Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆಯಲ್ಲಿ ಮಹಿಳೆಯರ ಸುರಕ್ಷತೆಗೆ...

ರೈಲ್ವೆಯಲ್ಲಿ ಮಹಿಳೆಯರ ಸುರಕ್ಷತೆಗೆ ಮಾರ್ಗದರ್ಶಿ ಸೂತ್ರ ಬಿಡುಗಡೆ ಮಾಡಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ22 March 2021 11:58 PM IST
share
ರೈಲ್ವೆಯಲ್ಲಿ ಮಹಿಳೆಯರ ಸುರಕ್ಷತೆಗೆ ಮಾರ್ಗದರ್ಶಿ ಸೂತ್ರ ಬಿಡುಗಡೆ ಮಾಡಿದ ಕೇಂದ್ರ

ಮಾರ್ಗದರ್ಶಿ ಸೂತ್ರಗಳ ಮುಖ್ಯಾಂಶಗಳು…

1.ರೈಲ್ವೆ ನಿಲ್ದಾಣದ ವಾಹನ ಪಾರ್ಕಿಂಗ್ ಪ್ರದೇಶ, ಪ್ಲಾಟ್‌ಫಾರಂನ ಕೊನೆಯ ಭಾಗ, ರೈಲ್ವೆ ಯಾರ್ಡ್ ಮತ್ತಿತರ ಸೂಕ್ಷ್ಮಪ್ರದೇಶಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ

2.ನಿರೀಕ್ಷಣಾ ಕೊಠಡಿಗಳಿಗೆ ಕಣ್ಗಾವಲು

3.ಯಾರ್ಡ್‌ಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ತಡೆ

4. ರೈಲ್ವೆ ಪರಿಸರದಲ್ಲಿ ನಡೆಯುವ ಅಪರಾಧ ಘಟನೆಗಳ ಬಗ್ಗೆ ಕೂಡಲೇ ಮಾಹಿತಿ ನೀಡಲು ಹೊರೆಯಾಳುಗಳು, ಮಾರಾಟಗಾರರನ್ನು ಉತ್ತೇಜಿಸುವುದು

5. ಮಹಿಳೆಯರು, ಮಕ್ಕಳ ಸುರಕ್ಷತೆ ಬಗ್ಗೆ ರೈಲ್ವೆ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸುವುದು.

ಹೊಸದಿಲ್ಲಿ, ಮಾ.21: ರೈಲುಗಳು ಹಾಗೂ ರೈಲ್ವೆ ಆವರಣಗಳಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುವುದನ್ನು ತಡೆಗಟ್ಟಲು ರೈಲ್ವೆ ಸಚಿವಾಲಯವು ಸೋಮವಾರ ನೂತನ ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೊಳಿಸಿದೆ. ಭಾರತೀಯ ರೈಲ್ವೆಯಲ್ಲಿ ದಿನನಿತ್ಯವೂ ಪ್ರಯಾಣಿಸುವ 2.3 ಕೋಟಿ ಪ್ರಯಾಣಿಕರ ಪೈಕಿ ಶೇ.20ರಷ್ಟಿರುವ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುತ್ತಿರುವುದು ಪ್ರಮುಖ ಆತಂಕದ ವಿಷಯವೆಂದು ಸಚಿವಾಲಯ ತಿಳಿಸಿದೆ.

 ರೈಲ್ವೆ ಸಚಿವಾಲಯ ಮಾರ್ಚ್ 20ರಂದು ಪ್ರಕಟಿಸಿದ ಆದೇಶವೊಂದರಲ್ಲಿ ರೈಲುಗಳು ಹಾಗೂ ರೈಲ್ವೆ ಆವರಣದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುವುದನ್ನು ತಡೆಯಲು ಕಣ್ಗಾವಲು ಹಾಗೂ ಜಾಗೃತಿ ಮೂಡಿಸುವಿಕೆ ಸೇರಿದಂತೆ ಹಲವಾರು ಕ್ರಮಗಳನ್ನು ಪಟ್ಟಿ ಮಾಡಿತ್ತು.

ರೈಲ್ವೆ ನಿಲ್ದಾಣದ ವಾಹನ ಪಾರ್ಕಿಂಗ್ ಪ್ರದೇಶ, ಪ್ಲಾಟ್‌ಫಾರಂ ಕೊನೆ ಭಾಗ, ರೈಲ್ವೆ ಯಾರ್ಡ್‌ಗಳಂತಹ ಸೂಕ್ಷ್ಮಪ್ರದೇಶಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆಯನ್ನು ಖಾತರಿಪಡಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ರೈಲ್ವೆ ಆವರಣದಲ್ಲಿರುವ ಪರಿತ್ಯಕ್ತ ಕಟ್ಟಡಗಳನ್ನು ಇಂಜಿನಿಯರಿಂಗ್ ಇಲಾಖೆಯ ಜೊತೆ ಸಮಾಲೋಚನೆ ನಡೆಸಿ ನಾಶಪಡಿಸಬೇಕೆಂದು ಸಚಿವಾಲಯ ತಿಳಿಸಿದೆ.

ವಿಶೇಷವಾಗಿ ರಾತ್ರಿ ಹೊತ್ತಿನಲ್ಲಿ ಮತ್ತು ಪ್ರಯಾಣಿಕರ ಸಂಖ್ಯೆಯ ವಿರಳವಾಗಿರುವ ಸಂದರ್ಭಗಳಲ್ಲಿ, ಸೂಕ್ತ ಪರಿಶೀಲನೆಯ ನಂತರವೇ ವ್ಯಕ್ತಿಗಳಿಗೆ ನಿರೀಕ್ಷಣಾ ಕೊಠಡಿಗಳು (ವೇಟಿಂಗ್ ರೂಂ)ಗಳನ್ನು ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಮಾರ್ಗದರ್ಶಿ ಸೂತ್ರಗಳು ತಿಳಿಸಿವೆ. ಕರ್ತವ್ಯದಲ್ಲಿರುವ ಅಧಿಕಾರಿಗಳು ಅಪರ ವೇಳೆಯಲ್ಲಿ ಅವುಗಳ ತಪಾಸಣೆ ನಡೆಸಬೇಕು ಎಂದು ಅದು ಸೂಚಿಸಿದೆ.

ಬೋಗಿಗಳನ್ನು ನಿಲ್ಲಿಸಲಾಗಿರುವ ಯಾರ್ಡ್‌ಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ತಡೆಯುವಂತೆ ಮತ್ತು ಬೋಗಿಗಳಿಗೆ ಬೀಗಹಾಕುವಂತೆ ಸಚಿವಾಲಯವು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದೆ. ಬಹುತೇಕ ಅಪರಾಧ ಪ್ರಕರಣಗಳು ಶೌಚಾಲಯದ ಸಮೀಪದಲ್ಲೇ ವರದಿಯಾಗುತ್ತಿರುವುದರಿಂದ ಆ ಸ್ಥಳಗಳಲ್ಲಿ ಜನರು ಗುಂಪು ಸೇರದಂತೆ ನೋಡಿಕೊಳ್ಳಬೇಕೆಂದು ಸಚಿವಾಲಯ ಹೇಳಿದೆ.

ರೈಲ್ವೆ ಪರಿಸರದಲ್ಲಿ ಯಾವುದೇ ಅಪರಾಧ ಪ್ರಕರಣಗಳ ಗಮನಕ್ಕೆ ಬಂದರೂ ಆ ಬಗ್ಗೆ ಕೂಡಲೇ ಪೊಲೀಸರು, ರೈಲ್ವೆ ರಕ್ಷಣಾ ಪಡೆ ಅಥವಾ ಸ್ಟೇಶನ್ ಮಾಸ್ಟರ್‌ಗೆ ವರದಿ ಮಾಡುವಂತೆ ಸರಕುಗಳ ತಪಾಸಣೆ ನಡೆಸುವ ಸಿಬ್ಬಂದಿ, ಹೊರೆಯಾಳುಗಳು, ಕಾಲ್ನಡಿಗೆಯ ಮಾರಾಟಗಾರರು, ಅಂಗಡಿ ಮಾಲಕರನ್ನು ಉತ್ತೇಜಿಸಬೇಕು ಎಂದು ಮಾರ್ಗದರ್ಶಿ ಸೂತ್ರಗಳಲ್ಲಿ ತಿಳಿಸಲಾಗಿದೆ.

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ಕುರಿತಾದ ತಮ್ಮ ಕರ್ತವ್ಯದ ಬಗ್ಗೆ ಎಲ್ಲಾ ಇಲಾಖೆಗಳ ರೈಲ್ವೆ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸಬೇಕು ಈ ಬಗ್ಗೆ ಅವರಿಗೆ ತರಬೇತಿ ನೀಡಲು ವಿವಿಧ ತರಬೇತಿ ಸಂಸ್ಥೆಗಳನ್ನು ಬಳಸಿಕೊಳ್ಳಬೇಕೆಂದು ಮಾರ್ಗಸೂಚಿಯು ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X