ನಾನು ನರೇಂದ್ರ ಮೋದಿಯಲ್ಲ, ನಾನು ಸುಳ್ಳು ಹೇಳುವುದಿಲ್ಲ: ಅಸ್ಸಾಂನಲ್ಲಿ ರಾಹುಲ್ ಗಾಂಧಿ
ದಿಬ್ರುಗ: ಮುಂಬರುವ ವಿಧಾನಸಭಾ ಚುನಾವಣೆಯ ಕುರಿತಾದಂತೆ ಅಸ್ಸಾಂ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸಿಎಎಯನ್ನು ಹಿಂದೆಗೆಯಲಾಗುವುದು ಎಂದು ಅವರು ಹೇಳಿಕೆ ನೀಡಿದ್ದಾರೆ.
ಅಸ್ಸಾಂನ ದಿಬ್ರುಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ "ಬಿಜೆಪಿಯು ಅಸ್ಸಾಂನ ಚಹಾ ಕಾರ್ಮಿಕರಿಗೆ 351ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ 167ರೂ.ಯನ್ನು ನೀಡಲಾಗುತ್ತಿದೆ. ನಾನು ನರೇಂದ್ರ ಮೋದಿಯಲ್ಲ. ನಾನು ಸುಳ್ಳು ಹೇಳುವುದಿಲ್ಲ. ನಾವು ಇಂದು ನಿಮಗೆ ೫ ಭರವಸೆಗಳನ್ನು ನೀಡುತ್ತಿದ್ದೇವೆ"
"ಅಸ್ಸಾಂನ ಚಹಾ ಕಾರ್ಮಿಕರಿಗೆ 365ರೂ., ಸಿಎಎ ಕಾಯ್ದೆಯನ್ನು ರದ್ದುಪಡಿಸುತ್ತೇವೆ. 5 ಲಕ್ಷದಷ್ಟು ಉದ್ಯೋಗಗಳ ನಿರ್ಮಾಣ, 200 ಯುನಿಟ್ ಗಳಷ್ಟು ಉಚಿತ ವಿದ್ಯುತ್ ಮತ್ತು ಗೃಹಿಣಿಯರಿಗೆ 2,000ರೂ. ನೀಡಲಾಗುವುದು" ಎಂದು ಸಮಾವೇಶದಲ್ಲಿ ಹೇಳಿಕೆ ನೀಡಿದ್ದಾರೆ.
Next Story