Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ರಾಜ್ಯ...

ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ರಾಜ್ಯ ಸರಕಾರದ ದಾಳಿ: ವ್ಯಾಪಕ ಆಕ್ರೋಶ

ಸೊಸೈಟಿಗಳ ನೋಂದಣಿ ತಿದ್ದುಪಡಿ ವಿಧೇಯಕ ಮಂಡಿಸಲು ಮುಂದಾದ ಸರಕಾರ

-ಅಮ್ಜದ್ ಖಾನ್ ಎಂ.-ಅಮ್ಜದ್ ಖಾನ್ ಎಂ.13 March 2021 8:05 PM IST
share
ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ರಾಜ್ಯ ಸರಕಾರದ ದಾಳಿ: ವ್ಯಾಪಕ ಆಕ್ರೋಶ

ಬೆಂಗಳೂರು, ಮಾ.13: ರಾಜ್ಯ ಸರಕಾರವು ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ ಎಂಬ ಆರೋಪಗಳ ಮಧ್ಯೆಯೇ, ಅಲ್ಪಸಂಖ್ಯಾತರ ಸಂಘ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಸ್ತಾವ ಹೊಂದಿರುವ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ವಿಧೇಯಕ 2021ಅನ್ನು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಮುಂದಾಗಿದ್ದು, ಸರಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಲ್ಪಸಂಖ್ಯಾತರ ಸಂಘ ಸಂಸ್ಥೆಗಳಿಗೆ ರಾಜ್ಯ ಸರಕಾರ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನ ಬಾಹಿರ ಎಂದು 1987ರಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರಿಪಡಿಸುವ ಹೆಸರಿನಲ್ಲಿ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ಸೆಕ್ಷನ್ 27(ಎ)ಗೆ ತಿದ್ದುಪಡಿ ತರಲು ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ(ಮಾ.15) ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ವಿಧೇಯಕ 2021 ಅನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಸಾಮಾನ್ಯ ಸೊಸೈಟಿಗಳು ಮತ್ತು ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯ ತೆಗೆದು ಹಾಕಲು ಮತ್ತು ಹೆಚ್ಚಿನ ವ್ಯಾಜ್ಯಗಳನ್ನು ತಪ್ಪಿಸುವುದು ಈ ತಿದ್ದುಪಡಿ ವಿಧೇಯಕದ ಉದ್ದೇಶ ಎಂದು ರಾಜ್ಯ ಸರಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.

ವಿಧೇಯಕದಲ್ಲಿ ಏನಿದೆ?: ಅಲ್ಪಸಂಖ್ಯಾತರಿಗೆ ಸೇರಿದ ಅಥವಾ ಅನ್ಯಥಾ ಯಾವುದೇ ಸೊಸೈಟಿಯು, ವ್ಯಾಜ್ಯವು ಬಾಕಿಯಿರುವ ಕಾರಣದಿಂದಾಗಿ ಅಥವಾ ಅನ್ಯಥಾ ವಾರ್ಷಿಕ ಮಹಾಸಭೆಯನ್ನು ನಡೆಸಿಲ್ಲದಿದ್ದರೆ ಅಥವಾ ನಡೆಸಲು ಅಸಮರ್ಥವಾದರೆ, ಅಲ್ಪಸಂಖ್ಯಾತರಿಗೆ ಸೇರಿದ ಅಥವಾ ಅನ್ಯಥಾ ಸೊಸೈಟಿಯ ಆಡಳಿತ ಮಂಡಳಿಯ ಸದಸ್ಯರ ಪದಾವಧಿಯು ಮುಕ್ತಾಯಗೊಂಡಿದ್ದರೆ ಮತ್ತು ಹೊಸ ಆಡಳಿತ ಮಂಡಳಿಯನ್ನು ಯಾವುದೇ ಕಾರಣಕ್ಕಾಗಿ ರಚಿಸಿಲ್ಲದಿದ್ದರೆ, ರಿಜಿಸ್ಟ್ರಾರ್ ಅಥವಾ ಅನ್ಯಥಾ ಮಾಡಿದ ವರದಿಯ ಮೇಲೆ ವಿಚಾರಣೆಯ ಮೇರೆಗೆ, ರಾಜ್ಯ ಸರಕಾರವು ಸಾರ್ವಜನಿಕ ಹಿತಾಸಕ್ತಿಯಲ್ಲಿ ಹಾಗೆ ಮಾಡುವುದು ಅಗತ್ಯವೆಂದು ಪರಿಗಣಿಸಿದರೆ ಆಡಳಿತಾಧಿಕಾರಿಯನ್ನು ನೇಮಿಸಬಹುದು.

ಹೈಕೋರ್ಟ್ ಆದೇಶವೇನು?: ಖುರೇಷಿ ಎಜುಕೇಷನ್ ಸೊಸೈಟಿ ಮತ್ತು ಇತರರ ಪ್ರಕರಣದಲ್ಲಿ ಅಲ್ಪಸಂಖ್ಯಾತ ಸಂಘಗಳಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಅವಕಾಶವು ಸಂವಿಧಾನದ ಅನುಚ್ಛೇದ 31 ಮತ್ತು 31ಎ(1)(ಬಿ) ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಒದಗಿಸಿರುವ ಹಕ್ಕುಗಳಿಗೆ ವಿರುದ್ಧವಾಗಿದೆಯಲ್ಲದೆ, ಸಂಘಗಳ ನೋಂದಣಿ ಅಧಿನಿಯಮ 1960ರ ಪ್ರಕರಣ27(ಎ) ಅಡಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನ ಬಾಹಿರ ಎಂದು 1987ರಲ್ಲಿ ಹೈಕೋರ್ಟ್ ಆದೇಶ ನೀಡಿತ್ತು.

ಹೈಕೋಟ್ ರಿಟ್ ಅರ್ಜಿ ಸಂಖ್ಯೆ 15753/1986ಕ್ಕೆ ಸಂಬಂಧಿಸಿದಂತೆ 1987ರ ಫೆ.3ರ ತೀರ್ಪಿನಲ್ಲಿ ಕರ್ನಾಟಕ ಸೊಸೈಟಿಗಳ ನೋಂದಣಿ ಅಧಿನಿಯಮ, 1960ರ 27ಎ ಪ್ರಕರಣವು ಸಂವಿಧಾನದ 30(1)ನೆ ಅನುಚ್ಛೇದದ ಉಲ್ಲಂಘನೆಯಾಗಿರುವುದರಿಂದ ಮತ್ತು 1991ರ ಮಾ.7ರಂದು ರಿಟ್ ಅಪೀಲು ಸಂಖ್ಯೆ:357/1987 ಕೂಡ ವಜಾಗೊಂಡಿದೆ. ಮತ್ತಷ್ಟು ವ್ಯಾಜ್ಯಗಳನ್ನು ತಪ್ಪಿಸಲು ಹಾಗೂ ಸರಕಾರದ ಸೊಸೈಟಿಯ ಸದಸ್ಯರ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಲು ಮತ್ತು ಸಾಮಾನ್ಯ ಸೊಸೈಟಿಗಳು ಮತ್ತು ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯ ತೊಡೆದು ಹಾಕಲು, ಕರ್ನಾಟಕ ಸೊಸೈಟಿಗಳ ನೋಂದಣಿ ಅಧಿನಿಯಮ 1960ನ್ನು (1960ರ ಕರ್ನಾಟಕ ಅಧಿನಿಯಮ ನಂ.17) ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಿ ಈ ತಿದ್ದುಪಡಿ ವಿಧೇಯಕವನ್ನು ಮಂಡಿಸುತ್ತಿರುವುದಾಗಿ ಸರಕಾರ ತಿಳಿಸಿದೆ.

ಸಂವಿಧಾನ ಬಾಹಿರ

ರಾಜ್ಯ ಸರಕಾರವು ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ವಿಧೇಯಕ-2021ರಲ್ಲಿ ಪ್ರಸ್ತಾವಿಸಿರುವ ಅಂಶಗಳು ಸಂವಿಧಾನ ಬಾಹಿರವಾಗಿದ್ದು, ಇದು ಸಂವಿಧಾನದ ಅನುಚ್ಛೇದ 30ರ ಸ್ಪಷ್ಟ ಉಲ್ಲಂಘನೆಯಾಗಿದೆ.

-ರಹ್ಮತುಲ್ಲಾ ಕೊತ್ವಾಲ್, ಹೈಕೋರ್ಟ್ ಹಿರಿಯ ನ್ಯಾಯವಾದಿ

(ರಹ್ಮತುಲ್ಲಾ ಕೊತ್ವಾಲ್)

ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳಲು ಸಂವಿಧಾನದಲ್ಲಿ ವಿಶೇಷ ಹಕ್ಕುಗಳನ್ನು ಕಲ್ಪಿಸಲಾಗಿದೆ. ಸಹಕಾರ ಸಂಘಗಳ ನೋಂದಣಿಗೆ ಸಂಬಂಧಿಸಿದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಆದರೆ, ಶೈಕ್ಷಣಿಕ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿದೆ. ಸರಕಾರ ಉದ್ದೇಶಪೂರ್ವಕವಾಗಿ ಈ ವಿಧೇಯಕವನ್ನು ತರುತ್ತಿದೆ ಎಂದೆನಿಸುತ್ತಿದೆ.

-ಡಾ.ಕೆ.ರಹ್ಮಾನ್ ಖಾನ್, ಕೇಂದ್ರದ ಮಾಜಿ ಸಚಿವ

share
-ಅಮ್ಜದ್ ಖಾನ್ ಎಂ.
-ಅಮ್ಜದ್ ಖಾನ್ ಎಂ.
Next Story
X