Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8ನೇ ತರಗತಿಯಲ್ಲಿ ಶಾಲೆ ತೊರೆದಿದ್ದ...

8ನೇ ತರಗತಿಯಲ್ಲಿ ಶಾಲೆ ತೊರೆದಿದ್ದ ವ್ಯಕ್ತಿಯಿಂದ 'ಶೇವಿಂಗ್‌ ಬ್ಲೇಡ್'‌ ಬಳಸಿ ಆಪರೇಷನ್:‌ ತಾಯಿ, ಮಗು ಮೃತ್ಯು!

ವಾರ್ತಾಭಾರತಿವಾರ್ತಾಭಾರತಿ20 March 2021 6:26 PM IST
share
8ನೇ ತರಗತಿಯಲ್ಲಿ ಶಾಲೆ ತೊರೆದಿದ್ದ ವ್ಯಕ್ತಿಯಿಂದ ಶೇವಿಂಗ್‌ ಬ್ಲೇಡ್‌ ಬಳಸಿ ಆಪರೇಷನ್:‌ ತಾಯಿ, ಮಗು ಮೃತ್ಯು!

ಲಕ್ನೊ: ಸ್ಥಳೀಯ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ 8ನೇ ತರಗತಿಯಲ್ಲ್ಲಿ ಡ್ರಾಪ್ ಔಟ್ ಆಗಿದ್ದ ವ್ಯಕ್ತಿಯೊಬ್ಬ ಹೆರಿಗೆಗೆ ಬಂದಿದ್ದ ಮಹಿಳೆಗೆ ಶೇವಿಂಗ್ ಬ್ಲೇಡ್‍ನಿಂದ ಸಿ-ಸೆಕ್ಷನ್ ಶಸ್ತ್ರಚಿಕಿತ್ಸೆ ನಡೆಸಿದ್ದ ಪರಿಣಾಮ ತಾಯಿ ಹಾಗೂ ಮಗು ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಸುಲ್ತಾನ್ ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. 

30 ವರ್ಷದ ರಾಜೇಂದ್ರ ಶುಕ್ಲಾ ಶೇವಿಂಗ್ ಬ್ಲೇಡ್ ಬಳಸಿ ಸಿ-ಸೆಕ್ಷನ್ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮಹಿಳೆ ಸಾವನ್ನಪ್ಪಿದ್ದರು. ಮಗು ಜನಿಸಿದ ಕೆಲವೇ ನಿಮಿಷದಲ್ಲಿ ನಿಧನವಾಗಿದೆ.

8ನೇ ತರಗತಿಯಲ್ಲಿ ಡ್ರಾಪ್ ಔಟ್ ಆಗಿರುವ ರಾಜೇಂದ್ರ ಶುಕ್ಲಾನನ್ನು ಸೈನಿ ಗ್ರಾಮದ ಮಾ ಶಾರದಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲು ರಾಜೇಶ್ ಸಾಹ್ಲಿ ಎಂಬಾತ  ನೇಮಿಸಿಕೊಂಡಿದ್ದ. ರಾಜೇಶ್ ನಡೆಸುತ್ತಿದ್ದ ಆಸ್ಪತ್ರೆಯನ್ನು ನೋಂದಾಯಿಸದೇ ಇರುವುದು ತನಿಖೆಯಿಂದ ತಿಳಿದಬಂದಿದೆ.  ಏತನ್ಮಧ್ಯೆ ಅಕ್ರಮ ಚಿಕಿತ್ಸಾಲಯಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸರು ಮುಖ್ಯ ವೈದ್ಯಕೀಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.

ಮಹಿಳೆಯ ಪತಿ ನೀಡಿರುವ ದೂರಿನ ಮೇರೆಗೆ ರಾಜೇಂದ್ರ ಶುಕ್ಲಾ ಹಾಗೂ ರಾಜೇಶ್ ಸಾಹ್ಲಿ ಇಬ್ಬರನ್ನೂ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ತನ್ನ ಪತ್ನಿ ಹಾಗೂ ನವಜಾತ ಮಗು ಮೃತಪಟ್ಟಿದ್ದಾರೆ ಎಂದು ಮಹಿಳೆಯ ಪತಿ ರಾಜಾರಾಮ್ ದೂರು ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸುಲ್ತಾನ್ ಪುರ ಎಸ್ಪಿ ಅರವಿಂದ ಚತುರ್ವೇದಿ ತಿಳಿಸಿದ್ದಾರೆ. ಇದು ಶಸ್ತ್ರಚಿಕಿತ್ಸೆ ನಡೆಸಲು ಯಾವುದೇ ಮೂಲ ಸೌಕರ್ಯಗಳಿಲ್ಲದ, ನೋಂದಾಯಿಸದ ಕ್ಲಿನಿಕ್ ಎಂದು ನಮಗೆ ತಿಳಿದುಬಂದಿದೆ. ಆಪರೇಶನ್ ನಡೆಸಲು ರೇಝರ್ ಬ್ಲೇಡ್ ಗಳನ್ನು ಬಳಸಲಾಗಿದೆ ಎಂದು ಅರವಿಂದ ಚತುರ್ವೇದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X