Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶ್ಲೀಲ ಸಿಡಿ ಪ್ರಕರಣ: ಅನಾಮಿಕರ ವಿರುದ್ಧ...

ಅಶ್ಲೀಲ ಸಿಡಿ ಪ್ರಕರಣ: ಅನಾಮಿಕರ ವಿರುದ್ಧ ರಮೇಶ್ ಜಾರಕಿಹೊಳಿ ದೂರು; ಎಫ್‍ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ13 March 2021 5:19 PM IST
share
ಅಶ್ಲೀಲ ಸಿಡಿ ಪ್ರಕರಣ: ಅನಾಮಿಕರ ವಿರುದ್ಧ ರಮೇಶ್ ಜಾರಕಿಹೊಳಿ ದೂರು; ಎಫ್‍ಐಆರ್ ದಾಖಲು

ಬೆಂಗಳೂರು, ಮಾ.13: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದ ವಿಚಾರಣೆಯನ್ನು ಸಿಟ್(ಎಸ್‍ಐಟಿ) ನಡೆಸುತ್ತಿರುವ ಬೆನ್ನಲ್ಲೇ ಮೊದಲ ಬಾರಿಗೆ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದ್ದು, ಕೃತ್ಯ ನಡೆಸಿರುವ ವ್ಯಕ್ತಿಗಳ ಹೆಸರು, ವಯಸ್ಸು ಸೇರಿದಂತೆ ಯಾವುದೇ ರೀತಿಯ ಮಾಹಿತಿ ಉಲ್ಲೇಖಿಸಿಲ್ಲ.

ಶನಿವಾರ ಸದಾಶಿವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಅವರ ಆಪ್ತ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಾಗರಾಜ್ ಅವರು ಎರಡು ಪುಟಗಳ ದೂರು ಸಲ್ಲಿಸಿದರು.

ಇದರಲ್ಲಿ ನಕಲಿ ಸಿಡಿ ಸೃಷ್ಟಿಸಿ ಬೆದರಿಕೆವೊಡ್ಡಿರುವುದಲ್ಲದೆ, ತೇಜೋವಧೆಗೆ ಯತ್ನಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ದೂರಿನ ಬಗ್ಗೆ ಠಾಣೆಯ ಇನ್‍ಸ್ಪೆಕ್ಟರ್, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಪರಿಶೀಲನೆ ಪ್ರಕ್ರಿಯೆ ಮುಗಿಸಿದ ಠಾಣಾಧಿಕಾರಿ ಸಂಜೆ ವೇಳೆಗೆ ಎಫ್‍ಐಆರ್ ದಾಖಲು ಮಾಡಿದರು.

ಎಫ್‍ಐಆರ್ ನಲ್ಲಿ ಏನಿದೆ?: ‘ನನ್ನ(ರಮೇಶ್ ಜಾರಕಿಹೊಳಿ) ವಿರುದ್ಧವಾಗಿ ರಾಜಕೀಯವಾಗಿ ತೇಜೋವಧೆ ಮಾಡಲು, ರಾಜಕೀಯವಾಗಿ ಮುಗಿಸಲು ಹಾಗೂ ಹಣ ವಸೂಲಿ ಮಾಡಲು ಒಂದು ಷ್ಯಡಂತ್ರ ರೂಪಿಸಿದ್ದಾರೆ. ಸುಮಾರು 3 ತಿಂಗಳಿನಿಂದ ಸದಾಶಿವನಗರದಲ್ಲಿ ನನ್ನ ವಿರುದ್ಧ ಮಸಲತ್ತು ಹಾಗೂ ಮೋಸ ಮಾಡಿ ಒಂದು ನಕಲಿ ಸಿಡಿಯನ್ನು ಸೃಷ್ಟಿಸಿ ಮಾನಸಿಕವಾಗಿ ಹಿಂಸೆಯನ್ನು ನೀಡಿದ್ದಾರೆ.

ಜತೆಗೆ, ರಾಜಕೀಯವಾಗಿ ಮಾನಹಾನಿ ಮಾಡಿ ನನ್ನಿಂದ ಹಣವನ್ನು ಪಡೆಯಲು ಪ್ರತ್ನಿಸುತ್ತಿದ್ದಾರೆ. ಇದರ ಹಿಂದೆ ಹಲವಾರು ಜನರಿದ್ದು, ಕೆಲವರು ಷ್ಯಡಂತ್ರ ರಚಿಸಿ, ಇನ್ನು ಕೆಲವರು ಸಿಡಿ ತಯಾರಿಸಲು ಭಾಗಿಯಾಗಿ ಇತರರನ್ನು ಬಳಸಿಕೊಂಡು ಅಂತರ್ಜಾಲಗಳ ಮೂಲಕ ಬಿಡುಗಡೆ ಮಾಡಿ ರಾಜಕೀಯ ಅಸ್ಥಿರತೆಯನ್ನು ಉಂಟು ಮಾಡುತ್ತಿದ್ದಾರೆ. ಈ ಸಂಬಂಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿರುವ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು, ದೂರಿನನ್ವಯ ಐಪಿಸಿ 1860 ಅನ್ವಯ 120ಬಿ, 385, 465(ಫೋರ್ಜರಿ), 469(ಫೋರ್ಜರಿ ದಾಖಲೆ ಸೃಷ್ಟಿಸಿ ವ್ಯಕ್ತಿಯೊಬ್ಬರ ಗೌರವಕ್ಕೆ ಧಕ್ಕೆ ತರುವುದು) ಸೆಕ್ಷನ್‍ಗಳನ್ನು ಎಫ್‍ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲರಿಗೂ ಬೆದರಿಕೆ: ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅಧಿಕೃತವಾಗಿ ನಾನು ದೂರು ನೀಡಿದ್ದೇನೆ. ನನಗೊಬ್ಬನಿಗೆ ಮಾತ್ರವಲ್ಲ, ಎಲ್ಲರಿಗೂ ಬೆದರಿಕೆ ಹಾಕಲಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಅವರ ಸೂಚನೆಯಂತೆ ದೂರು ಕೊಟ್ಟಿದ್ದೇನೆ. ಇದೊಂದು ರಾಜಕೀಯ ಷಡ್ಯಂತ್ರವಾಗಿದ್ದು, ಯಶವಂತಪುರದಲ್ಲಿಯೇ ನನ್ನ ವಿರುದ್ಧ ಮಸಲತ್ತು ಹೂಡಲಾಗಿದೆ ಎಂದು ಆರೋಪಿಸಿದರು.

ನಾನೊಬ್ಬನೇ ಬಲಿಪಶು ಅಲ್ಲ, ಎಲ್ಲರಿಗೂ ಬೆದರಿಕೆ ಹಾಕಲಾಗಿದೆ ಎಂದ ಅವರು, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಕೊನೆಯವರೆಗೂ ಕಾನೂನು ಹೋರಾಟ ಮಾಡುತ್ತೇನೆ, ಕಾನೂನು ಪ್ರಕಾರವೇ ಮುಂದುವರಿಯುತ್ತೇವೆ ಎಂದು ರಮೇಶ್ ಜಾರಕಿಹೊಳಿ ನುಡಿದರು.

ಇಂದಿನಿಂದ ಸಿಡಿ ವಿಚಾರದಲ್ಲಿ ಕಾನೂನು ಹೋರಾಟ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ತನಿಖೆಯ ಮಾಹಿತಿ ಸಿಗಲಿದೆ. ಸುಲಿಗೆ ಬಗ್ಗೆ ನಾನು ಏನೂ ಹೇಳಲ್ಲ. ಮುಂದಿನ ದಿನಗಳಲ್ಲಿ ಎಲ್ಲರ ಹೆಸರು ಬಹಿರಂಗಪಡಿಸುತ್ತೇನೆ. ಅಲ್ಲದೆ, ಆ ಮಹಾನಾಯಕನ ಹೆಸರನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ. ಇದರ ಹಿಂದೆ ನೂರಾರು ಕೋಟಿ ಷಡ್ಯಂತ್ರ ಇರುವುದು ಸತ್ಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X