ಕಾಲೇಜುಗಳಿಗೆ ರಜೆ ಸಾರಿಲ್ಲ: ದ.ಕ. ಜಿಲ್ಲಾಧಿಕಾರಿ

ಮಂಗಳೂರು,ಮಾ.14: ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಮಾ.15ರಿಂದ 30ರವರೆಗೆ ಎಲ್ಲಾ ಸರಕಾರಿ, ಖಾಸಗಿ/ಅನುದಾನಿತ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಚಾರ್ಯರಲ್ಲಾದ ಗೊಂದಲವನ್ನು ಗಮನಿಸಿದ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ‘ಯಾವುದೇ ಕಾಲೇಜುಗಳಿಗೆ ರಜೆ ಸಾರಲಾಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯಿಂದ ಕಾಲೇಜು ಶಿಕ್ಷಣ ನಿರ್ದೇಶಕರ ಸಹಿಯೊಂದಿಗೆ ಮಾ.14ರಂದು ಹೊರಡಿಸಲಾಗಿದ್ದು ಎಂದು ಬಿಂಬಿಸುವ ಸುತ್ತೋಲೆಯ ಹೆಸರಿನ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದು ವಿದ್ಯಾರ್ಥಿಗಳಲ್ಲಿ ಮಾತ್ರವಲ್ಲ ಉಪನ್ಯಾಸಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಆ ಹಿನ್ನಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಸ್ಪಷ್ಟನೆೆ ನೀಡಿದ್ದಾರೆ.
Next Story





