Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ ಟೋಲ್: ಸರ್ವಿಸ್ ಬಸ್ ಗಳಿಗೆ...

ಹೆಜಮಾಡಿ ಟೋಲ್: ಸರ್ವಿಸ್ ಬಸ್ ಗಳಿಗೆ ರಿಯಾಯಿತಿ ದರಕ್ಕೆ ಟೋಲ್ ಸಂಸ್ಥೆ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ15 March 2021 8:01 PM IST
share
ಹೆಜಮಾಡಿ ಟೋಲ್: ಸರ್ವಿಸ್ ಬಸ್ ಗಳಿಗೆ ರಿಯಾಯಿತಿ ದರಕ್ಕೆ ಟೋಲ್ ಸಂಸ್ಥೆ ಒಪ್ಪಿಗೆ

ಪಡುಬಿದ್ರಿ: ಹೆಜಮಾಡಿ ಟೋಲ್‍ನಲ್ಲಿ ಸರ್ವಿಸ್ ಬಸ್ ಗಳಿಗೆ ರಿಯಾಯಿತಿ ದರ ನೀಡಲು ಟೋಲ್ ಸಂಸ್ಥೆ ಒಪ್ಪಿದ್ದು, ಮಂಗಳವಾರದಿಂದ ಬಸ್ಸು ಯಥಾಸ್ಥಿತಿ ಸಂಚಾರ ನಡೆಸಲಿದೆ. ರಿಯಾಯಿತಿ ದರದಂತೆ ಬಸ್ಸು ಮಾಲಕರು ಎಲ್ಲಾ ಬಸ್ಸುಗಳ ತಿಂಗಳ ದರವನ್ನು ಒಮ್ಮೆಲೆ ಭರಿಸಿದ್ದು, ಹೆಜಮಾಡಿ ಒಳ ರಸ್ತೆಯಲ್ಲಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸರ್ವಿಸ್ ಬಸ್ಸುಗಳಿಗೆ ಟೋಲ್ ರಿಯಾಯಿತಿಯನ್ನು ರದ್ದುಗೊಳಿಸಿ ಟೋಲ್ ಸಂಗ್ರಹ ಮಾಡುವುದನ್ನು ವಿರೋಧಿಸಿ ಕೆನರಾ ಷಟಲ್ ಬಸ್ಸು ಮಾಲಕರ ಸಂಘದ ನೇತೃತ್ವದಲ್ಲಿ ಸೋಮವಾರ ಹೆಜಮಾಡಿ ಒಳ ರಸ್ತೆಯಲ್ಲಿ ಸಂಚರಿಸುವ ಸುಮಾರು 40 ಷಟಲ್ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿ ಟೋಲ್‍ಗೇಟ್ ಮುಂಭಾಗದಲ್ಲಿ ಬಸ್ಸು ಮಾಲಕರು, ಚಾಲಕರು ಹಾಗೂ ಟೋಲ್ ವಿರೋಧಿ ಹೋರಾಟ ಸಮಿತಿಯವರು ಹೆಜಮಾಡಿ ಟೋಲ್ ಗೇಟ್ ಬಳಿ ಜಮಾಯಿಸಿದ್ದರು.

ಹೆಜಮಾಡಿ ಒಳ ರಸ್ತೆಯ ಟೋಲ್ ಬಳಸಿ ಸಂಚರಿಸುವ ಷಟಲ್ ಬಸ್ಸುಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಕ್ಕೆ ಮುನ್ನ ಉಚಿತ ಸಂಚಾರಕ್ಕೆ ಅವಕಾಶವಿತ್ತು. ಆದರೆ ಫಾಸ್ಟ್ ಟ್ಯಾಗ್ ಕಡ್ಡಾಯದ ಬಳಿಕ ಎಲ್ಲಾ ಬಸ್ಸುಗಳಿಗೆ ದುಬಾರಿ ದರ ವಿಧಿಸಲಾಗಿತ್ತು. ಇದನ್ನು ವಿರೋಧಿಸಿ ಬಸ್ಸು ಮಾಲಕರು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಟೋಲ್ ಸಂಸ್ಥೆಗೆ ಹಲವು ಮನವಿ ಮಾಡಿತ್ತು. ಆದರೆ ಯಾವುದೇ ರೀತಿಯಲ್ಲಿ ಟೋಲ್ ಸಂಸ್ಥೆ ರಿಯಾಯಿತಿಗೆ ಒಪ್ಪದ ಕಾರಣ ಸೋಮವಾರದಿಂದ ಅನಿರ್ಧಿಷ್ಠಾವಧಿವರೆಗೆ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಟೋಲ್ ಸಮಸ್ಯೆ ಇತ್ಯರ್ಥವಾಗದೆ ಬಸ್ಸುಗಳನ್ನು ಅನಿರ್ಧಿಷ್ಠಾವಧಿವರೆಗೆ ಸಂಚಾರ ಸ್ಥಗಿತಕ್ಕೆ ನಿರ್ಧರಿಸಿದ್ದು, ಮಂಗಳವಾರದಿಂದ ಎಕ್ಸ್ ಪ್ರೆಸ್ ಬಸ್ ಗಳ ಸಂಚಾರವನ್ನೂ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದರು.

ಕಳೆದ 3 ದಿನಗಳಿಂದ ಟೋಲ್ ಮ್ಯಾನೇಜರ್ ಶಿವಪ್ರಸಾದ್ ಶೆಟ್ಟಿ ಮತ್ತು ಬಶೀರ್‍ರವರು ಟೋಲ್ ಸಮಸ್ಯೆ ಇತ್ಯರ್ಥಕ್ಕೆ ನವಯುಗ್ ಕೇಂದ್ರ ಕಛೇರಿಯ ಮುಖ್ಯಸ್ಥರೊಂದಿಗೆ ಚರ್ಚಿಸುತ್ತಿದ್ದರೂ ಸಮಸ್ಯೆಗೆ ಪರಿಹಾರ ಸಿಕ್ಕಿರಲಿಲ್ಲ. 

ಕೆನರಾ ಬಸ್ ಮಾಲಕ ಸಂಘದ ಉಪಾಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಸುರೇಶ್ ಕುಮಾರ್ ಕುಯಿಲಾಡಿ, ಸಂಘದ ಪದಾಧಿಕಾರಿಗಳಾದ ರಾಜೇಶ್ ಶೆಟ್ಟಿ, ಸಂದೇಶ್ ಮರೋಲಿ, ದಿನೇಶ್ ಆರ್.ಕೆ., ನಿಶಾಂತ್, ನಾಗೇಶ್, ಅಬ್ದುಲ್ ಹಮೀದ್, ಟೋಲ್ ಹೋರಾಟ ಸಮಿತಿಯ ಸಂಚಾಲಕ ಶೇಖರ್ ಹೆಜ್ಮಾಡಿ, ಹೆಜಮಾಡಿ ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುಧಾಕರ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X