Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಕಸ ವಿಲೇವರಿಯಾಗದೆ ದುರ್ನಾತ;...

ಪಡುಬಿದ್ರಿ: ಕಸ ವಿಲೇವರಿಯಾಗದೆ ದುರ್ನಾತ; ಗ್ರಾ.ಪಂ. ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 March 2021 10:55 PM IST
share
ಪಡುಬಿದ್ರಿ: ಕಸ ವಿಲೇವರಿಯಾಗದೆ ದುರ್ನಾತ; ಗ್ರಾ.ಪಂ. ವಿರುದ್ಧ ಆಕ್ರೋಶ

ಪಡುಬಿದ್ರಿ: ಕಸ ವಿಲೇವರಿಗೆಂದು ನಿರ್ಮಾಣಗೊಂಡಿರುವ ಪಡುಬಿದ್ರಿ ಗ್ರಾಮ ಪಂಚಾಯಿತಿ ಎದುರಿನಲ್ಲಿರುವ ಎಸ್‍ಎಲ್‍ಆರ್‍ಎಮ್ ಘಟಕದಲ್ಲಿ ಸಮರ್ಪಕ ಕಸ ವಿಲೇವರಿಯಾಗದೆ ದುರ್ನಾತ ಬೀರುತಿದ್ದು, ಪಂಚಾಯಿತಿಗೆ ಬರುವ ಗ್ರಾಮಸ್ಥರು ಪಂಚಾಯಿತಿ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.

ಪಡುಬಿದ್ರಿ ಗ್ರಾಮ ಪಂಚಾಯಿತಿಯ ಎದುರಿನಲ್ಲಿ 2018ರಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಎಸ್‍ಎಲ್‍ಆರ್‍ಎಮ್ ಘಟಕದಲ್ಲಿ ವೈಜ್ಞಾನಿಕ ರೀತಿಯಲ್ಲಿ ಒಣ ಹಾಗೂ ಹಸಿಕಸವನ್ನು ವಿಲೇವರಿ ಮಾಡಲಾಗುತಿತ್ತು. ಕಳೆದ ಕೆಲವು ತಿಂಗಳಿನಿಂದ ಇಲ್ಲಿ ಕಸ ಸಂಗ್ರಹಿಸಲಾಗುತಿದ್ದು,  ಸಮಪರ್ಕವಾಗಿ ಕಸ ವಿಲೇವರಿಯಾಗದೆ ದುರ್ನಾತ ಬೀರುತಿದೆ. ಇದರಿಂದ  ಗ್ರಾಮ ಪಂಚಾಯಿತಿಗೆ ಬರುವ ಗ್ರಾಮಸ್ಥರು ಮೂಗು ಮುಚ್ಚಿಕೊಂಡೇ ಬರಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

ಗ್ರಾ.ಪಂ. ಎದುರಲ್ಲಿ ಕಸ ಸಂಗ್ರಹ ಮಾಡುವ ಮೂಲಕ ಇದೀಗ ದುರ್ನಾತ ಬೀರುತ್ತಿದೆ. ಎಸ್‍ಎಲ್‍ಆರ್‍ಎಮ್ ಘಟಕ ನಿರ್ಮಿಸಿ ಕಸ ವಿಲೇವರಿ ಮಾಡಿಸಬೇಕಾದ ಪಂಚಾಯಿತಿ ಮೌನವಾಗಿದೆ ಎಂದು ಗ್ರಾಮಸ್ಥರು ಪಂಚಾಯಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ದಲಿತ ಮುಖಂಡ ಲೋಕೇಶ್ ಕಂಚಿನಡ್ಕ ಒತ್ತಾಯಿಸಿದ್ದಾರೆ. 

ಒಣ ಕಸಕ್ಕೆ ಪರಿಹಾರ: ಈಗಿರುವ ಒಣ ಕಸವನ್ನು 15 ದಿನಗಲ್ಲಿ ನಿಟ್ಟೆಯಲ್ಲಿ ನಿರ್ಮಾಣಗೊಂಡಿರುವ ಎಮ್‍ಆರ್‍ಎಫ್ ಘಟಕಕ್ಕೆ ಸ್ಥಳಾಂತರಿಸಲಾಗುವುದು. ಹೊಸದಾಗಿ ನಿರ್ಮಾಣಗೊಂಡಿರುವ ಈ ಘಟಕಕ್ಕೆ ಪ್ರತಿ ದಿನ 3ಟನ್‍ನಷ್ಟು ಒಣ ಕಸ ಬೇಕಾಗುತ್ತದೆ. ಇದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ.  

ಘಟಕಕ್ಕೆ ಜಾಗ ಮಂಜೂರು:  ಹಸಿ ಕಸ ವಿಲೇವರಿಗೆ ಈಗಾಗಲೇ ಜಿಲ್ಲಾಧಿಕಾರಿ ಅಬ್ಬೇಡಿಯಲ್ಲಿ 19 ಸೆಂಟ್ಸ್ ಜಾಗವನ್ನು ಸರ್ವೇ ನಂಬ್ರ 77/37 ಸ್ಥಳ ಮಂಜೂರು ಮಾಡಿದ್ದಾರೆ. ಇನ್ನು ಎರಡು ತಿಂಗಳಲ್ಲಿ ಘಟಕ ನಿರ್ಮಾಣ ವಾಗಲಿದೆ. ಆದರೆ ಸ್ಥಳೀಯರಿಂದ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಎಂದು ಪಿಡಿಓ ಪಂಚಾಕ್ಷರಿ ಸ್ವಾಮಿ ಕೆರಿಮಠ ಹೇಳಿದ್ದಾರೆ.

ಸ್ಥಳೀಯರ ವಿರೋಧ: ಹೊಸದಾಗಿ ಕಸ ವಿಲೇವರಿ ಘಟಕ ನಿರ್ಮಿಸಲು ಎನ್‍ಟಿಪಿಸಿ ಗೋಡೋನ್ ಬಳಿ ಗ್ರಾಮ ಪಂಚಾಯಿತಿ ಸಿದ್ದತೆ ನಡೆಸುತ್ತಿದೆ. ಗ್ರಾಮ ಪಂಚಾಯಿತಿ ಎದುರಲ್ಲೇ ಕಸ ವಿಲೇವರಿ ಮಾಡದೆ ಇರುವ ಪಂಚಾಯಿತಿ ಇನ್ನು ಅಬ್ಬೇಡಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಸ ವಿಲೇವರಿ ಘಟಕವನ್ನು ಹೇಗೆ ನಿರ್ವಹಿಸು ತ್ತದೆ ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ಅಲ್ಲದೆ ಇದು ಜನವಸತಿ ಪ್ರದೇಶವಾಗಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಕಸ ವಿಲೇವರಿ ಘಟಕ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಲೋಕೇಶ್ ಎಚ್ಚರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X