Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮುಕಾಶ್ಮೀರದ 12ನೇ ತರಗತಿ...

ಜಮ್ಮುಕಾಶ್ಮೀರದ 12ನೇ ತರಗತಿ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಶೇ. 100 ಅಂಕ

ಇಂಟರ್ನೆಟ್ ನಿರ್ಬಂಧದ ನಡುವೆಯೂ ಉತ್ತಮ ಸಾಧನೆ

ವಾರ್ತಾಭಾರತಿವಾರ್ತಾಭಾರತಿ14 March 2021 10:24 PM IST
share
ಜಮ್ಮುಕಾಶ್ಮೀರದ 12ನೇ ತರಗತಿ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಶೇ. 100 ಅಂಕ

ಶ್ರೀನಗರ, ಮಾ. 14: ಜಮ್ಮು ಹಾಗೂ ಕಾಶ್ಮೀರದ 12ನೇ ತರಗತಿ ಪರೀಕ್ಷೆಗಳಲ್ಲಿ ಬಾಲಕರಿಗಿಂತ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಈ ವಾರದ ಆರಂಭದಲ್ಲಿ ಪ್ರಕಟವಾದ ಪರೀಕ್ಷೆಯ ಫಲಿತಾಂಶ ಅವರು ಈ ಬಾರಿ ಇನ್ನಷ್ಟು ಸಾಧನೆ ಮಾಡಿರುವುದನ್ನು ತೋರಿಸಿದೆ.

ವಿಜ್ಞಾನ ಹಾಗೂ ಕಲೆ ಹಾಗೂ ಗೃಹ ವಿಜ್ಞಾನದಲ್ಲಿ ಮೂವರು ಬಾಲಕಿಯರು ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವರ್ಷ ಶಾಲೆಗಳನ್ನು ಮುಚ್ಚಲಾಗಿತ್ತು ಹಾಗೂ ತರಗತಿಯನ್ನು ಆನ್‌ಲೈನ್‌ಗೆ ಪರಿವರ್ತಿಸಲಾಗಿತ್ತು. ಇದರಿಂದ ದೇಶಾದ್ಯಂತದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸವಾಲನ್ನು ಎದುರಿಸಬೇಕಾಗಿತ್ತು. ಇಸ್ರತ್ ಮುಝಫರ್ (ವಿಜ್ಞಾನ), ಖುಷ್ಬೂ ನಝೀರ್ (ಕಲೆ) ಹಾಗೂ ಸಬೀರಾ ರಶೀದ್ (ಗೃಹ ವಿಜ್ಞಾನ) ಅವರು ಪರೀಕ್ಷೆಯ ಸಂದರ್ಭ ಇಂಟರ್‌ನೆಟ್ ನಿರ್ಬಂಧದಂತಹ ಹಲವು ಸವಾಲುಗಳ ನಡುವೆಯೂ ಈ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದ ಇಶ್ರತ್ ಮುಝಪ್ಫರ್ ವೈದ್ಯರಾಗಲು ಬಯಸಿದ್ದಾರೆ.

‘‘ಉತ್ತಮ ಅಂಕಗಳನ್ನು ತೆಗೆಯುತ್ತೇನೆ ಎಂದು ನನಗೆ ಖಾತರಿ ಇತ್ತು. ಆದರೆ, ಪೂರ್ಣ ಅಂಕ ಬಂದಿರುವುದು ನನಗೆ ಹಾಗೂ ನನ್ನ ಕುಟುಂಬಕ್ಕೆ ಅಚ್ಚರಿ ಉಂಟು ಮಾಡಿದೆ. ಈ ಸಾಧನೆಗೆ ದೇವರಿಗೆ ವಂದನೆ ಹೇಳಬೇಕು. ಭವಿಷ್ಯದಲ್ಲಿ ಕೂಡ ಇದೇ ರೀತಿಯ ಯಶಸ್ಸು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’’ ಎಂದು ಅವರು ಹೇಳಿದ್ದಾರೆ. ಖುಷ್ಬೂ ನಝೀರ್ ಹೆತ್ತವರು ರೈತರು. ಅವರ ಕುಟುಂಬದಲ್ಲಿ 12ನೇ ತರಗತಿ ಪೂರೈಸಿದ ಮೊದಲ ವಿದ್ಯಾರ್ಥಿನಿ ಖಷ್ಬೂ ನಝೀರ್. ಉಳಿದವರಿಗೆ 10ನೇ ತರಗತಿ ಉತ್ತೀರ್ಣರಾಗಲು ಕೂಡ ಸಾಧ್ಯವಾಗಿರಲಿಲ್ಲ. ಕಾಶ್ಮೀರ ಆಡಳಿತ ಸೇವೆಗೆ ಸೇರಲು ಬಯಸುವುದಾಗಿ ಅವರು ಹೇಳಿದ್ದಾರೆ.

‘‘ನಾನು ಕಲಾ ವಿಭಾಗದ ವಿದ್ಯಾರ್ಥಿನಿ. ರಾಜ್ಯಶಾಸ್ತ್ರಲ್ಲಿ ಪದವಿ ಪಡೆಯಲು ಬಯಸುತ್ತೇನೆ. ನನ್ನ ಕನಸು ಐಎಎಸ್ ಅಧಿಕಾರಿಯಾಗುವುದು’’ ಎಂದು ಖುಷ್ಬೂ ಹೇಳಿದ್ದಾರೆ. ಸಬೀರಾ ರಶೀದ್ ಪ್ರತಿಕ್ರಿಯಿಸಿ, ‘‘ಗೃಹ ವಿಜ್ಞಾನಕ್ಕೆ ಸಾಕಷ್ಟು ಅವಕಾಶ ಇಲ್ಲ ಎಂದು ಹೇಳುವ ಮೂಲಕ ಜನರು ಯಾವಾಗಲೂ ನನ್ನನ್ನು ನಿರುತ್ಸಾಹಗೊಳಿಸುತ್ತಿದ್ದರು. ಅದು ಅವರ ತಪ್ಪಲ್ಲ ಎಂಬುದು ನನ್ನ ಭಾವನೆ. ಅವರಿಗೆ ಈ ವಿಷಯದ ಪ್ರಾಮುಖ್ಯತೆ ಬಗ್ಗೆ ತಿಳಿದಿಲ್ಲ. ನಮ್ಮ ಶಿಕ್ಷಣ ವ್ಯವಸ್ಥೆ ಈ ವಿಷಯದ ಕುರಿತು ಸಂಪೂರ್ಣ ಅನ್ವೇಷಿಸಿಲ್ಲ. ನಿರುತ್ಸಾಹಗೊಳ್ಳುವುದಿಲ್ಲ ಎಂದು ನಾನು ನಿರ್ಧರಿಸಿದ್ದೇನೆ’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X