Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಹನಗಳ ಗುಜರಿ ನೀತಿಯಡಿ ಹೊಸ ಕಾರುಗಳ...

ವಾಹನಗಳ ಗುಜರಿ ನೀತಿಯಡಿ ಹೊಸ ಕಾರುಗಳ ಖರೀದಿಗೆ ಶೇ.5ರಷ್ಟು ರಿಯಾಯಿತಿ:ಸಚಿವ ಗಡ್ಕರಿ

ವಾರ್ತಾಭಾರತಿವಾರ್ತಾಭಾರತಿ18 March 2021 8:14 PM IST
share
ವಾಹನಗಳ ಗುಜರಿ ನೀತಿಯಡಿ ಹೊಸ ಕಾರುಗಳ ಖರೀದಿಗೆ ಶೇ.5ರಷ್ಟು ರಿಯಾಯಿತಿ:ಸಚಿವ ಗಡ್ಕರಿ

ಹೊಸದಿಲ್ಲಿ,ಮಾ.18: ವಾಹನ ಗುಜರಿ ನೀತಿಯಡಿ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ಕಾರುಗಳನ್ನು ಖರೀದಿಸುವವರಿಗೆ ಸುಮಾರು ಶೇ.5ರಷ್ಟು ರಿಯಾಯಿತಿಯು ದೊರೆಯಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ,ಹೆದ್ದಾರಿಗಳು ಮತ್ತು ಎಂಎಸ್‌ಎಂಇ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದರು.

2021-22ನೇ ಸಾಲಿನ ಮುಂಗಡಪತ್ರದಲ್ಲಿ ಪ್ರಕಟಿಸಲಾಗಿರುವ ಸ್ವಯಂಪ್ರೇರಿತ ವಾಹನ ಗುಜರಿ ನೀತಿಯಡಿ ಖಾಸಗಿ ವಾಹನಗಳನ್ನು 20 ವರ್ಷಗಳ ಬಳಿಕ ಮತ್ತು ವಾಣಿಜ್ಯ ವಾಹನಗಳನ್ನು 15 ವರ್ಷಗಳ ಬಳಿಕ ಫಿಟ್‌ನೆಸ್ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಪರೀಕ್ಷೆಯಲ್ಲಿ ವಿಫಲಗೊಂಡರೆ ಅವುಗಳನ್ನು ಗುಜರಿಗೆ ಹಾಕುವುದು ಕಡ್ಡಾಯವಾಗಲಿದೆ. ಅಲ್ಲದೆ ಮರುನೋಂದಣಿಯು ತುಂಬಾ ದುಬಾರಿಯಾಗಲಿದೆ.

ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕುವವರು ಗುಜರಿ ಪ್ರಮಾಣಪತ್ರವನ್ನು ಸಲ್ಲಿಸಿದರೆ ಹೊಸ ವಾಹನಗಳ ಖರೀದಿಗೆ ಶೇ.5ರಷ್ಟು ರಿಯಾಯಿತಿಯನ್ನು ಒದಗಿಸುವಂತೆ ವಾಹನ ತಯಾರಕರಿಗೆ ಸೂಚಿಸಲಾಗಿದೆ ಎಂದು ಗಡ್ಕರಿ ತಿಳಿಸಿದರು.

ನೂತನ ಗುಜರಿ ನೀತಿಯಿಂದ ಹೊಸ ವಾಹನಗಳ ಮಾರಾಟ ಹೆಚ್ಚಲಿದೆ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಸುಮಾರು 40,000 ಕೋ.ರೂ.ಗಳ ಏರಿಕೆಯಾಗಲಿದೆ ಎಂದ ಗಡ್ಕರಿ,ನೋಂದಾಯಿತ ಗುಜರಿ ಕೇಂದ್ರಗಳ ಮೂಲಕ ತಮ್ಮ ಹಳೆಯ ಮತ್ತು ಬಳಕೆಗೆ ಅನರ್ಹ ವಾಹನಗಳನ್ನು ಗುಜರಿಗೆ ಹಾಕುವ ಮಾಲಿಕರಿಗೆ ಆಕರ್ಷಕ ಉತ್ತೇಜನ ಕ್ರಮಗಳನ್ನು ಜಾರಿಗೆ ತರಲಾಗುವುದು. ಸದ್ರಿ ಗುಜರಿ ಕೇಂದ್ರಗಳು ಮಾಲಿಕರಿಗೆ ಗುಜರಿ ಪ್ರಮಾಣಪತ್ರಗಳನ್ನು ವಿತರಿಸಲಿವೆ ಎಂದರು. ಉತ್ತೇಜನ ಕ್ರಮಗಳನ್ನು ಪಟ್ಟಿ ಮಾಡಿದ ಅವರು,ಗುಜರಿಗೆ ಹಾಕಲಾದ ವಾಹನಕ್ಕೆ ಹೊಸ ವಾಹನದ ಶೋರೂಮ್ ಬೆಲೆಯ ಸುಮಾರು ಶೇ.4ರಿಂದ ಶೇ.6ರಷ್ಟು ವೌಲ್ಯವನ್ನು ಗುಜರಿ ಕೇಂದ್ರವು ಪಾವತಿಸಲಿದೆ. ರಸ್ತೆ ತೆರಿಗೆಯಲ್ಲಿ ಖಾಸಗಿ ವಾಹನಗಳಿಗೆ ಶೇ.25ರವರೆಗೆ ಮತ್ತು ವಾಣಿಜ್ಯ ವಾಹನಗಳಿಗೆ ಶೇ.16ರಷ್ಟು ರಿಯಾಯಿತಿಯನ್ನು ಒದಗಿಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಬಹುದಾಗಿದೆ. ಇದರ ಜೊತೆಗೆ ಗುಜರಿ ಪ್ರಮಾಣಪತ್ರವನ್ನು ಸಲ್ಲಿಸಿದರೆ ಹೊಸ ವಾಹನಕ್ಕೆ ನೋಂದಣಿ ಶುಲ್ಕಗಳನ್ನು ಮನ್ನಾ ಮಾಡಬಹುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X