Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೆಂಪು ವಿಶ್ವವಿದ್ಯಾಲಯದ ಘನತೆಗೆ ಧಕ್ಕೆ...

ಕುವೆಂಪು ವಿಶ್ವವಿದ್ಯಾಲಯದ ಘನತೆಗೆ ಧಕ್ಕೆ ತಂದವರ ವಿರುದ್ಧ ಕಾನೂನು ಕ್ರಮ: ಕುಲಪತಿ ಪ್ರೊ. ಬಿ.ವಿ.ವೀರಭದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ23 March 2021 10:21 PM IST
share

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸುಮಾರು 35 ಅಧ್ಯಾಪಕರು ಮತ್ತು ಸಿಬ್ಬಂದಿಗಳ ಮೇಲೆ ಕೆಲವು ಸಂಘಟನೆಗಳು ಸುಳ್ಳು ಆರೋಪ ಮಾಡಿ ದೂರು ದಾಖಲಿಸಿ ವಿವಿಯ ಘನತೆಗೆ ಧಕ್ಕೆ ತರಲಾಗಿದ್ದು, ಇದರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕುಲಪತಿ ಪ್ರೊ. ಬಿ.ವಿ.ವೀರಭದ್ರಪ್ಪ  ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈ ಭೀಮ್ ಕನ್ನಡ ಜಾಗೃತಿ ಮತ್ತು ಎಸ್.ಸಿ. ಎಸ್.ಟಿ. ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ಸಂಘದ ಹೆಸರಿನ ಸಂಘಟನೆ ಈ ದೂರು ನೀಡಿದ್ದು, ಇದು ಸತ್ಯಕ್ಕೆ ದೂರವಾಗಿದೆ. ವಿಶ್ವವಿದ್ಯಾನಿಲಯದ ಘನತೆಗೆ ಚ್ಯುತಿ ತಂದಿದೆ. ಇದಕ್ಕೆ ಸಂಬಂಧಿಸಿದಂತೆ ನಮ್ಮ ವಕೀಲರನ್ನು ಸಂಪರ್ಕಿಸಿ ಅದರ ಆಧಾರದ ಮೇಲೆ ಮರುದೂರು ದಾಖಲಿಸುವುದು ಅಥವಾ ಹೆಚ್ಚಿನ ಕಾನೂನು ಕ್ರಮ ತೆಗೆದುಕೊಳ್ಳಲು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ ಎಂದರು.

ಕೆಲವು ಸಂಘಟನೆಗಳು ನೀಡಿರುವ ದೂರಿನಂತೆ ವಿಶ್ವವಿದ್ಯಾನಿಲಯದಲ್ಲಿ ಯಾವ ಅಕ್ರಮಗಳು ನಡೆದಿಲ್ಲ. ಮುಖ್ಯವಾಗಿ ವಿವಿಯಲ್ಲಿ ಯಾವ ಡಿಜಿಟಲ್ ಆಗಿಲ್ಲ ಎಂದು ಆರೋಪಿಸುತ್ತವೆ. ಆದರೆ ವಿವಿಯಲ್ಲಿ ಪರೀಕ್ಷೆ ವಿಭಾಗ ಅಂಕಪಟ್ಟಿ ಸೇರಿದಂತೆ ಎಲ್ಲವು ಡಿಜಿಟಲ್ ಆಗಿದೆ ಎಂದು ಪ್ರಾತ್ಯಕ್ಷತೆಯ ಮೂಲಕ ವಿವರಿಸಿದರು.

ಅಂಕಪಟ್ಟಿ ಮತ್ತು ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಇಡೀ ದೇಶದಲ್ಲಿಯೇ ಅತ್ಯಂತ ವೇಗವಾಗಿ ಫಲಿತಾಂಶ ಪ್ರಕಟಿಸಿದ್ದು ಕುವೆಂಪು ವಿವಿ. ಇದಕ್ಕೆ ಸಂಬಂಧಿಸಿದಂತೆ ನಾವು ಅನಿವಾರ್ಯವಾಗಿ ಖಾಸಗಿಯವರಿಗೆ ತಂತ್ರಜ್ಞಾನದ ಗುತ್ತಿಗೆ ಕೊಟ್ಟಿದ್ದು ನಿಜ. ಹಾಗಂತ ಅದು ಎಲ್ಲಿಯೂ ಲೋಪವಾಗಿಲ್ಲ. ಎಲ್ಲವು ಪಾರದರ್ಶಕವಾಗಿದೆ ಎಂದು ಕುಲಪತಿಗಳು ಸಮರ್ಥಿಸಿಕೊಂಡರು. 

ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಉತ್ಕೃಷ್ಟ ಕಲಿಕೆ ಸಂಶೋಧನೆ ಪದವಿ ಫಲಿತಾಂಶದ ನಿಖರತೆ ಮತ್ತು ಭದ್ರತೆಗಾಗಿ ಕಾಲ ಕಾಲಕ್ಕೆ ತಕ್ಕಂತೆ ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಲೋಪ ರಹಿತ ವಿದ್ಯಾರ್ಥಿಸ್ನೇಹಿ ಪದ್ಧತಿ ಹೊಂದಿದೆ. ಕೇವಲ ಮೂರುವರೆ ದಶಕಗಳಲ್ಲಿಯೇ ವಿಶ್ವವಿದ್ಯಾಲಯ ರಾಜ್ಯದ ಇತರೆ ಹಿರಿಯ ವಿವಿಗಳನ್ನು ಸರಿಗಟ್ಟುವ ಮಟ್ಟಕ್ಕೆ ಬೆಳೆದಿದೆ. ಇದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂದ ಗೌರವವಾಗಿದೆ ಎಂದರು.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯದ ಅಧಿನಿಯಮದಡಿಯಲ್ಲಿ ಸ್ಥಾಪಿತವಾದ ಕುವೆಂಪು ವಿವಿ ಸರ್ಕಾರ ನೇಮಕ ಮಾಡುವ ಕುಲಪತಿ ಸಕ್ಷಮ ಪ್ರಾಧಿಕಾರಿಗಳು ಹಾಗೂ ಸರ್ಕಾರದ ನಿಯಮ, ಆದೇಶದನ್ವಯ ಕಾರ್ಯನಿರ್ವಹಿಸುತ್ತದೆ. ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಲಭ್ಯ ಕಾರ್ಯಗತಗೊಳಿಸುವಾಗ ವಿವಿ ನೀಡುವ ಯಾವುದೇ ಹೆಚ್ಚುವರಿ ಜವಾಬ್ದಾರಿಗಳನ್ನು, ಅಧ್ಯಾಪಕರು, ಸಿಬ್ಬಂದಿ ವರ್ಗದವರು ನಿಯಮಾನುಸಾರ ಪಾರದರ್ಶಕವಾಗಿ ನಿರ್ವಹಿಸುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

ಈ ರೀತಿ ಸುಳ್ಳು ಆರೋಪ ಮಾಡಿ ವಿವಿ ಘನತೆಗೆ ಚ್ಯುತಿ ತರುತ್ತಿರುವುದರಿಂದ ಸಂಘಟನೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ವಿಶ್ವವಿದ್ಯಾಲಯದ ನಿಯಮಗಳಿಗೆ ಅನುಸಾರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ವಿವಿಯ ಯಾವುದೇ ಅಧ್ಯಾಪಕರು ಸಿಬ್ಬಂದಿ ನೆಮ್ಮದಿಯಿಂದ ದೈನಂದಿನ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ. ವ್ಯಕ್ತಿತ್ವಕ್ಕೆ ಇಂತಹ ಪ್ರಕರಣಗಳು ಧಕ್ಕೆ ತರುತ್ತವೆ. ವಿವಿ ಘನತೆಗೆ ಚ್ಯುತಿ ಉಂಟುಮಾಡುತ್ತವೆ. ವಿವಿಯ ಸರ್ವತೋಮುಖ ಬೆಳವಣಿಗೆಗೆ ಅಡ್ಡಿಯಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.

ಮುಂದಿನ ದಿನಗಳಲ್ಲಿ ವಿವಿಗೆ ಸಂಬಂಧಿಸಿದ ಯಾವುದೇ ಆರೋಪ ಬಂದಾಗ ಸತ್ಯ ಸತ್ಯತೆ ಪರಿಶೀಲಿಸಿ ವಿವಿಯಿಂದ ಸಂಪೂರ್ಣ ಮಾಹಿತಿ ಪಡೆದು ಪ್ರಸಾರ, ವರದಿ ಮಾಡುವಂತೆ ಮನವಿ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಪರೀಕ್ಷಾಂಗ ಮತ್ತು ಆಡಳಿತ ವಿಭಾಗದ ಕುಲಸಚಿವರುಗಳಾದ ಪ್ರೊ.ಎಸ್.ಎಸ್.ಪಾಟೀಲ್, ಪ್ರೊ.ಟಿ.ಕಣ್ಣನ್, ವಿವಿ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಜೆ.ಕೇಶವಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X