Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಸೊಸೈಟಿಗಳ ನೋಂದಣಿ ತಿದ್ದುಪಡಿ...

ಕರ್ನಾಟಕ ಸೊಸೈಟಿಗಳ ನೋಂದಣಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಸ್ತು

ಸಾಮಾನ್ಯ-ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯ ನಿವಾರಣೆಗೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ23 March 2021 11:19 PM IST
share
ಕರ್ನಾಟಕ ಸೊಸೈಟಿಗಳ ನೋಂದಣಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಸ್ತು

ಬೆಂಗಳೂರು, ಮಾ.23: ಸಾಮಾನ್ಯ ಸೊಸೈಟಿಗಳು ಮತ್ತು ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯ ತೊಡೆದು ಹಾಕಲು ರಾಜ್ಯ ಸರಕಾರವು ಕರ್ನಾಟಕ ಸೊಸೈಟಿಗಳ ನೋಂದಣಿ ಅಧಿನಿಯಮ 1960ಕ್ಕೆ ಮತ್ತಷ್ಟು ತಿದ್ದುಪಡಿ ತರಲು 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ)ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡಿದೆ.

ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಧರಣಿ ನಡುವೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಂಡಿಸಿದ ವಿಧೇಯಕಕ್ಕೆ ಯಾವುದೇ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ ಅನುಮೋದನೆ ಲಭಿಸಿತು.

ಈ ವಿಧೇಯಕದ ಬಗ್ಗೆ ವಿವರಣೆ ನೀಡಿದ ಎಸ್.ಟಿ.ಸೋಮಶೇಖರ್, ರಾಜ್ಯದಲ್ಲಿ 3,71,397 ಸೊಸೈಟಿಗಳಿವೆ. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯದ 6,807 ಸೊಸೈಟಿಗಳಿವೆ. ಇವುಗಳಲ್ಲಿ 48 ಸಂಘಗಳಿಗೆ ಮಾತ್ರ ಸರಕಾರ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದರು.

ಈ ಕಾಯ್ದೆಯ ‘27 ಎ’ಗೆ ತಿದ್ದುಪಡಿ ತರಲಾಗಿದ್ದು, ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಬೇರೆ ಯಾವುದೆ ಕಾಯ್ದೆಯಡಿ ನೋಂದಣಿಯಾಗಿರುವಂತಹ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುವುದಿಲ್ಲ. ಬದಲಾಗಿ ಬೇರೆ ಯಾವುದೇ ಕಾಯ್ದೆಯಡಿ ನೋಂದಣಿಯಾಗಿದ್ದರೂ ಈ ಕಾಯ್ದೆ ಅನ್ವಯಿಸುತ್ತದೆ ಎಂದು ಸೋಮಶೇಖರ್ ಹೇಳಿದರು.

ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಸಂಘ ಸಂಸ್ಥೆಗಳು ವಾರ್ಷಿಕ ಸಭೆ ನಡೆಸದಿದ್ದರೆ, ಆಡಳಿತ ಸಮಿತಿ ಅವಧಿ ಮುಗಿದಿದ್ದರೂ ಚುನಾವಣೆ ನಡೆಸದಿದ್ದರೆ, ವಿಚಾರಣೆ ವೇಳೆ ಲೋಪದೋಷಗಳು ಕಂಡು ಬಂದಲ್ಲಿ ಸರಕಾರ ಎಚ್ಚೆತ್ತುಕೊಳ್ಳುತ್ತದೆ. ಈ ಶಾಸನ ಸಭೆ ಅನುಮೋದನೆ ನೀಡಿದ ನಂತರ ಸಂವಿಧಾನದ ಅನುಚ್ಛೇದ 30ಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಯ ಅನುಮೋದನೆಗೆ ಕಳುಹಿಸುತ್ತೇವೆ ಎಂದು ಸೋಮಶೇಖರ್ ತಿಳಿಸಿದರು.

ಅಲ್ಪಸಂಖ್ಯಾತರಿಗೆ ಸೇರಿದ ಅಥವಾ ಇತರ ಯಾವುದೇ ಸೊಸೈಟಿಯು, ವ್ಯಾಜ್ಯವು ಬಾಕಿಯಿರುವ ಕಾರಣದಿಂದಾಗಿ ವಾರ್ಷಿಕ ಮಹಾಸಭೆಯನ್ನು ನಡೆಸಿಲ್ಲದಿದ್ದರೆ ಅಥವಾ ನಡೆಸಲು ಅಸಮರ್ಥವಾದರೆ, ಅಲ್ಪಸಂಖ್ಯಾತರಿಗೆ ಸೇರಿದ ಅಥವಾ ಇತರ ಸೊಸೈಟಿಯ ಆಡಳಿತ ಮಂಡಳಿಯ ಸದಸ್ಯರ ಪದಾವಧಿಯು ಮುಕ್ತಾಯಗೊಂಡಿದ್ದರೆ ಮತ್ತು ಹೊಸ ಆಡಳಿತ ಮಂಡಳಿಯನ್ನು ಯಾವುದೇ ಕಾರಣಕ್ಕಾಗಿ ರಚಿಸಿಲ್ಲದಿದ್ದರೆ, ರಿಜಿಸ್ಟ್ರಾರ್ ಅಥವಾ ಇತರರು ಮಾಡಿದ ವರದಿಯ ಮೇರೆಗೆ, ರಾಜ್ಯ ಸರಕಾರವು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಅಗತ್ಯವೆಂದು ಪರಿಗಣಿಸಿದರೆ ಆಡಳಿತಾಧಿಕಾರಿಯನ್ನು ನೇಮಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X