂಟ್‍ನಲ್ಲಿ ಉಲ್ಲೇಖಿಸಿರುವಂತೆ ಅಗತ್ಯ ಮಾಹಿತಿ ನೀಡಲು ಒಪ್ಪಿರುವುದನ್ನೂ ಪರಿಗಣನೆಗೆ ತೆಗೆದುಕೊಂಡಿದೆ.

ತಮ್ಮ ಕಂಪ್ಯೂಟರ್‍ಗಳ ಹಾರ್ಡ್ ಡಿಸ್ಕ್ ಗಳನ್ನು ಕೊಂಡೊಯ್ಯುವ ಪೊಲೀಸರ ನಿರ್ಧಾರ ಅಕ್ರಮ ಹಾಗೂ ಅಸಮರ್ಥನೀಯ ಎಂದು ಪ್ರಾಚಾ ತಮ್ಮ ಅಪೀಲಿನಲ್ಲಿ ಹೇಳಿದ್ದು ಪೊಲೀಸರು ಕೇಳಿದ ಮಾಹಿತಿ ಈಗಾಗಲೇ ಅವರಿಗೆ ಹಿಂದಿನ (ಡಿಸೆಂಬರ್) ಕ್ರಮದ ವೇಳೆ ದೊರಕಿದೆ" ಎಂದು ಹೇಳಿದ್ದಾರೆ. ತಮ್ಮ ಕಂಪ್ಯೂಟರ್ ನ ಹಾರ್ಡ್ ಡಿಸ್ಕ್ ನಿಂದ ಅಗತ್ಯ ಮಾಹಿತಿಯನ್ನು ಮಾತ್ರ ಮ್ಯಾಜಸ್ಟ್ರೇಟ್ ಸಮ್ಮುಖ ಪಡೆಯಬೇಕು. ಇಡೀ ಹಾರ್ಡ್ ಡಿಸ್ಕ್ ನಲ್ಲಿನ ಮಾಹಿತಿ  ಪಡೆಯುವುದಕ್ಕೆ ತಮ್ಮ ವಿರೋಧವಿದೆ ಎಂದು ಅವರು ಹೇಳಿದ್ದಾರಲ್ಲದೆ, "ಪೊಲೀಸರಿಗೆ ನನ್ನ ಕಕ್ಷಿಗಾರರನ್ನು ಟಾರ್ಗೆಟ್ ಮಾಡುವುದು ಬೇಕಿದೆ ಹಾಗೂ ಅವರು ತಮ್ಮ ರಾಜಕೀಯ ಮಾಲಕರ ಆಜ್ಞೆಯಂತೆ ನಡೆಯುತ್ತಿದ್ದಾರೆ" ಎಂದು  ತಮ್ಮ ವಾದ ಮಂಡನೆ ವೇಳೆ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X