ಕುಂದಾಪುರ: ಭೃಷ್ಟಾಚಾರ ನಿರ್ಮೂಲನ ಜಾಗೃತಿ ಅಭಿಯಾನ

ಕುಂದಾಪುರ, ಮಾ.14: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಉಡುಪಿ ಯುವ ಸ್ಪಂದನ ಕೇಂದ್ರ ಹಾಗೂ ಚ್ಯಾಲೆಂಜರ್ಸ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಭೃಷ್ಟಾಚಾರ ನಿರ್ಮೂಲನ ಜಾಗೃತಿ ಅಭಿಯಾನವನ್ನು ಇತ್ತೀಚೆಗೆ ಆಯೋಜಿಸ ಲಾಗಿತ್ತು.
ಭೃಷ್ಟಾಚಾರ ನಿಗ್ರಹದಳ ಉಡುಪಿ ಉಪ ಅಧೀಕ್ಷಕ ಬಿ.ಎಸ್.ಸತೀಶ್ ಮಾತನಾಡಿ, ಆಚಾರವೇ ಶಿಷ್ಟಾಚಾರ ಆಚಾರವನ್ನು ಅತಿಕ್ರಮಿಸುವುದೇ ಭೃಷ್ಟಾಚಾರ. ಯುವಶಕ್ತಿ ಭೃಷ್ಟಾಚಾರಕ್ಕೆ ಬದುಕಿನಲ್ಲಿ ಆಸ್ಪದಕೊಡದೆ ಭೃಷ್ಟಾಚಾರದ ನಿರ್ಮೂಲನೆಗೆ ಕಾರಣೀಕರ್ತರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ವಹಿಸಿದ್ದರು. ಚಾಲೆಂಜರ್ಸ್ ಫೌಂಡೇಶನ್ ಅಧ್ಯಕ್ಷ ರಕ್ಷಿತ ಶ್ರೀಯಾನ್, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್, ಘಟಕದ ವಿದ್ಯಾರ್ಥಿ ಮುಖಂಡ ಮುಹಮ್ಮದ್ ಅಯಾನ್ ಉಪಸ್ಥಿತರಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಸಂದೀಪ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಕಾವ್ಯಾ ಸ್ವಾಗತಿಸಿದರು. ಯುವ ಸ್ಪಂದನ ಕೇಂದ್ರದ ಯುವ ಪ್ರವರ್ತಕ ನರಸಿಂಹ ವಂದಿಸಿದರು. ವಿದ್ಯಾರ್ಥಿ ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿದರು.







