Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ವಿರುದ್ದ ಮತ ಹಾಕಿ: ಪ. ಬಂಗಾಳ...

ಬಿಜೆಪಿ ವಿರುದ್ದ ಮತ ಹಾಕಿ: ಪ. ಬಂಗಾಳ ಕಿಸಾನ್ ಮಹಾಪಂಚಾಯತ್ ನಲ್ಲಿ ಟಿಕಾಯತ್ ಕರೆ

ಮೇಧಾ ಪಾಟ್ಕರ್ ಅವರೊಂದಿಗೆ ವೇದಿಕೆ ಹಂಚಿಕೊಂಡ ರೈತ ಮುಖಂಡ

ವಾರ್ತಾಭಾರತಿವಾರ್ತಾಭಾರತಿ13 March 2021 7:50 PM IST
share
ಬಿಜೆಪಿ ವಿರುದ್ದ ಮತ ಹಾಕಿ: ಪ. ಬಂಗಾಳ ಕಿಸಾನ್ ಮಹಾಪಂಚಾಯತ್ ನಲ್ಲಿ ಟಿಕಾಯತ್ ಕರೆ

ಕೋಲ್ಕತಾ: ಬಿಜೆಪಿಗೆ ಮತ ಹಾಕಲೇ ಬೇಡಿ ಎಂದು ಪಶ್ಚಿಮಬಂಗಾಳದ ರಾಜಧಾನಿಯಲ್ಲಿ ಶನಿವಾರ ನಡೆದ ‘ಕಿಸಾನ್ ಮಹಾಪಂಚಾಯತ್’ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ತನ್ನ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಮುಂಬರುವ ಪಶ್ಚಿಮಬಂಗಾಳದ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ. ಬಿಜೆಪಿಯನ್ನು ಸೋಲಿಸಬಲ್ಲ ಅಭ್ಯರ್ಥಿಗೆ ಮತ ಹಾಕಿ. ಹೀಗೆ ಮಾಡಿದರೆ ಕೇಂದ್ರ ಸರಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕಾದ ಒತ್ತಡಕ್ಕೆ ಸಿಲುಕುತ್ತದೆ ಎಂದ ಟಿಕಾಯತ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಲಿಗೆ ಗಾಯವಾಗಲು ಬಿಜೆಪಿಯೇ ಕಾರಣ ಎಂದು ದೂರಿದರು.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಾದ ಯಧುವೀರ್ ಸಿಂಗ್ ಸಹಿತ ಹಲವು ನಾಯಕರು ಶನಿವಾರ ಕೋಲ್ಕತಾದಲ್ಲಿ ನಡೆದಿದ್ದ ‘ಕಿಸಾನ್ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದರು. ರೈತ ನಾಯಕರು ರವಿವಾರದಂದು ಸಿಂಗ್ರೂರ್ ಹಾಗೂ ಅಸನೋಲ್ ನಲ್ಲಿಯೂ ಇದೇ ರೀತಿಯ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ.

ಬಿಜೆಪಿ ವಿರುದ್ದ ಪ್ರಚಾರ ನಡೆಸಲು 40ಕ್ಕೂ ಅಧಿಕ ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಸಾರ್ವಜನಿಕ ಸಭೆಗಳನ್ನು  ನಡೆಸುವ ಯೋಜನೆ ಹಾಕಿಕೊಂಡಿದೆ.

ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಕೂಡ ರೈತ ನಾಯಕರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ನಂದಿಗ್ರಾಮ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೆ ನಿಮ್ಮ ಭೂಮಿಯನ್ನು ವಿಭಜಿಸುತ್ತದೆ ಎಂದು ಅವರು ಎಚ್ಚರಿಸಿದರು.

ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯ ಹೆಸರನ್ನು ಎತ್ತದೆ ಮಾತನಾಡಿದ ಟಿಕಾಯತ್, ರಾಜಕೀಯ ನಾಯಕರು ಚನಾವಣೆಗಿಂತ ಮೊದಲು ಪಕ್ಷಾಂತರವಾಗುವುದನ್ನುಟೀಕಿಸಿದರು.

ನಾವು ನಂದಿಗ್ರಾಮಕ್ಕೆ ತೆರಳಿ ಸರಕಾರವು ತಮ್ಮ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಕೊಟ್ಟು ಖರೀದಿಸುತ್ತಿಲ್ಲ ಎಂದು ಜನರಿಗೆ ತಿಳಿಸುತ್ತೇವೆ. ಇಡೀ ದೇಶವನ್ನು ಲೂಟಿ ಮಾಡುತ್ತಿರುವ ಬಿಜೆಪಿಗೆ ಮತ ಹಾಕಬೇಡಿ ಎಂದು ನಾವು ಮನವಿ ಮಾಡುತ್ತೇವೆ ಎಂದು ಟಿಕಾಯತ್ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X