ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಂಗಳೂರು : ಆತ್ಮ ನಿರ್ಭರ ಭಾರತದಲ್ಲಿ ಪ್ರಚಲಿತ ಪರಿಸ್ಥಿತಿಯಲ್ಲಿ ವಿಪುಲ ಅವಕಾಶಗಳು ನಮ್ಮದಾಗುತ್ತಿವೆ. ಜಾಗತೀಕರಣದಿಂದಾಗಿ ಕೈಗಾರಿಕಾ ವಲಯದಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುತ್ತಿವೆ. ಬದ್ಧತೆ ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉನ್ನತ ಮೌಲ್ಯಗಳಿಗೆ ಗುರಿ ಸಾಧಿಸುವ ಚಿಂತನೆ ನಮ್ಮದಾಗಬೇಕು ಜೀವನದಲ್ಲಿ ಸಕಾರಾತ್ಮಕ ಮನೋಭಾವ ಸದಾ ನಮ್ಮದಾಗಬೇಕು ಎಂದು ಎಂ.ಆರ್.ಪಿ.ಎಲ್. ನ ಯೋಜನಾ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಹೆಚ್.ವಿ. ಪ್ರಸಾದ್ ಹೇಳಿದರು.
ಅವರು ಇಲ್ಲಿನ ಟಿ.ವಿ.ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಶನಿವಾರ ಸಂಜೆ ನಡೆದ ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ 16ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
2020ರ ಬ್ಯಾಚಿನ 461 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಎಂ.ಅಣ್ಣಪ್ಪ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಿಕೆ ನಿರಂತರವಾಗಿರಲಿ ಎಂದರು. ಆಡಳಿತ ಮಂಡಳಿ ಉಪಾಧ್ಯಕ್ಷ, ಕಾಲೇಜಿನ ಸಂಚಾಲಕ ಎಂ. ಪದ್ಮನಾಭ ಪೈ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಆಡಳಿತ ಮಂಡಳಿ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ಮಾತನಾಡಿ ರಾಷ್ಟ್ರದ ಪ್ರಗತಿಯಲ್ಲಿ ಕೊಡುಗೆ ನೀಡುವ ಮನೋಭಾವ ನಮ್ಮದಾಗಬೇಕು. ಬದುಕಿನಲ್ಲಿ ಸಂತಸ ಹಂಚಿಕೊಂಡು ಅವಕಾಶಗಳನ್ನು ಬಳಸಿಕೊಂಡು ಸಕಾರಾತ್ಮಕ ಚಿಂತನೆಯಿಂದ ಯಶಸ್ಸನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಸಂದೀಪ್ ಪ್ರಭು ಸಂಪಾದಕತ್ವದಲ್ಲಿ ರೂಪುಗೊಂಡ ಕಾಲೇಜಿನ ಇ ವಾರ್ಷಿಕ ಸಂಚಿಕೆ ಸಿಇಸಿ ಬುಲೆಟಿನ್ ಅನ್ನು ಅತಿಥಿ ಬಿ.ಹೆಚ್.ವಿ. ಪ್ರಸಾದ್ ಸಹಿತ ಗಣ್ಯರು ಲೊಕಾರ್ಪಣೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಸತೀಶ್ ಎಸ್. ನಾಡಿಗ್ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಡಯಾನಾ ಗುಡಿನೊ, ಸಿಂಧು ಭಟ್, ತೇಜಸ್ವಿನಿ ಹೊಳ್ಳ.ಕೌಶಲ್ ಡಿ, ವಿದ್ಯಾ ಬಳಿಗೇರ್ ಅನಿಸಿಕೆಗಳನ್ನು ಹಂಚಿಕೊಂಡರು.
ಕಾಲೇಜಿನ ಆಡಳಿತ ಮಂಡಳಿಯ ಕೊಶಾಧಿಕಾರಿ ಎಂ.ವಾಮನ ಕಾಮತ್, ಸಹ ಕೋಶಾಧಿಕಾರಿ ,ಬಸ್ತಿ ಪುರುಷೋತ್ತಮ ಶೆಣೈ, ಸದಸ್ಯರಾದ ಪಂಚಮಾಲ್ ಗೋಪಾಲಕೃಷ್ಣ ಶೆಣೈ, ಟಿ. ಗೋಪಾಲ ಕೃಷ್ಣ ಶೆಣೈ, ಶ್ರೀಕಾಂತ ಪೈ ಕಸ್ತೂರಿ, ಡಾ.ಪಿ. ಉಮಾನಂದ ಮಲ್ಯ, ಆಡಳಿತ ಕೌನ್ಸಿಲ್ ಸದಸ್ಯರಾದ ಎಂ.ವಿನಾಯಕ ಕಾಮತ್,ಹಾಗೂ ಕಾಲೇಜಿನ ವಿಭಾಗ ಮುಖ್ಯಸ್ಥರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಪ್ರಿಯಾ ವಿ.ಫ್ರ್ಯಾಂಕ್ ವಂದಿಸಿದರು. ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಪ್ರಶಾಂತ್ ಕುಮಾರ್ ಎ.ಕಾರ್ಯಕ್ರಮ ನಿರ್ವಹಿಸಿದರು.






.jpeg)

.jpeg)

.jpeg)

.jpeg)

.jpeg)



