ರಾಜ್ಯದಲ್ಲಿ 921 ಹೊಸ ಕೊರೋನ ಪ್ರಕರಣಗಳು ದೃಢ: ಓರ್ವ ಸೋಂಕಿತ ಮೃತ್ಯು

ಬೆಂಗಳೂರು, ಮಾ.13: ರಾಜ್ಯದಲ್ಲಿ ಶನಿವಾರ 921 ಹೊಸ ಕೊರೋನ ಪ್ರಕರಣಗಳು ದಾಖಲಾಗಿದ್ದು, ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, 992 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,59,338ಕ್ಕೆ ತಲುಪಿದ್ದು, 123 ಮಂದಿ ಸೋಂಕಿತರು ಐಸಿಯುನಲ್ಲಿದ್ದಾರೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,387ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,042ಕ್ಕೆ ಆಗಿದ್ದು, ಇವರೆಲ್ಲ ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 921 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 4, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 630, ಬೀದರ್ 15, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 43, ದಾವಣಗೆರೆ 5, ಧಾರವಾಡ 10, ಗದಗ 4, ಹಾಸನ 11, ಕಲಬುರಗಿ 35, ಕೊಡಗು 5, ಕೋಲಾರ 3, ಮಂಡ್ಯ 3, ಮೈಸೂರು 47, ರಾಯಚೂರು 1, ಶಿವಮೊಗ್ಗ 7, ತುಮಕೂರು 38, ಉಡುಪಿ 13, ಉತ್ತರ ಕನ್ನಡ 5, ವಿಜಯಪುರ 8, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 630 ಕೊರೋನ ಪ್ರಕರಣ ದೃಢ
ರಾಜಧಾನಿಯಲ್ಲಿ ಶನಿವಾರ 630 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ. 785 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,10,811 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,516 ಜನರು ಸೋಂಕಿಗೆ ಬಲಿಯಾಗಿದ್ದಾರೆ. 40,441 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.







