Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ಯಾಟಿಂಗ್ ವೈಫಲ್ಯವನ್ನು ಸರಿಪಡಿಸಲು...

ಬ್ಯಾಟಿಂಗ್ ವೈಫಲ್ಯವನ್ನು ಸರಿಪಡಿಸಲು ಕೊಹ್ಲಿ ಪಡೆ ಚಿಂತನೆ

ಇಂದು ಭಾರತ-ಇಂಗ್ಲೆಂಡ್ ಎರಡನೇ ಟ್ವೆಂಟಿ-20 ಪಂದ್ಯ

ವಾರ್ತಾಭಾರತಿವಾರ್ತಾಭಾರತಿ14 March 2021 12:21 AM IST
share
ಬ್ಯಾಟಿಂಗ್ ವೈಫಲ್ಯವನ್ನು ಸರಿಪಡಿಸಲು ಕೊಹ್ಲಿ ಪಡೆ ಚಿಂತನೆ

ಅಹಮದಾಬಾದ್: ಸರಣಿಯ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿರುವ ಭಾರತ ರವಿವಾರ ಇಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಸುಧಾರಿಸುವ ಪ್ರಯತ್ನವನ್ನು ಹೊಂದಿದೆ.

 ಮೂರು ತಿಂಗಳ ಅವಧಿಯಲ್ಲಿ ಭಾರತ ಆಡಿದ ಮೊದಲ ಸೀಮಿತ ಓವರ್‌ಗಳ ಪಂದ್ಯದಲ್ಲಿ ಕೈ ಸುಟ್ಟುಕೊಂಡಿದೆ.ಲೋಕೇಶ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ಯಜುವೇಂದ್ರ ಚಹಾಲ್ ಅವರಂತಹ ಕೆಲವು ಪ್ರಮುಖ ಆಟಗಾರರ ವೈಫಲ್ಯದಿಂದಾಗಿ ಭಾರತ ಸೋಲು ಅನುಭವಿಸಿತ್ತು.

 ಕಳಪೆ ಬ್ಯಾಟಿಂಗ್ ಮತ್ತು ದುರ್ಬಲ ಬೌಲಿಂಗ್ ಕಾರಣದಿಂದಾಗಿ ಭಾರತ ಮೊದಲ ಪಂದ್ಯದಲ್ಲಿ ವಿಫಲಗೊಂಡಿತ್ತು. ಆದರೆ ಒಂದು ಸೋಲು ಎಂದಿಗೂ ಕಥೆಯ ಅಂತ್ಯವಲ್ಲ ಮತ್ತು ಒಂದು ಪಂದ್ಯದಲ್ಲಿ ನೀಡಿದ ಪ್ರದರ್ಶನದ ಆಧಾರದ ಮೇಲೆ ಯಾವುದೇ ತಂಡದ ಸಾಮರ್ಥ್ಯವನ್ನು ಅಳೆಯಲು ಸಾಧ್ಯವಿಲ್ಲ. ನಾಯಕ ವಿರಾಟ್ ಕೊಹ್ಲಿ ಆಟಗಾರರ ಪ್ರದರ್ಶನದ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ರಿಷಭ್ ಪಂತ್ ಮತ್ತು ಪಾಂಡ್ಯ ಅವರಿಂದ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಇದು ಒಂದು ಧೈರ್ಯಶಾಲಿ ರಿವರ್ಸ್ ಸ್ವೀಪ್ (ಜೋಫ್ರಾ ಆರ್ಚರ್ ಎಸೆತದಲ್ಲಿ ಪಂತ್ ಸಿಕ್ಸರ್) ಗೆ ಸೀಮಿತವಾಗಿರಬಾರದು ಅಥವಾ ಬೀಳುವ ರಾಂಪ್ ಶಾಟ್‌ಗೆ (ಬೆನ್ ಸ್ಟೋಕ್ಸ್ ಎಸೆತದಲ್ಲಿ ಪಾಂಡ್ಯ ಬೌಂಡರಿ) ಸೀಮಿತಗೊಳಿಸಬಾರದು ಎಂದು ಕೊಹ್ಲಿ ಹೇಳಿದ್ದಾರೆ. ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ 67 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು. ಆರ್ಚರ್ ಮತ್ತು ಮಾರ್ಕ್ ವುಡ್‌ರ ವೇಗ ಹಾಗೂ ನಿಖರ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ಪಾಂಡ್ಯ ಮತ್ತು ಪಂತ್‌ಗೆ ಸಾಧ್ಯವಾಗಲಿಲ್ಲ. ಪಾಂಡ್ಯ (21 ಎಸೆತಗಳಲ್ಲಿ 19) ಮತ್ತು ಪಂತ್ (23 ಎಸೆತಗಳಲ್ಲಿ 21) ಎರಡಂಕೆಯ ಕೊಡುಗೆ ನೀಡಿದರು.

ಮೊದಲ ಪಂದ್ಯದಲ್ಲಿ ಸೋತಿರುವ ಕಾರಣದಿಂದಾಗಿ ಎರಡನೇ ಪಂದ್ಯದ ಅಂತಿಮ ಹನ್ನೊಂದರಲ್ಲಿ ಕೆಲವು ಬದಲಾವಣೆಯ ಬಗ್ಗೆ ಕೊಹ್ಲಿ ಸುಳಿವು ನೀಡಿದ್ದಾರೆ. ತಂಡದ ಹಿರಿಯ ಸದಸ್ಯ ಶಿಖರ್ ಧವನ್ ಅವರು 12 ಎಸೆತಗಳಲ್ಲಿ 4 ರನ್ ಗಳಿಸಿದ್ದಾರೆ. ಅವರಿಗೆ ಎರಡನೇ ಪಂದ್ಯದಲ್ಲಿ ಅವಕಾಶ ನೀಡುವ ಬಗ್ಗೆ ಕೊಹ್ಲಿ ಹೇಳಿಲ್ಲ. ಸತತ 6 ಟೆಸ್ಟ್ ಪಂದ್ಯಗಳನ್ನು ಆಡಿದ ರೋಹಿತ್ ಶರ್ಮಾರಿಗೆ ಒಂದೆರಡು ಪಂದ್ಯಗಳಿಗೆ ವಿಶ್ರಾಂತಿ ನೀಡುವ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ. ಆಸ್ಟ್ರೇಲಿಯದ ಪ್ರವಾಸದ ಆರಂಭದಲ್ಲಿ 14 ದಿನಗಳ ಕಾಲ ಕಠಿಣ ಸಂಪರ್ಕತಡೆಯನ್ನು ರೋಹಿತ್ ಶರ್ಮಾ ಅನುಭವಿಸಿದ್ದರು. ಆದರೆ ರೋಹಿತ್ ಅವರ ಉಪಸ್ಥಿತಿಯು ಅಗ್ರಸರದಿಯಲ್ಲಿ ಬಹಳ ಅವಶ್ಯಕವಾಗಿದೆ.

ಬೌಲಿಂಗ್ ವಿಭಾಗವು ಬಲಿಷ್ಠವಾಗಿ ಇಲ್ಲ. ಈ ಕಾರಣದಿಂದಾಗಿ ಯಜುವೇಂದ್ರ ಚಹಾಲ್ ಮತ್ತು ರಾಹುಲ್ ತಿವಾಟಿಯಾಗೆ ದಾರಿ ಸುಗಮವಾಗಬಹುದು. ಇಂಗ್ಲೆಂಡ್ ತಂಡವು ಈ ವರ್ಷದ ಅಕ್ಟೋಬರ್‌ನಲ್ಲಿ ಟ್ವೆಂಟಿ-20 ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವ ಕಡೆಗೆ ಕಣ್ಣಿಟ್ಟಿದ್ದು, ಭಾರತ ತಂಡದಲ್ಲಿ ಸುಧಾರಣೆಯಾಗದಿದ್ದರೆ ಅವರ ತಯಾರಿಗೆ ಈ ಸರಣಿ ಹೆಚ್ಚು ಅನುಕೂಲವಾಗಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X