Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿಯ ಬಗ್ಗೆ ಪುನರಾವಲೋಕನದ ಅಗತ್ಯವಿದೆ :...

ಕೃಷಿಯ ಬಗ್ಗೆ ಪುನರಾವಲೋಕನದ ಅಗತ್ಯವಿದೆ : ಡಾ.ಧನಂಜಯ

ವಾರ್ತಾಭಾರತಿವಾರ್ತಾಭಾರತಿ20 March 2021 10:13 PM IST
share
ಕೃಷಿಯ ಬಗ್ಗೆ ಪುನರಾವಲೋಕನದ ಅಗತ್ಯವಿದೆ : ಡಾ.ಧನಂಜಯ

ಉಡುಪಿ, ಮಾ. 20: ನಾವು ಈವರೆಗೆ ಮಾಡಿಕೊಂಡು ಬರುತಿದ್ದ ಕೃಷಿಯ ಬಗ್ಗೆ ಪುನರಾವಲೋಕನದ ಅಗತ್ಯವಿದೆ. ಕೃಷಿಯ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ರಾಸಾಯನಿಕಗಳ ಅಧಿಕ ಬಳಕೆಯ ದುಷ್ಪರಿಣಾಮಗಳನ್ನು ಅರಿತುಕೊಳ್ಳಬೇಕಾಗಿದೆ. ಸಾವಯವಗಳ ಬಳಕೆಗೆ ಒತ್ತು ನೀಡಬೇಕಿದೆ ಎಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ಕೃಷಿ ವಿಜ್ಞಾನಿ ಡಾ.ಧನಂಜಯ ಹೇಳಿದ್ದಾರೆ.

ಉಡುಪಿಯ ಎಂಜಿಎಂ ಕಾಲೇಜು, ಮಾನವಿಕ ಮತ್ತು ಭಾಷಾ ವಿಭಾಗಗಳು, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಹಾಗೂ ಐಕ್ಯುಎಸಿಗಳು ಸಂಯುಕ್ತವಾಗಿ ಕಾಲೇಜಿನ ಆವರಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡ ಸ್ಥಳೀಯ ಕೃಷಿ ಬದುಕು ಮತ್ತು ಉತ್ಪನ್ನಗಳ ಅವಲೋಕನ ‘ಎಂ.ಜಿ.ಎಂ. ಕೃಷಿ ಸಮ್ಮಿಲನ’ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾವು ಕೃಷಿ ಮಾಡುವ ಮಣ್ಣಿಗೂ ಜೀವವಿದೆ. ಮಣ್ಣಿನ ಆರೋಗ್ಯಕ್ಕೆ ಸೂಕ್ಷ್ಮ ಜೀವಾಣುಗಳು ಮುಖ್ಯ. ರಾಸಾಯನಿಕಗಳ ಅತಿಯಾದ ಬಳಕೆ ಸೂಕ್ಷ್ಮ ಜೀವಾಣುಗಳಿಗೆ ಮಾರಕವಾಗಿಗುತ್ತವೆ. ಹೀಗಾಗಿ ಕೃಷಿಯಲ್ಲಿ ಮಣ್ಣು ಹಾಳಾಗದಂತೆ ನೋಡಿಕೊಳ್ಳುವುದು ಮುಖ್ಯ. ಮಣ್ಣು ಜೀವಂತವಿರು ವಲ್ಲಿ ಸಾವಯವ ಗೊಬ್ಬರಗಳ ಪಾತ್ರ ಮುಖ್ಯವಾಗಿದೆ ಎಂದು ಅವರು ವಿವರಿಸಿದರು.

ಇಂದು ಹೆಚ್ಚು ಹೆಚ್ಚು ಯುವಕರು ಕೃಷಿಯತ್ತ ಒಲವು ತೋರಿಸುತಿದ್ದಾರೆ. ಅವರ ನಿರೀಕ್ಷೆ ತುಂಬಾ ಬೇರೆಯಾಗಿದೆ. ಆತ್ಮವಿಶ್ವಾಸವೂ ಅವರಲ್ಲಿದೆ. ಸಮಗ್ರ ಕೃಷಿಯ ಕುರಿತಂತೆ ಇಂದು ರೈತರಿಗೆ ಸರಿಯಾದ ಮಾಹಿತಿ ಸಿಗುವಂತಾಗಬೇಕು. ಮಾಹಿತಿ ಸಿಗದೇ ಕೃಷಿಯಲ್ಲಿ ಹೆಚ್ಚು ಲಾಭಗಳಿಸಲು ಸಾಧ್ಯವಿಲ್ಲ ಎಂದರು.

ಶ್ರಮದಾಯಕವಾದರೂ ತರಕಾರಿ, ಹಣ್ಣುಗಳನ್ನು ಬೆಳೆಯುವುದರಿಂದ ಹೆಚ್ಚು ಲಾಭ ಗಳಿಸಬಹುದು. ಅವುಗಳ ವೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಬೇಕು. ತೆಂಗಿನಮರದಿಂದ ಸಿಗುವ ನೀರಾ-ಕಲ್ಪರಸ ಆರೋಗ್ಯಾದಾಯಕದೊಂದಿಗೆ ಖಂಡಿತ ರೈತರಿಗೆ ಲಾಭದಾಯಕ ಉತ್ಪನ್ನವಾಗಿದೆ ಎಂದು ಡಾ.ಧನಂಜಯ ತಿಳಿಸಿದರು.

ಪ್ರಗತಿಪರ ಕೃಷಿಕರಾದ ಹಿರಿಯಡ್ಕದ ನಟರಾಜ್ ಹೆಗ್ಡೆ ಹಾಗೂ ರಾಷ್ಟ್ರೀಯ ಸಾಧನಶೀಲ ಕೃಷಿಕ ಪ್ರಶಸ್ತಿ ಪುರಸ್ಕೃತ ಕುದಿ ಶ್ರೀನಿವಾಸ ಭಟ್ ಕೃಷಿಯನ್ನು ಹೇಗೆ ಲಾಭದಾಯಕವಾಗಿ ಮಾಡಬಹುದು ಎಂಬುದನ್ನು ಆಸಕ್ತ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ನಾಯ್ಕಾ ಅಧ್ಯಕ್ಷತೆ ವಹಿಸಿದ್ದರು.ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ, ಐಕ್ಯುಎಸಿಯ ಸಂಯೋಜಕ ಅರುಣ್‌ಕುಮಾರ್ ಬಿ., ನಿರ್ಮಿತಿ ಕೇಂದ್ರದ ಅರುಣ್‌ಕುಮಾರ್ ಉಪಸ್ಥಿತರಿದ್ದರು.

ಎಂಜಿಎಂ ಕೃಷಿ ಸಮ್ಮಿಲನದ ಸಂಚಾಲಕ, ಪತ್ರಿಕೋದ್ಯಮ ವಿಭಾಗದ ಮಂಜುನಾಥ ಕಾಮತ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರೆ, ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಜ್ಞರಿಂಂದ ಉಪಸ್ಯಾಸ ಕಾರ್ಯಕ್ರಮಗಳು ಮಾತಿನ ಮಾಲಿಕೆಯಲ್ಲಿ ನಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X