Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಲಿ ದಾಳಿಗೆ ಮತ್ತೊಂದು ಹಸು ಬಲಿ:...

ಹುಲಿ ದಾಳಿಗೆ ಮತ್ತೊಂದು ಹಸು ಬಲಿ: ಪ್ರತಿಭಟನೆ ತೀವ್ರ, ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ13 March 2021 6:16 PM IST
share
ಹುಲಿ ದಾಳಿಗೆ ಮತ್ತೊಂದು ಹಸು ಬಲಿ: ಪ್ರತಿಭಟನೆ ತೀವ್ರ, ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ

ಮಡಿಕೇರಿ, ಮಾ.13: ಮೂರು ಮಾನವ ಜೀವ ಬಲಿ ಪಡೆದ ಹುಲಿ ಸೆರೆ ಕಾರ್ಯಾಚರಣೆ ವಿಫಲವಾಗುತ್ತಿರುವ ಬೆನ್ನಲ್ಲೇ ವ್ಯಾಘ್ರನ ದಾಳಿಗೆ ಹಸುಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇದೆ.

ಶ್ರೀಮಂಗಲ ಹೋಬಳಿ ನೆಮ್ಮಲೆ ಗ್ರಾಮದ ಮಾಣಿರ ಪೂಣಚ್ಚ ಅವರಿಗೆ ಸೇರಿದ ಹಸುವನ್ನು ಹುಲಿಯೊಂದು ಕೊಂದು ಹಾಕಿದ್ದು, ದೇಹದ ಬಹುಭಾಗವನ್ನು ತಿಂದು ಹಾಕಿದೆ. ಕಟ್ಟಿ ಹಾಕಿದ್ದ ಹಸು ಕಳೆದ ಎರಡು, ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹುಡುಕುತ್ತಿದ್ದಾಗ ಶನಿವಾರ ಕಳೇಬರ ಕಂಡು ಬಂದಿದೆ.

ಪ್ರತಿಭಟನೆ ತೀವ್ರ
ಅತ್ತ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆ ಫಲಪ್ರದವಾಗುತ್ತಿಲ್ಲ. ಇತ್ತ ಹುಲಿಯ ಹಾವಳಿಯೂ ಕಡಿಮೆಯಾಗಿಲ್ಲ. ಇದರಿಂದ ಬೇಸತ್ತಿರುವ ದಕ್ಷಿಣ ಕೊಡಗಿನ ಶ್ರೀಮಂಗಲ ಹೋಬಳಿಯ ರೈತರು ಹಾಗೂ ಸಾರ್ವಜನಿಕರ ತಾಳ್ಮೆಯ ಕಟ್ಟೆ ಒಡೆಯಲಾರಂಭಿಸಿದೆ. ಹುಲಿಯನ್ನು ಸೆರೆ ಹಿಡಿಯವಂತೆ ಇಲ್ಲವೇ ಗುಂಡಿಕ್ಕುವಂತೆ ಒತ್ತಾಯಿಸಿ ಬುಧವಾರ ಮತ್ತಿಗೋಡುವಿನಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದ ವಿವಿಧ ಸಂಘಟನೆಗಳ ಪ್ರಮುಖರು ಅರಣ್ಯ ಇಲಾಖೆಗೆ ನೀಡಿದ್ದ 48 ಗಂಟೆಗಳ ಗಡುವು ಶುಕ್ರವಾರ ಸಂಜೆಗೆ ಕೊನೆಗೊಂಡಿದೆ. ಈ ಹಿನ್ನೆಲೆಯಲ್ಲಿ  ಬೆಳ್ಳೂರು ಗ್ರಾಮದಲ್ಲಿ ನಡೆಯುತ್ತಿರುವ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹವೂ ಮುಂದುವರಿದಿದೆ.

ಇದೀಗ ಹುಲಿ ದಾಳಿಗೆ ಮತ್ತೆ ಎರಡು ಜಾನುವಾರುಗಳು ಬಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಗುಂಡಿಕ್ಕಿ ಸಾಯಿಸಬೇಕೆಂಬ ಒತ್ತಾಯ ಬಲವಾಗುತ್ತಿದೆ. ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಶನಿವಾರ ನಡೆದ ಪ್ರತಿಭಟನೆಯಲ್ಲಿ ಶ್ರೀಮಂಗಲದ ಕೊಡವ ಸಮಾಜದ ಸದಸ್ಯರು, ಶಾಲಾ ವಿದ್ಯಾರ್ಥಿಗಳೂ ಪಾಲ್ಗೊಂಡಿದ್ದರು. ರವಿವಾರ ಕೂಡ ವಿವಿಧ ಗ್ರಾಮಗಳ ಗ್ರಾಮಸ್ಥರ ಜೊತೆಗೆ ಬಿರುನಾಣಿಯ ರೈತರು, ಸಾರ್ವಜನಿಕರು, ಬೆಳೆಗಾರರು, ವರ್ತಕರು ಹಾಗೂ ವಿದ್ಯಾರ್ಥಿಗಳೂ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಡಿಸಿ ಕಚೇರಿಗೆ ಮುತ್ತಿಗೆ
ಹುಲಿಯ ಅಟ್ಟಹಾಸ ನಿಗ್ರಹಕ್ಕೆ ಅರಣ್ಯ ಇಲಾಖೆ ಮುಂದಿನ 24 ಗಂಟೆಗಳಲ್ಲಿ ವಿಫಲವಾದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X