Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀಸಲಾತಿ ನೀತಿ ಪಾಲಿಸಲು ಐಐಟಿಗಳಿಗೆ...

ಮೀಸಲಾತಿ ನೀತಿ ಪಾಲಿಸಲು ಐಐಟಿಗಳಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ22 March 2021 11:57 PM IST
share
ಮೀಸಲಾತಿ ನೀತಿ ಪಾಲಿಸಲು ಐಐಟಿಗಳಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಹೊಸದಿಲ್ಲಿ, ಮಾ. 22: ಸಂಶೋಧನಾ ಪದವಿ ಕೋರ್ಸ್‌ಗೆ ಅಭ್ಯರ್ಥಿಗಳಿಗೆ ಪ್ರವೇಶ ನೀಡುವಾಗ ಹಾಗೂ ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ಸರಕಾರ ನಿಗದಿಪಡಿಸಿರುವ ಮೀಸಲಾತಿ ನೀತಿಯನ್ನು ಪಾಲಿಸುವಂತೆ 23 ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ ಎಂದು ‘ಲೈವ್‌ಲಾ’ ವರದಿ ಮಾಡಿದೆ.

ಈ ಎಲ್ಲ ಐಐಟಿಗಳು ವಿದ್ಯಾರ್ಥಿಗಳ ಪ್ರವೇಶ ಮತ್ತು ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ 15 ಶೇಕಡ, ಪರಿಶಿಷ್ಟ ಪಂಗಡಕ್ಕೆ 7.5 ಶೇಕಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ 27 ಶೇಕಡ ಮೀಸಲಾತಿ ನೀಡಬೇಕೆನ್ನುವ ನೀತಿಯನ್ನು ಪಾಲಿಸುತ್ತಿಲ್ಲ ಎಂದು ದೂರುದಾರರಾಗಿರುವ ಜಿಯೋಥರ್ಮಲ್ ಎನರ್ಜಿ ರಿಸರ್ಚರ್ ಸಚ್ಚಿದಾನಂದ ಪಾಂಡೆ ಆರೋಪಿಸಿದ್ದಾರೆ. ಹಾಗಾಗಿ, ಐಐಟಿಗಳ ಈ ಕ್ರಮವು ‘‘ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು ಸ್ವೇಚ್ಛಾಚಾರದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ.

2019 ನವೆಂಬರ್‌ನಲ್ಲಿ, 23 ಐಐಟಿಗಳ ಎಲ್ಲ ವಿಭಾಗಗಳ ಎಲ್ಲ ಬೋಧಕ ಹುದ್ದೆಗಳಿಗೆ (ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಎರಡೂ ಹುದ್ದೆಗಳಲ್ಲಿ) ಕೇಂದ್ರ ಸರಕಾರವು ಮೀಸಲಾತಿಯನ್ನು ವಿಸ್ತರಿಸಿತ್ತು. ಅದಕ್ಕೂ ಮೊದಲು, 2018 ಜೂನ್‌ನಲ್ಲಿ ಇನ್ನೊಂದು ಆದೇಶ ನೀಡಿದ್ದ ಕೇಂದ್ರ ಸರಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಸಹಾಯಕ ಪ್ರೊಫೆಸರ್ ಮಟ್ಟದ ಬೋಧಕ ಹುದ್ದೆಗಳು ಮತ್ತು ಹ್ಯುಮ್ಯಾನಿಟಿ ಮತ್ತು ಮ್ಯಾನೇಜ್‌ಮೆಂಟ್ ವಿಭಾಗಗಳ ಎಲ್ಲ ಮಟ್ಟಗಳಲ್ಲಿ (ಸಹಾಯಕ ಪ್ರೊಫೆಸರ್ ಮತ್ತು ಪ್ರೊಫೆಸರ್) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸ್ಥಾನಗಳನ್ನು ಕಾದಿರಿಸುವಂತೆ ಐಐಟಿಗಳಿಗೆ ಸೂಚಿಸಿತ್ತು.

ಕಳೆದ ಐದು ವರ್ಷಗಳ ಅವಧಿಯಲ್ಲಿ ಐಐಟಿಗಳು ರಿಸರ್ಚ್ ಸ್ಕಾಲರ್‌ಗಳ ವಿಭಾಗದಲ್ಲಿ ಮಾತ್ರ ಪರಿಶಿಷ್ಟ ಜಾತಿಗಳಿಗೆ 9.1 ಶೇಕಡ, ಪರಿಶಿಷ್ಟ ಪಂಗಡಗಳಿಗೆ 2.1 ಶೇಕಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ 23.2 ಶೇಕಡ ಮೀಸಲಾತಿ ನೀಡಿವೆ ಎಂದು ದೂರುದಾರರು ಹೇಳಿದ್ದಾರೆ. ಇದು ಕೂಡ ಆದೇಶಿತ ಮಿತಿಗಿಂತ ತೀರಾ ಕೆಳಗಿವೆ ಎಂದು ಅವರು ದೂರಿದ್ದಾರೆ.

2015ರಿಂದ 2019ರವರೆಗೆ, ಐಐಟಿ ಬಾಂಬೆಯು 26 ವಿಭಾಗಗಳು ಮತ್ತು ಕೇಂದ್ರಗಳ ಪೈಕಿ 11ರಲ್ಲಿ ಪರಿಶಿಷ್ಟ ಪಂಗಡದ ಒಂದೇ ಒಂದು ಅಭ್ಯರ್ಥಿಯನ್ನು ಪಿಎಚ್‌ಡಿ ಸ್ಕಾಲರ್‌ಗೆ ತೆಗೆದುಕೊಂಡಿಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X