Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ಹಳೆ ಡಿಸಿ ಕಚೇರಿಗೆ ಕಲ್ಚರಲ್...

ಮಂಗಳೂರಿನ ಹಳೆ ಡಿಸಿ ಕಚೇರಿಗೆ ಕಲ್ಚರಲ್ ಹಬ್ ಮೆರಗು

ವಾರ್ತಾಭಾರತಿವಾರ್ತಾಭಾರತಿ15 March 2021 10:45 AM IST
share
ಮಂಗಳೂರಿನ ಹಳೆ ಡಿಸಿ ಕಚೇರಿಗೆ ಕಲ್ಚರಲ್ ಹಬ್ ಮೆರಗು

ಮಂಗಳೂರು: ನಗರದ ಹ್ಯಾಮಿಲ್ಟನ್ ಸರ್ಕಲ್ ಬಳಿಯ ಐತಿಹಾಸಿಕ ಹಿನ್ನೆಲೆಯಿರುವ ಹಳೆ ಡಿಸಿ ಕಚೇರಿಯ ಕಟ್ಟಡಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಂಸ್ಕೃತಿಕ ಕೇಂದ್ರದ (ಕಲ್ಚರಲ್ ಹಬ್) ಮೆರಗು ನೀಡಲು ಸಿದ್ಧತೆ ನಡೆದಿದೆ. ಸುಮಾರು 10 ಕೋ.ರೂ. ವೆಚ್ಚದಲ್ಲಿ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ.

ಹಳೆ ಡಿಸಿ ಕಚೇರಿಯು ಪಾರಂಪರಿಕ ಕಟ್ಟಡವಾಗಿ ಗುರುತಿ ಸಿಕೊಂಡಿವೆ. ಇದನ್ನು ಪಾಳು ಬಿಡುವ ಬದಲು ದುರಸ್ತಿಗೊಳಿಸುವ ಮೂಲಕ ಮೆರಗು ನೀಡಲು ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ.ಅಂದರೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ವಿಸ್ತೃತ ವರದಿಯನ್ನು ತಯಾರಿಸಲಾಗಿದೆ. ಹಳೆ ಡಿಸಿ ಕಚೇರಿಯು ಎರಡು ಕಟ್ಟಡಗಳನ್ನು ಹೊಂದಿದೆ. ಒಂದು ಕಟ್ಟಡದಲ್ಲಿ ಚುನಾವಣಾ ಮತ ಎಣಿಕೆಯ ಬಳಿಕ ಇವಿಎಂ ಮೆಷಿನ್‌ಗಳನ್ನು ಸೂಕ್ತ ಭದ್ರತಾ ವ್ಯವಸ್ಥೆಯೊಂದಿಗೆ ಇಡಲಾಗಿದೆ. ಇನ್ನೊಂದು ಕಟ್ಟಡದಲ್ಲಿ ಜಿಲ್ಲಾಡಳಿತದ ಅಮೂಲ್ಯ  ದಾಖಲೆಗಳನ್ನು ಸಂಗ್ರಹಿಸಡಲಾಗಿದೆ. ಹಾಗಾಗಿ ಇವಿಎಂ ಮೆಷಿನ್ ಮತ್ತು ದಾಖಲೆಪತ್ರಗಳನ್ನು ಸ್ಧಳಾಂತರ ಮಾಡದೆ ಇಲ್ಲಿ ಕಾಮಗಾರಿ ಆರಂಭಿಸಲು ಸಾಧ್ಯವಿಲ್ಲ. ಈ ಸ್ಥಳಾಂತರದ ಪ್ರಕ್ರಿಯೆ ಮುಗಿದ ಬಳಿಕ ಹಳೆಯ ಡಿಸಿ ಕಚೇರಿಗೆ ಹೊಸ ಮೆರಗು ಸಿಗಲಿದೆ. ಆ ಬಳಿಕ ಹಳೆ ಡಿಸಿ ಕಚೇರಿ ಕಟ್ಟಡವು ಕಲ್ಚರಲ್ ಹಬ್ ಆಗಲಿವೆ.

ಸದ್ಯ ದ.ಕ.ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣವು 5.4 ಎಕರೆ ಪ್ರದೇಶವನ್ನು ಒಳಗೊಂಡಿದೆ. ಇದರಲ್ಲಿ ಹಳೆಯ ಕಟ್ಟಡ ಸಹಿತ ಶೇ.30ರಷ್ಟು ಪ್ರದೇಶ ಅಭಿವೃದ್ಧಿಯಾಗಲಿದೆ. ಇತಿಹಾಸಕ್ಕೆ ಸಾಕ್ಷಿಯಾಗಿರುವ ಹಳೆ ಡಿಸಿ ಕಚೇರಿಯ ಸಂರಕ್ಷಣೆಯ ಜೊತೆಗೆ ಮಂಗಳೂರಿನಲ್ಲಿ ಪ್ರವಾಸಿ ಆಕರ್ಷಣೆ ಹೆಚ್ಚಿಸುವ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕೇಂದ್ರವಾಗಿ ರೂಪಿಸುವ ಉದ್ದೇಶವನ್ನು ಸ್ಮಾರ್ಟ್ ಸಿಟಿ ಯೋಜನೆಯು ಹೊಂದಿವೆ. ಜಿಲ್ಲೆಯ ಪರಂಪರೆಗಳನ್ನು ಪ್ರವಾಸಿಗರು ಮತ್ತು ಯುವಜನರಿಗೆ ಪರಿಚಯಿಸುವ, ಮಾಹಿತಿ ನೀಡುವ, ಅಧ್ಯಯನ ನಡೆಸುವ ಕೇಂದ್ರವಾಗಿ ಇದು ರೂಪುಗೊಳ್ಳಲಿದೆ.

  ಜಿಲ್ಲೆಯ ಚಾರಿತ್ರಿಕ ಹಿನ್ನೆಲೆ, ಅಪರೂಪದ ಕಲಾವಸ್ತುಗಳು, ಕಲಾಕೃತಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ಬಿಂಬಿಸುವ ವುಗಳ ರಕ್ಷಣೆ, ಅವುಗಳ ಪ್ರದರ್ಶನ ಮತ್ತು ಅದಕ್ಕೆ ಸಂಬಂಧಿಸಿ ದಂತೆ ಸಾರ್ವಜನಿಕ ಕಾರ್ಯಕ್ರಮಗಳು, ಪ್ರಕಟನೆಗಳು ಹಾಗೂ ಸಂಶೋಧನೆಗೆ ಒತ್ತು ನೀಡುವ ತಾಣವಾಗಿ ಹಳೆ ಡಿಸಿ ಕಚೇರಿಯು ರೂಪುಗೊಳ್ಳಲಿದೆ. ಮಂಗಳೂರಿನಲ್ಲಿ ಇಂತಹದ್ದೊಂದು ಸಾಂಸ್ಕೃತಿಕ ಕೇಂದ್ರ ಸದ್ಯ ಇಲ್ಲ. ಚಾರಿತ್ರಿಕ ಹಿನ್ನಲೆ, ಅತ್ಯುತ್ತಮ ವಾಸ್ತುಶಿಲ್ಪ, ವಿನ್ಯಾಸ ಹೊಂದಿರುವ ಹಳೆ ಡಿಸಿ ಕಚೇರಿಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆಯು ಪಾರಂಪಾರಿಕ ತಾಣವಾಗಿ ಗುರುತಿಸಿದೆ. ಆದರೆ ಈ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಕಾಯಕಲ್ಪ ನೀಡಿ ಸಂರಕ್ಷಿಸದಿದ್ದರೆ ಇದು ಕಣ್ಮರೆಯಾಗಬಹುದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ.

ಐತಿಹಾಸಿಕ ಸ್ಮಾರಕ

ಹಳೆ ಡಿಸಿ ಕಚೇರಿ ಕಟ್ಟಡವು ಕೇವಲ ಡಿಸಿ ಕಚೇರಿ ಆಗಿರಲಿಲ್ಲ. ಅದೊಂದು ಐತಿಹಾಸಿಕ ಸ್ಮಾರಕವೂ ಆಗಿದೆ. ಈ ಕಟ್ಟಡಕ್ಕೆ ಸುಮಾರು 400 ವರ್ಷಗಳ ಇತಿಹಾಸವಿದೆ.ವಿಜಯನಗರದ ಅರಸರ ಅಧೀನ ದಲ್ಲಿದ್ದ ಜೈನ ಅರಸು ಮನೆತನದ ಬಂಗರ ಕಾಲದಲ್ಲಿ ನಿರ್ಮಿಸಲಾದ ಅರಮನೆ ಪ್ರದೇಶ ಮುಂದೆ ಜಿಲ್ಲಾ ಕಲೆಕ್ಟರ್ ಕಚೇರಿಯಾಗಿ ಪರಿವರ್ತನೆಗೊಂಡಿತು. ಬ್ರಿಟಿಷರೊಂದಿಗೆ ಟಿಪ್ಪುಸುಲ್ತಾನ್ 1784ರಲ್ಲಿ ಮಾಡಿಕೊಂಡ ಒಪ್ಪಂದದಂತೆ ಈ ಅರಮನೆ ಟಿಪ್ಪು ಸುಲ್ತಾನ್‌ನ ವಶಕ್ಕೆ ಬಂತು. ಟಿಪ್ಪು ಸುಲ್ತಾನ್‌ರ ಮರಣದ ಬಳಿಕ 1799ರಲ್ಲಿ ಮೇಜರ್ ಸರ್ ಥಾಮಸ್ ಮುನ್ರೊ ಪ್ರಥಮ ಜಿಲ್ಲಾ ಕಲೆಕ್ಟರ್ ಆಗಿ ಈ ಅರಮನೆಯಲ್ಲಿ ಕಲೆಕ್ಟರ್ ಕಚೇರಿ ಆರಂಭಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X