Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊಸೈಟಿಗಳ ನೋಂದಣಿ ವಿಧೇಯಕ:...

ಸೊಸೈಟಿಗಳ ನೋಂದಣಿ ವಿಧೇಯಕ: ತಿದ್ದುಪಡಿಗಳೊಂದಿಗೆ ಮಂಡಿಸುವುದಾಗಿ ರಾಜ್ಯ ಸರಕಾರ ಭರವಸೆ

ವಿರೋಧ ಪಕ್ಷದ ಮನವಿಗೆ ಸ್ಪಂದಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ17 March 2021 8:14 PM IST
share
ಸೊಸೈಟಿಗಳ ನೋಂದಣಿ ವಿಧೇಯಕ: ತಿದ್ದುಪಡಿಗಳೊಂದಿಗೆ ಮಂಡಿಸುವುದಾಗಿ ರಾಜ್ಯ ಸರಕಾರ ಭರವಸೆ

ಬೆಂಗಳೂರು, ಮಾ.17: ಅಲ್ಪಸಂಖ್ಯಾತರ ಸಂಘ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಸ್ತಾವ ಹೊಂದಿರುವ 2021ನೆ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ವಿಧೇಯಕವನ್ನು ಕೆಲವು ತಿದ್ದುಪಡಿಗಳೊಂದಿಗೆ ಮಂಡಿಸುವುದಾಗಿ ರಾಜ್ಯ ಸರಕಾರ ಭರವಸೆ ನೀಡಿದೆ.

ಬುಧವಾರ ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಸಹಕಾರ ಸಂಘಗಳ ರಿಜಿಸ್ಟ್ರಾರ್ ಜೊತೆ ಸಭೆ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಶಾಸಕರಾದ ರಮೇಶ್ ಕುಮಾರ್, ನಸೀರ್ ಅಹ್ಮದ್, ಝಮೀರ್ ಅಹ್ಮದ್ ಖಾನ್ ಈ ವಿಧೇಯಕದಲ್ಲಿರುವ ನ್ಯೂನತೆಗಳ ಬಗ್ಗೆ ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ ವಕ್ಫ್ ಕಾಯ್ದೆ ಜಾರಿಗೆ ಬರುವ ಮುನ್ನ 1960ರ ಕರ್ನಾಟಕ ಸೊಸೈಟಿಗಳ ನೋಂದಣಿ ಅಧಿನಿಯಮ ಜಾರಿಯಾಗಿತ್ತು. ಅದರಂತೆ, ಸುಮಾರು 6 ಸಾವಿರ ಅಲ್ಪಸಂಖ್ಯಾತರ ಸಂಸ್ಥೆಗಳು ಕರ್ನಾಟಕ ಸೊಸೈಟಿಗಳ ನೋಂದಣಿ ಅಧಿನಿಯಮದಂತೆ ನೋಂದಣಿಯಾಗಿವೆ. ವಕ್ಫ್ ಕಾಯ್ದೆ ಜಾರಿಗೆ ಬಂದ ನಂತರ ಅವುಗಳು ವಕ್ಫ್ ಬೋರ್ಡ್ ಅಧೀನಕ್ಕೆ ಸೇರ್ಪಡೆಯಾಗಿವೆ ಎಂದು ತಿಳಿಸಿದರು.

ಸೊಸೈಟಿಗಳ ನೋಂದಣಿ ಅಧಿನಿಯಮದಂತೆ ವಕ್ಫ್ ಬೋರ್ಡ್ ಅಧೀನಕ್ಕೆ ಸೇರಿಸಲ್ಪಟ್ಟಿರುವ ಸಂಸ್ಥೆಗಳು, ಬೈಲಾ ರಚನೆ ಮಾಡಬೇಕು, ವಾರ್ಷಿಕ ಸಾಮಾನ್ಯ ಸಭೆಗಳನ್ನು ಕರೆಯಬೇಕು, ಆಡಳಿತ ಮಂಡಳಿಗಳಿಗೆ ಚುನಾವಣೆಗಳನ್ನು ನಡೆಸಬೇಕಿದೆ. ಸೊಸೈಟಿಗಳ ನೋಂದಣಿ ಅಧಿನಿಯಮದಡಿಯಲ್ಲಿ ಉಳಿದುಕೊಂಡಿರುವ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಿಕೊಳ್ಳಿ ನಮ್ಮ ಅಭ್ಯಂತರವಿಲ್ಲ. ಆದರೆ, ಈಗಾಗಲೆ ವಕ್ಫ್ ಬೋರ್ಡ್ ಅಧೀನದಲ್ಲಿರುವ ಸಂಸ್ಥೆಗಳಿಗೆ ಈ ವಿಧೇಯಕದಿಂದ ವಿನಾಯಿತಿ ನೀಡುವಂತೆ ವಿರೋಧ ಪಕ್ಷದ ಸದಸ್ಯರು ಸಚಿವರಿಗೆ ಮನವಿ ಮಾಡಿದರು.

ವಿರೋಧ ಪಕ್ಷದ ಸದಸ್ಯರಿಗೆ ಸ್ಪಂದಿಸಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಈಗಾಗಲೆ ಸಿದ್ಧವಾಗಿರುವ ವಿಧೇಯಕದ ಬದಲಾಗಿ ತಿದ್ದುಪಡಿಯೊಂದಿಗೆ ಹೊಸ ವಿಧೇಯಕವನ್ನು ಮಂಡಿಸಲು ಸಿದ್ಧತೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು.

'ವಾರ್ತಾಭಾರತಿ'ಯಲ್ಲಿ ಸುದ್ದಿ ಪ್ರಕಟವಾಗಿತ್ತು

ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ವಿಧೇಯಕ 2021 ಕುರಿತು ವಾರ್ತಾಭಾರತಿ ಮಾ.14ರಂದು ಮುಖಪುಟದಲ್ಲಿ ಸುದ್ದಿ ಪ್ರಕಟಿಸಿತ್ತು.

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅಭಿನಂದನೆ

ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ) ವಿಧೇಯಕ 2021ಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಸಂಘ-ಸಂಸ್ಥೆಗಳಲ್ಲಿ ಮನೆ ಮಾಡಿದ್ದ ಆತಂಕವನ್ನು ದೂರ ಮಾಡಲು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಸಹಕಾರ ಸಂಘಗಳ ರಿಜಿಸ್ಟ್ರಾರ್ ಜೊತೆ ಸಭೆ ನಡೆಸಿ, ಅವರ ಮನವೊಲಿಸಲು ಯಶಸ್ವಿಯಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಮೇಶ್ ಕುಮಾರ್ ಅವರಿಗೆ ಅಲ್ಪಸಂಖ್ಯಾತ ಸಮುದಾಯಗಳ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.

-ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X