Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಕಾಯ್ದೆಗಳನ್ನು ರದ್ದು ಮಾಡಲು...

ಕೃಷಿ ಕಾಯ್ದೆಗಳನ್ನು ರದ್ದು ಮಾಡಲು ಆಗ್ರಹ: ಜನಸಾಗರದ ನಡುವೆ ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್

ಹತ್ತು ನಿರ್ಣಯಗಳನ್ನು ಕೈಗೊಂಡ ರೈತರು

ವಾರ್ತಾಭಾರತಿವಾರ್ತಾಭಾರತಿ20 March 2021 7:18 PM IST
share
ಕೃಷಿ ಕಾಯ್ದೆಗಳನ್ನು ರದ್ದು ಮಾಡಲು ಆಗ್ರಹ: ಜನಸಾಗರದ ನಡುವೆ ಶಿವಮೊಗ್ಗದಲ್ಲಿ ರೈತ ಮಹಾ ಪಂಚಾಯತ್

ಶಿವಮೊಗ್ಗ, ಮಾ.20: ನಗರದ ಸೈನ್ಸ್ ಮೈದಾನದಲ್ಲಿ ಹಮ್ಮಿಕೊಂಡಿರುವ ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್ ನಲ್ಲಿ ಸಾವಿರಾರು ಮಂದಿ ರೈತರು ಭಾಗವಹಿಸಿದ್ದು, ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ದಿಲ್ಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಮಹಾಪಂಚಾಯತ್ ಗೆ ಚಾಲನೆ ನೀಡಿದರು. 

ಮಹಾ ಪಂಚಾಯತ್ ನಲ್ಲಿ ರೈತರು ಮೂರು ರೈತ ಕಾಯ್ದೆಗಳನ್ನು ಬೇಷರತ್ತಾಗಿ ಹಿಂಪಡೆಯುವುದು ಸೇರಿದಂತೆ ಹತ್ತು ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಹತ್ತು ನಿರ್ಣಯಗಳು :

1. ಕೇಂದ್ರ ಸರ್ಕಾರ ಸರ್ವಾಧಿಕಾರಿ ರೀತಿಯಲ್ಲಿ ಜಾರಿ ಗೊಳಿಸಿರುವ ಮೂರು ರೈತ ವಿರೋಧಿ ಮತ್ತು ಕಾರ್ಪೋರೇಟ್ ಪರವಾದ ಕಾಯ್ದೆಗಳನ್ನು ಬೇಷರತ್ತಾಗಿ ಈ ಕೂಡಲೆ ಹಿಂಪಡೆಯಬೇಕು.

2. ರಾಜ್ಯ ಸರ್ಕಾರ ಜನವಿರೋಧಿಯಾಗಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಚಕ್ತಿ ಕಾಯ್ದೆ ಮತ್ತು ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳಿಗೆ ತಂದ ತಿದ್ದುಪಡಿಗಳನ್ನು ಕೂಡಲೆ ರದ್ದುಪಡಿಸಬೇಕು.

3. ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿ, ಈಗ ರೈತ ವಿರೋಧಿಯಾದ ಕಾಯ್ದೆಗಳನ್ನು ಜಾರಿಗೆ ತರುತ್ತಿರುವ ಮತ್ತು ಕರ್ನಾಟಕದ ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಕನಿಷ್ಠ ಸೌಜನಕ್ಕೂ ರೈತ ಸಂಘಟನೆಗಳನ್ನು ಕರೆದು ಮಾತಾಡದ ಮುಖ್ಯಮಂತ್ರಿ ಯಡಿಯೂರಪ್ಪನವರ ನಡೆತೆಯನ್ನು ಮಹಾ ಪಂಚಾಯತ್ ಖಂಡಿಸುತ್ತದೆ.

4. ಸ್ವಾಮಿನಾಥನ್ ಮತ್ತು ಪ್ರಕಾಶ್ ಕಮ್ಮರಡಿಯವರ ವರದಿಗಳನ್ನು ಆಧರಿಸಿ, ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ, ಅದರ ಅನುಷ್ಠಾನವನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಜಾರಿಗೆ ತರಬೇಕು.

5. ಬಗರ್ ಹುಕುಂ ರೈತರ ಭೂಮಿಗಳನ್ನು ಮತ್ತು ಸರ್ಕಾರಿ ಜಾಗಗಳಲ್ಲಿ ಮನೆ ಕಟ್ಟಿಕೊಂಡಿರುವ ಬಡಜನರ ಜಾಗಗಳನ್ನು ಕೂಡಲೇ ಮಂಜೂರುಗಳಿಸಬೇಕು.

6. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂಮಿ ಪರಬಾರೆ ತಡೆ ಕಾಯ್ದೆಯ ಮೂಲ ಆಶಯಕ್ಕೆ ಧಕ್ಕೆ ತರುವಂತೆ ರೆವೆನ್ಯೂ ನ್ಯಾಯಾಲಯಗಳು ಆದೇಶ ನೀಡುತ್ತಿರುವದರಿಂದ ಕೂಡಲೆ ಸದರಿ PTCL ಕಾಯ್ದೆಗೆ ತಿದ್ದುಪಡಿ ತಂದು ಮೂಲ ಕಾಯ್ದೆಯನ್ನು ಬಲಪಡಿಸಬೇಕು.

7. ಅನ್ನ ಭಾಗ್ಯ ಯೋಜನೆಯನ್ನು ದುರ್ಬಲಗೊಳಿಸುಲು ಮತ್ತು ಪಡಿತರ ವ್ಯವಸ್ಥೆಯನ್ನು ರದ್ದುಗೊಳಿಸಲು ಸರ್ಕಾರ ಮಾಡುತ್ತಿರುವ ಹುನ್ನಾರಗಳನ್ನು ಮಹಾ ಪಂಚಾಯತ್ ಖಂಡಿಸುತ್ತದೆ, ಜನಸಾಮಾನ್ಯರಿಗೆಲ್ಲರಿಗೂ, ಎಲ್ಲಾ ಮೂಲ ಅಗತ್ಯ ಧಾನ್ಯಗಳು ಕಡಿಮೆ ಬೆಲೆಯಲ್ಲಿ ಲಭ್ಯವಾಗುವಂತೆ ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು.

8. ಮಲೆನಾಡಿನ 33,000/- ಹೆರ್ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ನೀಡುವ ಸಲುವಾಗಿ, ಐದು ವರ್ಷಗಳ ಹಿಂದೆ ಸಂಪೂರ್ಣ ಸ್ಥಗಿತಗೊಂಡಿರುವ MPM ಕಾರ್ಖಾನೆ ಹೆಸರಿಗೆ, ಕಾನೂನು ಬಾಹಿರವಾಗಿ 40 ವರ್ಷಕ್ಕೆ ಲೀಸ್ ಮಾಡಿರುವ ಕ್ರಮವನ್ನು ಈ ಮಹಾ ಪಂಚಾಯತ್ ಖಂಡಿಸುತ್ತದೆ. ಮತ್ತು ಸದರಿ ಭೂಮಿಯನ್ನು ಅರಣ್ಯ ಇಲಾಖೆಗೆ ವಾಪಾಸ್ ಪಡೆಯಬೇಕೆಂದು ಒತ್ತಾಯಿಸುತ್ತದೆ.

9. ಪಶ್ಚಿಮಘಟ್ಟ ಮತ್ತು ಮಲೆನಾಡ ತಪ್ಪಲ ಜನರನ್ನು ಆಭದ್ರತೆಯಿಂದ ಬದುಕುವಂತೆ ಮಾಡಿರುವ ಕಸ್ತೂರಿ ರಂಗನ್, ಸೆಕ್ಷನ್ - 4, ಹುಲಿಯೋಜನೆ, ಆಭಯರಣ, ರಕ್ಷಿತ ಅರಣ ಮುಂತಾದ ಯೋಜನೆಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ.

10. ಜನರೊಡನೆ ಸಮಾಲೋಚನೆ ನಡೆಸಿ ಮಲೆ ಮತ್ತು ನಾಡು ಎರಡೂ ಉಳಿಯುವಂತಹ ಜನಸ್ನೇಹಿ ಮತ್ತು ಪರಿಸರ ಸ್ನೇಹಿ ಅಭಿವೃದ್ಧಿ ಯೋಜನೆಯನ್ನು ರೂಪಿಸಿ, ಅನುಷ್ಠಾನಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X