Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ : ಬ್ಯಾಂಕ್ ಉದ್ಯೋಗಿಗಳ...

ದ.ಕ.ಜಿಲ್ಲೆ : ಬ್ಯಾಂಕ್ ಉದ್ಯೋಗಿಗಳ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ15 March 2021 11:00 AM IST
share
ದ.ಕ.ಜಿಲ್ಲೆ : ಬ್ಯಾಂಕ್ ಉದ್ಯೋಗಿಗಳ ಮುಷ್ಕರ

ಮಂಗಳೂರು, ಮಾ.15: ಸಾರ್ವಜನಿಕ ರಂಗದ ಎರಡು ಬ್ಯಾಂಕ್ ಮತ್ತು ಒಂದು ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು 2021ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿರುವ ನಡೆಯನ್ನು ಖಂಡಿಸಿ ದೇಶಾದ್ಯಂತ ನಡೆಯುವ ಮುಷ್ಕರದ ಭಾಗವಾಗಿ ಸೋಮವಾರ ದ.ಕ.ಜಿಲ್ಲೆಯಲ್ಲೂ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ಆರಂಭಿಸಿದ್ದಾರೆ. ಮಂಗಳವಾರವೂ ಮುಷ್ಕರ ಮುಂದುವರಿಯಲಿದೆ.

ಮಂಗಳೂರು ನಗರದ ಸಹಿತ ಜಿಲ್ಲೆಯ ವಿವಿಧೆಡೆ ಸುಮಾರು 2 ಸಾವಿರಕ್ಕೂ ಅಧಿಕ ಬ್ಯಾಂಕ್ ಅಧಿಕಾರಿಗಳು, ನೌಕರರು ಸೋಮವಾರದ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ನಗರದ ಬಲ್ಮಠದಲ್ಲಿ ಸೋಮವಾರ ಕೆನರಾ ಬ್ಯಾಂಕ್‌ನ ವೃತ್ತ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಬ್ಯಾಂಕ್ ಅಧಿಕಾರಿಗಳು, ನೌಕರರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಮಂಗಳೂರು ಮಿನಿ ವಿಧಾನ ಸೌಧದ ಮುಂದೆಯೂ ಧರಣಿ ನಡೆಸಿ ಗಮನ ಸೆಳೆದರು.

ಶನಿವಾರ ಮತ್ತು ರವಿವಾರವೂ ಬ್ಯಾಂಕ್‌ಗೆ ರಜೆ ಇದ್ದ ಕಾರಣ ಮತ್ತು ಸೋಮವಾರ ಮುಷ್ಕರ ಆರಂಭಗೊಂಡ ಕಾರಣ ಗ್ರಾಹಕರು ವಾರದ ಮೊದಲ ದಿನವೇ ಹಣಕಾಸಿನ ನಿರ್ವಹಣೆ ಮಾಡಲಾಗದೆ ಸಮಸ್ಯೆಯನ್ನು ಎದುರಿಸುವಂತಾಯಿತು. ತುರ್ತು ಹಣ ರವಾನೆ ಮತ್ತು ಪಡೆಯುವ ಸಲುವಾಗಿ ಗ್ರಾಹಕರು ಬಹುತೇಕ ಎಟಿಎಂಗಳ ಮುಂದೆ ಜಮಾಯಿಸಿದ್ದು ಕಂಡು ಬಂತು. ಕೆಲವು ಎಟಿಎಂಗಳಲ್ಲಿ ಸೋಮವಾರ ಬೆಳಗ್ಗೆಯೇ ಹಣ ಪಡೆಯಲಾಗದೆ ಗ್ರಾಹಕರು ಬರಿಗೈಯಲ್ಲಿ ಮರಳುವುದು ಮತ್ತು ಹೆಚ್ಚಿನ ಎಟಿಎಂಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತಿರುವುದು ಕಂಡು ಬಂತು.

ನಗರದ ಬಲ್ಮಠದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಿಬಿಒಎ ಇದರ ಡಿಜಿಎಸ್ ರಮೇಶ್ ನಾಯ್ಕ 1969ರಲ್ಲಿ 14 ಮತ್ತು 1980ರಲ್ಲಿ 6 ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಲಾಯಿತು. ಹಳ್ಳಿ ಪ್ರದೇಶ, ಬಡತನ ರೇಖೆಯಲ್ಲಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಬ್ಯಾಂಕಿಂಗ್ ಸೌಲಭ್ಯಗಳನ್ನು ನೀಡುವುದು ಇದರ ಮೂಲ ಉದ್ದೇಶವಾಗಿತ್ತು. ಅಲ್ಲದೆ ರೈತಾಪಿ ವರ್ಗವನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದಾಗಿತ್ತು. ಇಂತಹ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುತ್ತಿರುವುದು ದೊಡ್ಡ ದುರಂತವಾಗಿದೆ ಎಂದರು.

ಪ್ರಸ್ತುತ ಸರಕಾರದ ಪ್ರತಿಯೊಂದು ಯೋಜನೆಗಳು ಬ್ಯಾಂಕ್ ಮೂಲಕವೇ ಅನುಷ್ಠಾನಗೊಳ್ಳುತ್ತಿದೆ. ಸರಕಾರದ ಪ್ರತಿಯೊಂದು ಯೋಜನೆಗಳ ಯಶಸ್ಸಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳು ಹೆಚ್ಚಿನ ಪಾಲುದಾರಿಕೆ ಹೊಂದಿರುತ್ತದೆ. ಈ ಈ ಆ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುತ್ತಿರುವುದು ದುರದೃಷ್ಟಕರ ಎಂದರು.

ಸಿಬಿಒಎ ಇದರ ಮತ್ತೋರ್ವ ಡಿಜಿಎಸ್ ಅಮರ್ ಎನ್.ಎ. ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುತ್ತಿರುವುದು ದೊಡ್ಡ ಮೋಸವಾಗಿದೆ. ಬಂಡವಾಳಶಾಹಿಗಳು ಸೇರಿಕೊಂಡು ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಅಪಾಯದ ಅಂಚಿಗೆ ತಳ್ಳುತಿದ್ದಾರೆ. ಕೊರೋನದ ಸಂದರ್ಭ ಸಾರ್ವಜನಿಕ ರಂಗದ ಬ್ಯಾಂಕ್‌ಗಳು ಜನರಿಗೆ ಅತೀ ಹೆಚ್ಚಿನ ಮಟ್ಟದಲ್ಲಿ ಸೇವೆಯನ್ನು ನೀಡಿದೆ. ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಖಾಸಗೀಕರಣ ಮಾಡಿದರೆ ದೇಶದ ಆರ್ಥಿಕತೆ ನೆಲಕಚ್ಚುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ಈ ಸಂದರ್ಭ ಸಿಬಿಒಎ ಇದರ ಎಜಿಎಸ್ ಸ್ವಾತಿ ಕೆ.ಎಸ್., ಎಐಎನ್‌ಬಿಒಎಫ್ ಜಿಲ್ಲಾ ಅಧ್ಯಕ್ಷ ಸುಧೀರ್ ಕುಮಾರ್ ಬಿ., ಅಧ್ಯಕ್ಷ ಗಿರೀಶ್ ಕುಮಾರ್, ಸಿಬಿಒಎ ಮಂಗಳೂರು ಪ್ರಾದೇಶಿಕ ಕಾರ್ಯದರ್ಶಿ ಹರೀಶ್ ಶೆಟ್ಟಿ, ಪುತ್ತೂರಿನ ಪ್ರಾದೇಶಿಕ ಕಾರ್ಯದರ್ಶಿ ಶಮೀನಾ, ರವಿ ಪಿಂಟೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X