Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಋತುಸ್ರಾವದ ಸಂದರ್ಭದಲ್ಲಿ ರಕ್ತಕಣ್ಣೀರು...

ಋತುಸ್ರಾವದ ಸಂದರ್ಭದಲ್ಲಿ ರಕ್ತಕಣ್ಣೀರು ಸುರಿಸುತ್ತಿದ್ದ ಯುವತಿ

ವಾರ್ತಾಭಾರತಿವಾರ್ತಾಭಾರತಿ18 March 2021 10:55 PM IST
share

ಚಂಡಿಗಡ,ಮಾ.18: ಇಲ್ಲಿಯ 25ರ ಹರೆಯದ ಯುವತಿಯೋರ್ವಳು ರಕ್ತಕಣ್ಣೀರು ಸುರಿಸುತ್ತಿದ್ದುದು ಬಹಿರಂಗಗೊಂಡಿದ್ದು,ಇದು ಜನರಿಗೆ ಆಘಾತವನ್ನುಂಟು ಮಾಡಿದೆ.

ಈ ವಿಚಿತ್ರ ಸಮಸ್ಯೆಯಿಂದ ನರಳುತ್ತಿದ್ದ ಯುವತಿ ಇಲ್ಲಿಯ ಆಸ್ಪತ್ರೆಯೊಂದರ ಎಮರ್ಜನ್ಸಿ ವಾರ್ಡ್‌ಗೆ ಭೇಟಿ ನೀಡಿ ವೈದ್ಯರ ಬಳಿ ತನ್ನ ಕಷ್ಟವನ್ನು ಹೇಳಿಕೊಂಡಿದ್ದಳು. ತಿಂಗಳ ಹಿಂದೆಯೂ ಇಂತಹುದೇ ಸಮಸ್ಯೆಯನ್ನು ತಾನು ಅನುಭವಿಸಿದ್ದೆ ಎಂದೂ ಆಕೆ ತಿಳಿಸಿದ್ದಳು. ರಕ್ತಕಣ್ಣೀರು ಸುರಿಸುವಾಗ ಯಾವುದೇ ನೋವು ಅಥವಾ ಅಹಿತಕರ ಅನುಭವವಾಗುವುದಿಲ್ಲ ಎಂದು ಆಕೆ ಹೇಳಿದ್ದಳು.

ರಕ್ತಕಣ್ಣೀರಿಗೆ ಕಾರಣಗಳನ್ನು ತಿಳಿದುಕೊಳ್ಳಲು ವಿವಿಧ ಪರೀಕ್ಷೆಗಳನ್ನು ವೈದ್ಯರು ನಡೆಸಿದ್ದರು. ವಿವರವಾದ ತಪಾಸಣೆಯ ಬಳಿಕ ರಕ್ತಕಣ್ಣೀರು ಸುರಿಸಿದ್ದ ಎರಡೂ ಸಂದರ್ಭಗಳಲ್ಲಿ ಯುವತಿ ಋತುಮತಿಯಾಗಿದ್ದಳು ಎನ್ನುವುದು ಗೊತ್ತಾಗಿತ್ತು.

ಯುವತಿಯು ‘ಒಕ್ಯುಲರ್ ವಿಕಾರಿಯಸ್ ಮೆನ್‌ಸ್ಟ್ರುಯೇಷನ್ ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾಳೆ ಎಂಬ ನಿರ್ಧಾರಕ್ಕೆ ವೈದ್ಯರು ಬಂದಿದ್ದರು. ಈ ಸ್ಥಿತಿಗೆ ಕಾರಣವು ಈವರೆಗೆ ನಿಖರವಾಗಿ ಗೊತ್ತಾಗಿಲ್ಲವಾದರೂ ಎಂಡೊಮೆಟ್ರಿಯಾಸಿಸ್ ಅಥವಾ ಜನನಾಂಗ ಪ್ರದೇಶದ ಹೊರಗಿನ ಅಂಗಗಳಲ್ಲಿ ಗರ್ಭಕೋಶದ ಅಂಗಾಂಶದ ಅಸ್ತಿತ್ವವು ಈ ಸ್ಥಿತಿಯನ್ನುಂಟು ಮಾಡುವ ಅಂಶವಾಗಿರಬಹುದು ಎಂದು ತಜ್ಞರು ನಂಬಿದ್ದಾರೆ.

ವೈದ್ಯರು ಈಸ್ಟ್ರೋಜನ್ ಮತ್ತು ಪ್ರೊಜೆಸ್ಟೆರೋನ್‌ಗಳನ್ನು ಒಳಗೊಂಡ ಕೆಲವು ಮಾತ್ರೆಗಳನ್ನು ಸೇವಿಸುವಂತೆ ಸೂಚಿಸಿದ್ದು,ಮೂರು ತಿಂಗಳು ಅದನ್ನು ತಾನು ಪಾಲಿಸಿದ್ದೇನೆ ಮತ್ತು ಈಗ ರಕ್ತಕಣ್ಣೀರಿನ ಅನುಭವ ತನಗಾಗುತ್ತಿಲ್ಲ ಎಂದು ಯುವತಿ ತಿಳಿಸಿದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X