Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ರೈತ ಮುಖಂಡರನ್ನು ಸ್ವಾಗತಿಸಿ,...

ತುಮಕೂರು: ರೈತ ಮುಖಂಡರನ್ನು ಸ್ವಾಗತಿಸಿ, ಬಿಳ್ಕೋಟ್ಟ ರೈತರು, ಪ್ರಗತಿಪರ ಸಂಘಟನೆಗಳ ಮುಖಂಡರು

ವಾರ್ತಾಭಾರತಿವಾರ್ತಾಭಾರತಿ20 March 2021 6:35 PM IST
share
ತುಮಕೂರು: ರೈತ ಮುಖಂಡರನ್ನು ಸ್ವಾಗತಿಸಿ, ಬಿಳ್ಕೋಟ್ಟ ರೈತರು, ಪ್ರಗತಿಪರ ಸಂಘಟನೆಗಳ ಮುಖಂಡರು

ತುಮಕೂರು, ಮಾ.20: ದಿಲ್ಲಿಯಲ್ಲಿ ಕರಾಳ ಕೃಷಿ ಮಸೂದೆಗಳ ರದ್ದತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ರೈತ ಹೋರಾಟದ ಭಾಗವಾಗಿ ಶಿವಮೊಗ್ಗದಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಹಮ್ಮಿಕೊಂಡಿರುವ ರೈತ ಮಹಾ ಪಂಚಾಯತ್ ನಲ್ಲಿ ಭಾಗವಹಿಸಲು ತುಮಕೂರು ಮೂಲಕ ಪ್ರಯಾಣ ಬೆಳೆಸಿದ ರೈತ ಹೋರಾಟಗಾರರಾದ ರಾಕೇಶ್ ಟಿಕಾಯತ್ ಹಾಗೂ ತಂಡವನ್ನು ತುಮಕೂರಿನಲ್ಲಿ ರೈತ ಸಂಘಟನೆಗಳು, ಎಡಪಕ್ಷಗಳ ಕಾರ್ಯಕರ್ತರು, ಎಎಪಿ ಪಕ್ಷದ ಮುಖಂಡರು, ಪ್ರಗತಿಪರ ಹೋರಾಟಗಾರರು ಸ್ವಾಗತಿಸಿ, ಬಿಳ್ಕೋಟ್ಟರು.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ರೈತ ಹೋರಾಟಗಾರರಾದ ರಾಕೇಶ್ ಟಿಕಾಯತ್, ಡಾ.ದರ್ಶನ್‍ಪಾಲ್, ಯದುವೀರ ಸಿಂಗ್, ಚುಕ್ಕಿ ನಂಜುಂಡಸ್ವಾಮಿ, ರಾಮಕೃಷ್ಣ ಸೇರಿದಂತೆ ಹಲವು ನಾಯಕರು ಇಂದು ತುಮಕೂರಿನ ಟೌನ್‍ಹಾಲ್ ವೃತ್ತಕ್ಕೆ ಆಗಮಿಸಿದ ವೇಳೆ ಅವರಿಗೆ ಪ್ರಗತಿಪರ ಹೋರಾಟಗಾರರಾದ ಡಾ.ಬಸವರಾಜು, ಕೆ.ದೊರೈರಾಜು, ರೈತ ಸಂಘದ ಎ.ಗೋವಿಂದ ರಾಜು, ಆನಂದಪಟೇಲ್ ಸೇರಿದಂತೆ ಅನೇಕ ಮುಖಂಡರು ಹೂಗುಚ್ಚ ನೀಡಿ ಸ್ವಾಗತಿಸಿದ್ದಲ್ಲದೆ, ಎಳೆ ನೀರು ನೀಡಿದರು.

ಈ ವೇಳೆ ಮಾತನಾಡಿದ ರೈತ ನಾಯಕ ರಾಕೇಶ್ ಟಿಕಾಯತ್, ರೈತರಿಗೆ ಮರಣಶಾಸನವಾಗಿರುವ ಮೂರು ರೈತ ವಿರೋಧಿ ಶಾಸನಗಳನ್ನ ಹಿಂದಕ್ಕೆ ಪಡೆಯಬೇಕು ಹಾಗೂ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಬೇಕೆಂದು ಆಗ್ರಹಿಸಿ ಕಳೆದ 120 ದಿನಗಳಿಂದ ದಿಲ್ಲಿಯಲ್ಲಿ ನಡೆಯುತ್ತಿರುವ ಈ ಹೋರಾಟವನ್ನು ದೇಶದಾದ್ಯಂತ ವಿಸ್ತರಿಸಬೇಕೆಂಬ ಇಚ್ಚೆಯಿಂದ ಮೂರು ದಿನಗಳ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ. ಇಂದು ಶಿವಮೊಗ್ಗದಲ್ಲಿ ಮತ್ತು ನಾಳೆ ಹಾವೇರಿಯಲ್ಲಿ ರೈತರ ಮಹಾ ಪಂಚಾಯತ್ ನಡೆಯಲಿದೆ. ಮಾ.22 ರಂದು ಬೃಹತ್ ಸಂಖ್ಯೆಯಲ್ಲಿ ರೈತರೊಂದಿಗೆ ವಿಧಾನಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮವಿದೆ. ಎಂ.ಎಸ್.ಪಿ ಬಗ್ಗೆ ಸರಕಾರ ಸ್ಪಷ್ಟ ಕಾನೂನು ತರುವವರೆಗೂ ನಮ್ಮ ಹೋರಾಟ ನಿಲ್ಲದು. ಇದಕ್ಕೆ ನಾಡಿನ ಎಲ್ಲಾ ರೈತಾಪಿ ವರ್ಗ, ನಾಗರಿಕರು ನಮ್ಮ ಈ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕರೆ ನೀಡಿದರು.

ಈ ವೇಳೆ ಪ್ರಗತಿಪರ ಹೋರಾಟಗಾರರಾದ ಡಾ.ಆರುಂಧತಿ, ತಾಜುದ್ದೀನ್ ಷರೀಫ್, ಪಿ.ಎನ್.ರಾಮಯ್ಯ, ಕೊಟ್ಟಶಂಕರ್, ಸಿಐಟಿಯುನ ಸೈಯದ್ ಮುಜೀಬ್, ಎನ್.ಕೆ.ಸುಬ್ರಮಣ್ಯ, ಎಐಕೆಸಿಸಿಯ ಸಂಚಾಲಕ ಸಿ.ಯತಿರಾಜು, ಡಾ.ಮುರುಳೀಧರ್, ಪಂಡಿತ್ ಜವಹರ್, ಎಎಪಿ ಜಿಲ್ಲಾಧ್ಯಕ್ಷ ಮುನೀರ್ ಅಹಮದ್, ಸಂಘಟನಾ ಕಾರ್ಯದರ್ಶಿ ಉಮರ್ ಫಾರೂಕ್, ಕಾಂಗ್ರೆಸ್ ಮುಖಂಡರಾದ ರಾಯಸಂದ್ರ ರವಿಕುಮಾರ್, ಎ.ನರಸಿಂಹಮೂರ್ತಿ, ರೈತ ಸಂಘದ ಮತ್ತು ಹಸಿರು ಸೇನೆಯ ಧನಂಜಯ ಆರಾಧ್ಯ ಸೇರಿದಂತೆ ಹಲವರು ಹಾಜರಿದ್ದು, ರೈತರ ಹೋರಾಟಗಾರರಿಗೆ ಬೆಂಬಲ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X