Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಪೊಲೀಸರ ಮೇಲೆ ಹಲ್ಲೆ; 8 ಮಂದಿ...

ಮೈಸೂರು: ಪೊಲೀಸರ ಮೇಲೆ ಹಲ್ಲೆ; 8 ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ23 March 2021 10:43 PM IST
share
ಮೈಸೂರು: ಪೊಲೀಸರ ಮೇಲೆ ಹಲ್ಲೆ; 8 ಮಂದಿ ಆರೋಪಿಗಳ ಬಂಧನ

ಮೈಸೂರು,ಮಾ.23: ನಗರದ ಹೊರವಲಯದ ಹಿನಕಲ್ ರಿಂಗ್ ರಸ್ತೆಯಲ್ಲಿ ಮೈಸೂರು ನಗರ ವಿ.ವಿ.ಪುರಂ ಸಂಚಾರಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ವಿಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್ ತಪಾಸಣೆ ವೇಳೆ ಪೊಲೀಸರು ಲಾಠಿಯಿಂದ ಹೊಡೆದು ಕೆಳಕ್ಕೆ ಬಿದ್ದ ವ್ಯಕ್ತಿ ಮೇಲೆ ಲಾರಿ ಹರಿದು ಸಾವನ್ನಪ್ಪಿದ್ದರು ಎಂದು ಆರೋಪಿಸಿ ಪೊಲೀಸರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದರು. ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದರು. ಜೊತೆಗೆ ಎಎಸ್‍ಐ ಮಾದೇಗೌಡ, ಪೊಲೀಸ್ ಕಾನ್ಸ್‍ಟೇಬಲ್ ಮಂಜು ಮತ್ತು ಸ್ವಾಮಿನಾಯಕ ಮೇಲೆ ಹಲ್ಲೆ ನಡೆಸಲಾಗಿತ್ತು.

ಈ ಸಬಂಧ ಪ್ರಕರಣ ದಾಖಲಿಸಿಕೊಂಡ ವಿಜಯನಗ ಪೊಲೀಸರು ಸರ್ಕಾರಿ ವಾಹನ ಧ್ವಂಸ, ಕರ್ತವ್ಯಕ್ಕೆ ಅಡ್ಡಿ ಆರೊಪದಡಿ ಮೂರು ದೂರುಗಳನ್ನು ದಾಖಲಿಸಿಕೊಂಡಿದ್ದಾರೆ. ಈ ದೂರಿನ ಆಧಾರದ ಮೇಲೆ ಹಲ್ಲೆ ಮಾಡಿದ್ದ 8 ಜನರನ್ನು ಬಂಧಿಸಿದ್ದಾರೆ. ಇನ್ನೂ ಉಳಿದ ವ್ಯಕ್ತಿಗಳಿಗೆ ಸಾಮಾಜಿಕ ಜಾಲತಾಣದ ವೀಡೀಯೊ ಮತ್ತು ಸ್ಥಳೀಯರ ಮಾಹಿತಿ ಮೇಲೆ ಶೋಧ ನಡೆಸುತ್ತಿದ್ದಾರೆ.

ನಿನ್ನೆಯ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ: ಡಿಸಿಪಿ ಗೀತಾ ಪ್ರಸನ್ನ
ನಗರದ ಹಿನಕಲ್ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರ ತಪಾಸಣೆ ವೇಳೆ ಅಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣ ಸಂಬಂಧ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ನಿನ್ನೆಯ ಘಟನೆಯಲ್ಲಿ ನಮ್ಮ ಇಬ್ಬರು ಪೊಲೀಸರಿಗೆ ಹಲ್ಲೆಯಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿಪಿ ಗೀತಾ ಪ್ರಸನ್ನ ಹೇಳಿದ್ದಾರೆ.

ಘಟನೆ ಕುರಿತು ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ವಾಹನ ತಪಾಸಣೆ ಮಾಡುವ ಜಾಗದಿಂದ ಅವರು ದೂರದಲ್ಲೆ ಇದ್ದರು. ಹಿಂಬದಿಯಿಂದ ಬಂದ ಟಿಪ್ಪರ್‍ನಿಂದ ಘಟನೆ ಜರುಗಿದೆ. ಪೊಲೀಸರು ತಮ್ಮ ಕರ್ತವ್ಯವನ್ನಷ್ಟೆ ನಿರ್ವಹಿಸಿದ್ದಾರೆ. ಸರ್ಕಾರ ಸೂಚಿಸಿದ ದಂಡವನ್ನಷ್ಟೆ ನಾವು ವಸೂಲಿ ಮಾಡುತ್ತಿದ್ದೇವೆ. ಕಾನೂನು ಪಾಲನೆ ಎಲ್ಲರ ಜವಾಬ್ದಾರಿ. ಅದನ್ನ ಜನರಿಗೆ ತೊಂದರೆಯಾಗದಂತೆ ಜಾರಿಗೆ ತರೋದೆ ನಮ್ಮ ಕೆಲಸ ಎಂದು ತಿಳಿಸಿದರು.

ನಿನ್ನೆ ಘಟನೆ ನಂತರ ಹಲವು ದೂರುಗಳು ಬಂದಿದೆ. ಆ ದೂರುಗಳನ್ನ ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಿಬ್ಬಂದಿಗಳ ಸಭೆ ಕರೆದು ಮಾಹಿತಿ ಪಡೆಯುತ್ತೇವೆ. ಸಿಬ್ಬಂದಿ ಸಮಸ್ಯೆ ಹಾಗೂ ಜನರ ಸಮಸ್ಯೆ ಎರಡನ್ನು ಅಲಿಸಿ ಪರಿಹಾರ ಹುಡುಕುತ್ತೇವೆ ಎಂದು ಡಿಸಿಪಿ ಗೀತಾ ಪ್ರಸನ್ನ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X