Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನದ ಕಾರಾಗೃಹದಲ್ಲಿ ಹಿಂದುಳಿದ...

ರಾಜಸ್ಥಾನದ ಕಾರಾಗೃಹದಲ್ಲಿ ಹಿಂದುಳಿದ ಜಾತಿಯ ಕೈದಿಗಳು ಅಡುಗೆ ಮಾಡುವುದಕ್ಕೆ ನಿಷೇಧ ವಿಧಿಸುವ ಕಾಯ್ದೆಗೆ ತಿದ್ದುಪಡಿ

ವಾರ್ತಾಭಾರತಿವಾರ್ತಾಭಾರತಿ17 March 2021 11:55 PM IST
share
ರಾಜಸ್ಥಾನದ ಕಾರಾಗೃಹದಲ್ಲಿ ಹಿಂದುಳಿದ ಜಾತಿಯ ಕೈದಿಗಳು ಅಡುಗೆ ಮಾಡುವುದಕ್ಕೆ ನಿಷೇಧ ವಿಧಿಸುವ ಕಾಯ್ದೆಗೆ ತಿದ್ದುಪಡಿ

ಭುವನೇಶ್ವರ, ಮಾ. 17: ರಾಜಸ್ಥಾನದ ಕಾರಾಗೃಹದಲ್ಲಿ ಹಿಂದುಳಿದ ಜಾತಿಗಳ ಕೈದಿಗಳು ಅಡುಗೆ ಕೆಲಸ ನಿರ್ವಹಿಸುವುದನ್ನು ನಿಷೇಧಿಸುವ 120 ವರ್ಷ ಹಳೆಯ ಕಾಯ್ದೆಗೆ ಕೊನೆಗೂ ತಿದ್ದುಪಡಿ ತರಲಾಗಿದೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಾಗೃಹದಲ್ಲಿ ಅಡುಗೆ ಮಾಡುವುದು ಹಾಗೂ ಸ್ವಚ್ಛಗೊಳಿಸುವಂತಹ ಕಾರ್ಯಗಳಿಗೆ ನಿಯೋಜಿಸುವ ಸಂದರ್ಭ ಜಾತಿಯ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಎಸಗುವ ಈ ಕಾಯ್ದೆಯನ್ನು 120 ವರ್ಷಗಳ ಹಿಂದೆ ಬ್ರಿಟೀಷ್ ಆಡಳಿತದ ಸಂದರ್ಭ ರೂಪಿಸಲಾಗಿತ್ತು.

ರಾಜಸ್ಥಾನ ಕಾರಾಗೃಹದ ಪ್ರಧಾನ ನಿರ್ದೇಶಕ (ಡಿಜಿ) ರಾಜೀವ್ ದಾಸೋಟ್ ಈ ಕಾಯ್ದೆಗೆ ತಿದ್ದುಪಡಿ ತರುವಂತೆ ಈ ವರ್ಷ ಜನವರಿಯಲ್ಲಿ ಬಲವಾಗಿ ಪ್ರತಿಪಾದಿಸಿದ್ದರು ಹಾಗೂ ಫೆಬ್ರವರಿಯಲ್ಲಿ ತಿದ್ದುಪಡಿ ತರುವಂತೆ ನೋಡಿಕೊಂಡರು.

‘‘ಭಾರತ ಸ್ವಾತಂತ್ರ ಗಳಿಸಿದ ಹಾಗೂ ನೂತನ ಕಾಯ್ದೆಗಳನ್ನು ಜಾರಿಗೆ ತಂದ ಹೊರತಾಗಿಯೂ ಕಾರಾಗೃಹ ಕಾಯ್ದೆ 1984 (1894ರ ಕೇಂದ್ರ ಕಾಯ್ದೆ ನಂ. 9) ಅಡಿಯಲ್ಲಿ ರೂಪಿಸಲಾದ ರಾಜಸ್ಥಾನದ ಕಾರಾಗೃಹ ಕಾಯ್ದೆ 1951ರ ಅಡಿಯಲ್ಲಿ ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯವನ್ನು ಅನುಸರಿಸುವುದು ಮುಂದುವರಿದಿತ್ತ್ತು’’ ಎಂದು ದಾಸೋಟ್ ಹೇಳಿದ್ದಾರೆ.

ಕಾರಾಗೃಹದಲ್ಲಿ ಬ್ರಾಹ್ಮಣರು ಅಥವಾ ಉತ್ತಮ ಜಾತಿ ಹಿಂದೂ ಕೈದಿಗಳು ಮಾತ್ರ ಅಡುಗೆ ಮಾಡಬೇಕು. ಸ್ವಚ್ಛಗೊಳಿಸುವ ಕೆಲಸವನ್ನು ಕೆಳಗಿನ ಜಾತಿಯ ಕೈದಿಗಳಿಗೆ ವಹಿಸಿಕೊಡಬೇಕು ಎಂದು ಈ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ.

ದೇಶ ಸ್ವತಂತ್ರ ಹೊಂದಿ ಹೊಸ ಕಾನೂನು ರಚನೆಯಾದ ಬಳಿಕವೂ ಈ ತಾರತಮ್ಯ ಮುಂದಿರುವುದು ಅಚ್ಚರಿಯ ವಿಚಾರ. ಸರಕಾರೇತರ ಸಂಸ್ಥೆಗಳು ಹಾಗೂ ಉಚ್ಚ ನ್ಯಾಯಾಲಯ ಈ ತಾರತಮ್ಯವನ್ನು ತನ್ನ ಗಮನಕ್ಕೆ ತಂದಿತು. ತಾನು ಕೂಡಲೇ ಈ ಕಾಯ್ದೆಯ ತಿದ್ದುಪಡಿಗೆ ಪ್ರಸ್ತಾವಿಸಲು ನಿರ್ಧರಿಸಿದೆ ಎಂದು ದಾಸೋಟ್ ಹೇಳಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದರು ಹಾಗೂ ಕಾಯ್ದೆಗೆ 20 ದಿನಗಳ ಒಳಗೆ ತಿದ್ದುಪಡಿಗೆ ನೆರವು ನೀಡಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು ಎಂದು ದಾಸೋಟ್ ಹೇಳಿದರು.

ಈ ವರ್ಷ ಪೆಬ್ರವರಿ 12ರಂದು ಸರಕಾರ ರಾಜಸ್ಥಾನ ಕಾರಾಗೃಹ ಕಾಯ್ದೆ-1951ಕ್ಕೆ ತಿದ್ದುಪಡಿ ತಂದಿತು ಹಾಗೂ ಅದನ್ನು ರಾಜಸ್ಥಾನ ಕಾರಾಗೃಹ (ತಿದ್ದುಪಡಿ)ಕಾಯ್ದೆ-2021 ಎಂದು ಬದಲಾಯಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X