Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆ್ಯಸ್ಟ್ರಝೆನೆಕ ಲಸಿಕೆಯ ಬಳಕೆಗೆ 21...

ಆ್ಯಸ್ಟ್ರಝೆನೆಕ ಲಸಿಕೆಯ ಬಳಕೆಗೆ 21 ದೇಶಗಳ ತಾತ್ಕಾಲಿಕ ನಿಷೇಧ

ಡಬ್ಲ್ಯುಎಚ್‌ಒ, ಯುರೋಪ್ ಔಷಧ ನಿಯಂತ್ರಕ ತುರ್ತು ಸಭೆ

ವಾರ್ತಾಭಾರತಿವಾರ್ತಾಭಾರತಿ16 March 2021 11:24 PM IST
share
ಆ್ಯಸ್ಟ್ರಝೆನೆಕ ಲಸಿಕೆಯ ಬಳಕೆಗೆ 21 ದೇಶಗಳ ತಾತ್ಕಾಲಿಕ ನಿಷೇಧ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಮಾ. 16: ಆ್ಯಸ್ಟ್ರಝೆನೆಕ ಕಂಪೆನಿಯ ಕೋವಿಡ್-19 ಲಸಿಕೆಯನ್ನು ಸ್ವೀಕರಿಸಿದ ಹಲವರಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಕಂಡುಬಂದ ಬಳಿಕ, ಲಸಿಕೆಯ ಬಳಕೆಯನ್ನು 20ಕ್ಕೂ ಅಧಿಕ ದೇಶಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ಈ ಪೈಕಿ ಹೆಚ್ಚಿನವು ಯುರೋಪ್ ದೇಶಗಳಾಗಿವೆ.

ಲಸಿಕೆಯನ್ನು ಸ್ಥಗಿತಗೊಳಿಸಿರುವ ದೇಶಗಳ ಪಟ್ಟಿಗೆ ಮಂಗಳವಾರ ಸ್ವೀಡನ್ ಮತ್ತು ಲಾತ್ವಿಯ ದೇಶಗಳು ಸೇರ್ಪಡೆಗೊಂಡಿವೆ.

ಈವರೆಗೆ ಆ್ಯಸ್ಟ್ರಝೆನೆಕ ಲಸಿಕೆಯನ್ನು ನಿಷೇಧಿಸಿರುವ ದೇಶಗಳು: ಸ್ವೀಡನ್, ಲಾತ್ವಿಯ, ಫ್ರಾನ್ಸ್, ಜರ್ಮನಿ, ಇಟಲಿ, ಸ್ಪೇನ್, ಲಕ್ಸಂಬರ್ಗ್, ಸೈಪ್ರಸ್, ಪೋರ್ಚುಗಲ್, ಸ್ಲೊವೇನಿಯ, ಇಂಡೋನೇಶ್ಯ, ನೆದರ್‌ಲ್ಯಾಂಡ್ಸ್, ಐರ್‌ಲ್ಯಾಂಡ್, ಬಲ್ಗೇರಿಯ, ಕಾಂಗೊ, ಥಾಯ್ಲೆಂಡ್, ರೊಮೇನಿಯ, ಐಸ್‌ಲ್ಯಾಂಡ್, ಡೆನ್ಮಾರ್ಕ್, ನಾರ್ವೆ ಮತ್ತು ಆಸ್ಟ್ರಿಯ.

ಲಸಿಕೆಗೆ ಸಂಬಂಧಿಸಿದ ಲಭ್ಯವಿರುವ ಸುರಕ್ಷತಾ ಅಂಕಿಅಂಶಗಳನ್ನು ಪರೀಕ್ಷಿಸುವುದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ)ಯ ಪರಿಣತರು ಮಂಗಳವಾರ (ಜಿನೀವ ಕಾಲಮಾನ) ಸಭೆ ಸೇರುತ್ತಿದ್ದಾರೆ. ಆದರೆ, ಲಸಿಕೆಯ ಸುರಕ್ಷತೆ ಬಗ್ಗೆ ಸಂಸ್ಥೆಯು ಈಗಾಗಲೇ ವಿಶ್ವಾಸ ವ್ಯಕ್ತಪಡಿಸಿದೆ.

ಈವರೆಗೆ ಬ್ರಿಟನ್ ಮತ್ತು ಐರೋಪ್ಯ ಒಕ್ಕೂಟದಲ್ಲಿ 1.7 ಕೋಟಿಗೂ ಅಧಿಕ ಮಂದಿ ಆ್ಯಸ್ಟ್ರಝೆನೆಕ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಆ ಪೈಕಿ, ಕಳೆದ ವಾರದವರೆಗೆ 40ಕ್ಕಿಂತಲೂ ಕಡಿಮೆ ರಕ್ತಹೆಪ್ಪುಗಟ್ಟಿರುವ ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟಿಶ್-ಸ್ವೀಡಿಶ್ ಬಹುರಾಷ್ಟ್ರೀಯ ಕಂಪೆನಿಯಾಗಿರುವ ಆ್ಯಸ್ಟ್ರಝೆನೆಕ ಹೇಳಿದೆ.

ಈ ನಡುವೆ, ಲಸಿಕೆ ಸ್ವೀಕರಿಸಿದವರಲ್ಲಿ ಕಂಡುಬಂದಿರುವ ರಕ್ತಹೆಪ್ಪುಗಟ್ಟುವಿಕೆ ಸಮಸ್ಯೆ ಬಗ್ಗೆ ಚರ್ಚಿಸಲು ಯುರೋಪ್‌ನ ಔಷಧ ನಿಯಂತ್ರಕ ‘ಯುರೋಪಿಯನ್ ಮೆಡಿಸಿನ್ಸ್ ಏಜನ್ಸಿ (ಇಎಮ್‌ಎ)’ ಗುರುವಾರ ಸಭೆ ಸೇರಲಿದೆ.

ಲಸಿಕೆ ಸುರಕ್ಷಿತ: ಬ್ರಿಟನ್ ಪ್ರಧಾನಿ

ಲಂಡನ್, ಮಾ. 16: ಆ್ಯಸ್ಟ್ರಝೆನೆಕ ಕೊರೋನ ವೈರಸ್ ಲಸಿಕೆಯು ಸುರಕ್ಷಿತವಾಗಿದೆ ಎಂದು ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಮಂಗಳವಾರ ಹೇಳಿದ್ದಾರೆ.

 ‘‘ಲಸಿಕೆಯು ಸುರಕ್ಷಿತವಾಗಿದೆ ಹಾಗೂ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ’’ ಎಂದು ‘ದ ಟೈಮ್ಸ್’ ಪತ್ರಿಕೆಯಲ್ಲಿ ಬರೆದ ಲೇಖನವೊಂದರಲ್ಲಿ ಅವರು ಹೇಳಿದ್ದಾರೆ.

‘‘ಈ ಲಸಿಕೆಯನ್ನು ಬ್ರಿಟನ್, ಭಾರತದಿಂದ ಹಿಡಿದು ಅಮೆರಿಕದವರೆಗೆ ಹಲವು ಸ್ಥಳಗಳಲ್ಲಿ ಉತ್ಪಾದಿಸಲಾಗುತ್ತಿದೆ ಹಾಗೂ ಅದನ್ನು ಜಗತ್ತಿನಾದ್ಯಂತ ಬಳಸಲಾಗುತ್ತಿದೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X