Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಆರ್‌ಪಿ ಹಗರಣ: ಅರ್ನಬ್‌ರನ್ನು...

ಟಿಆರ್‌ಪಿ ಹಗರಣ: ಅರ್ನಬ್‌ರನ್ನು ಬಂಧಿಸುವುದಾದರೆ 3 ದಿನದ ಮೊದಲು ನೋಟಿಸ್ ನೀಡಲು ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 March 2021 9:54 PM IST
share
ಟಿಆರ್‌ಪಿ ಹಗರಣ: ಅರ್ನಬ್‌ರನ್ನು ಬಂಧಿಸುವುದಾದರೆ 3 ದಿನದ ಮೊದಲು ನೋಟಿಸ್ ನೀಡಲು ಹೈಕೋರ್ಟ್ ಸೂಚನೆ

ಮುಂಬೈ, ಮಾ.24: ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಬಂಧಿಸುವುದಾದರೆ 3 ದಿನದ ಮೊದಲು ನೋಟಿಸ್ ನೀಡುವಂತೆ ಬಾಂಬೆ ಹೈಕೋರ್ಟ್ ಮುಂಬೈ ಪೊಲೀಸರಿಗೆ ಸೂಚಿಸಿದೆ.

ಗೋಸ್ವಾಮಿ, ರಿಪಬ್ಲಿಕ್ ಟಿವಿ ಹಾಗೂ ಇತರ ಟಿವಿ ಚಾನೆಲ್‌ಗಳ ಕುರಿತ ಆರೋಪದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುವುದಕ್ಕೆ ಆಕ್ಷೇಪ ಸೂಚಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂದರ್ಭ ಮುಂಬೈ ಹೈಕೋರ್ಟ್ ಈ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಸಿಬಿಐ ಅಥವಾ ಇತರ ತನಿಖಾ ಸಂಸ್ಥೆಗೆ ವಹಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಗೋಸ್ವಾಮಿ ಈ ಹಿಂದೆ ಮಹಾರಾಷ್ಟ್ರ ಸರಕಾರದ ವಿರುದ್ಧ ವರದಿ ಪ್ರಕಟಿಸಿದ್ದರಿಂದ ಮುಂಬೈ ಪೊಲೀಸರು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಗೋಸ್ವಾಮಿಯ ವಕೀಲರು ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಇತರ ಚಾನೆಲ್‌ಗಳನ್ನೂ ಹೆಸರಿಸಿದ್ದರೂ ಪೊಲೀಸರು ರಿಪಬ್ಲಿಕ್ ಟಿವಿ ಚಾನೆಲ್‌ನ ಉದ್ಯೋಗಿಗಳನ್ನು ಮಾತ್ರ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಸುಮಾರು 4 ತಿಂಗಳಿಂದ ತನಿಖೆ ನಡೆಸುತ್ತಿದ್ದರೂ, ರಿಪಬ್ಲಿಕ್ ಟಿವಿ ಅಥವಾ ಗೋಸ್ವಾಮಿ ವಿರುದ್ಧದ ಯಾವುದೇ ಪುರಾವೆ ಸಂಗ್ರಹಿಸಲು ವಿಫಲವಾಗಿದ್ದಾರೆ ಎಂದು ವಕೀಲರು ಹೇಳಿದರು. ರಿಪಬ್ಲಿಕ್ ಟಿವಿ ವಿರುದ್ಧದ ತನಿಖೆ 3 ತಿಂಗಳೊಳಗೆ ಪೂರ್ಣಗೊಳ್ಳುವುದಾಗಿ ಮುಂಬೈ ಪೊಲೀಸರು ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣದ ವಿಚಾರಣೆ ಸದಾ ನಡೆಯುತ್ತಿರಲು ಸಾಧ್ಯವಿಲ್ಲ. ಇದು ಒಂದು ಹಂತದಲ್ಲಿ ಮುಕ್ತಾಯವಾಗಬೇಕು. ಆದ್ದರಿಂದ ತನಿಖೆಯ ವಿಚಾರಣೆ ಎದುರಿಸಲು ಗೋಸ್ವಾಮಿಗೆ ಸಮನ್ಸ್ ಕಳುಹಿಸುವುದಾದರೆ, ಅಥವಾ ಬಂಧಿಸುವುದಾದರೆ 3 ದಿನದ ಮೊದಲು(ರಜಾದಿನ ಹೊರತುಪಡಿಸಿ) ನೋಟಿಸ್ ನೀಡಬೇಕು . ನೋಟಿಸ್ ಸ್ವೀಕರಿಸಿದ ಬಳಿಕ ಗೋಸ್ವಾಮಿ ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ.

ಆದರೆ ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆಗೆ ಈ ಹಂತದಲ್ಲಿ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಯಾಕೆಂದರೆ ಇಲ್ಲಿ ಯಾರು ಆರೋಪಿಗಳು, ಯಾರು ಆರೋಪಿಗಳಲ್ಲ ಎಂಬ ಸ್ಪಷ್ಟಚಿತ್ರಣವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X