ರಾಜ್ಯದಲ್ಲಿ 1272 ಹೊಸ ಕೊರೋನ ಪ್ರಕರಣ ದೃಢ: ನಾಲ್ವರು ಸಾವು

ಬೆಂಗಳೂರು, ಮಾ.17: ರಾಜ್ಯದಲ್ಲಿ ಬುಧವಾರದಂದು 1272 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ನಾಲ್ವರು ಸೋಂಕಿಗೆ ಬಲಿಯಾಗಿದ್ದು, 479 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 963614ಕ್ಕೆ ತಲುಪಿದ್ದು, 134 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12407ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10220ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ನಾಲ್ವರು ಸೋಂಕಿತರು ಬಲಿ: ಬೆಂಗಳೂರು ನಗರ 3, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1272 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 5, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 26, ಬೆಂಗಳೂರು ನಗರ 786, ಬೀದರ್ 47, ಚಾಮರಾಜನಗರ 4, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 10, ಚಿತ್ರದುರ್ಗ 7, ದಕ್ಷಿಣ ಕನ್ನಡ 72, ದಾವಣಗೆರೆ 5, ಧಾರವಾಡ 12, ಗದಗ 4, ಹಾಸನ 19, ಹಾವೇರಿ 1, ಕಲಬುರಗಿ 61, ಕೊಡಗು 2, ಕೋಲಾರ 23, ಕೊಪ್ಪಳ 3, ಮಂಡ್ಯ 16, ಮೈಸೂರು 35, ರಾಯಚೂರು 4, ರಾಮನಗರ 2, ಶಿವಮೊಗ್ಗ 5, ತುಮಕೂರು 16, ಉಡುಪಿ 42, ಉತ್ತರ ಕನ್ನಡ 3, ವಿಜಯಪುರ 17, ಯಾದಗಿರಿ ಜಿಲ್ಲೆಯಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ.
ರಾಜಧಾನಿಯಲ್ಲಿ 786 ಕೊರೋನ ಪ್ರಕರಣ ದೃಢ
ರಾಜಧಾನಿಯಲ್ಲಿ ಬುಧವಾರದಂದು 786 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. 271 ಸೋಂಕಿತರು ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 413485 ಕೊರೋನ ಸೋಂಕಿತರು ದೃಢಪಟ್ಟಿದ್ದು, 4530 ಜನರು ಸೋಂಕಿಗೆ ಬಲಿಯಾಗಿದ್ದಾರೆ. 401610 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







