Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್‍ಇಪಿ, ಟಿಎಸ್‍ಪಿ ಅನುದಾನ ವಿವಿಗಳು...

ಎಸ್‍ಇಪಿ, ಟಿಎಸ್‍ಪಿ ಅನುದಾನ ವಿವಿಗಳು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು: ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ24 March 2021 11:29 PM IST
share

ಬೆಂಗಳೂರು, ಮಾ.24: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಹಾಸ್ಟೆಲ್ ಸೇರಿದಂತೆ ಇತರ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಎಸ್‍ಇಪಿ, ಟಿಎಸ್‍ಪಿಯಡಿ ಸರಕಾರ ಬಿಡುಗಡೆ ಮಾಡಿದ ಅನುದಾನವನ್ನು ರಾಜ್ಯದ ಒಂಬತ್ತು ವಿವಿಗಳು ಇತರೆ ಉದ್ದೇಶಗಳಿಗೆ ಬಳಕೆ  ಮಾಡಿಕೊಂಡಿದ್ದರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು   ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 

ಬುಧವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಹಾಗೂ ಕಾಂಗ್ರೆಸ್‍ನ ಪಿ.ಆರ್.ರಮೇಶ್ ಅವರು ಜಂಟಿಯಾಗಿ ಪ್ರಶ್ನೆ ಕೇಳಿ ಬೀದರ್‍ನ ಪಶುಸಂಗೋಪನೆ ವಿಶ್ವವಿದ್ಯಾಲಯ ಕುಲಪತಿ ಅವರು ಹಣ ದುರುಪಯೋಗ ಪಡಿಸಿಕೊಡಿದ್ದಾರೆ ಎಂದು ಆರೋಪಿಸಿದರು. ಈ ಪ್ರಶ್ನೆಗೆ ಉತ್ತರ ನೀಡಲು ಕಾಲಾವಕಾಶ ನೀಡುವಂತೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದರು.

ಇದೇ ಪ್ರಶ್ನೆಗೆ ಸಚಿವರು ವಿಧಾನಸಭೆಯಲ್ಲಿ ಉತ್ತರ ನೀಡಿದ್ದಾರೆ ಎಂದು ಸದಸ್ಯ ರಮೇಶ್‍ಗೌಡ ಆರೋಪಿಸಿದರು. ಅಲ್ಲಿ ಕೇಳಲಾದ ಪ್ರಶ್ನೆಯೇ ಬೇರೆ, ನಾವು ನೀಡಿರುವ ಉತ್ತರವೂ ಬೇರೆ ಎಂದು ಸಚಿವ ಪ್ರಭು ಚಹ್ವಾಣ್ ಸಮರ್ಥಿಸಿಕೊಂಡಾಗ, ಎರಡು ಪ್ರಶ್ನೆ ಮತ್ತು ಉತ್ತರಗಳು ಒಂದೇ ಎಂದು ವಾದಿಸಿದ ಸದಸ್ಯ ರಮೇಶ್‍ಗೌಡ, ಇದನ್ನು ಹಕ್ಕುಚ್ಯುತಿಗೆ ಒಪ್ಪಿಸಿ, ಒಂದು ವೇಳೆ ಪ್ರಶ್ನೆ, ಉತ್ತರ ಬೇರೆ ಇದ್ದರೆ ಸುಳ್ಳು ಹೇಳಿದವರಿಗೆ ದಂಡನೆಯಾಗಲಿ ಎಂದು ಸವಾಲು ಹಾಕಿದರು.

ಆಗ ಮಧ್ಯ ಪ್ರವೇಶಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಉಪಯೋಜನೆಯ ಎಸ್ಸಿ, ಎಸ್ಟಿ ಹಾಸ್ಟೆಲ್ ವಿದ್ಯಾರ್ಥಿಗಳ ಊಟ, ವಸತಿ, ಪುಸ್ತಕ ಸೇರಿದಂತೆ ಇತರ ಮೂಲ ಸೌಲಭ್ಯಗಳಿಗಾಗಿ ಸರಕಾರ ಹಣ ಬಿಡುಗಡೆ ಮಾಡಿದೆ. ಆದರೆ ಅದನ್ನು ಒಂಬತ್ತು ವಿವಿಗಳ ಕುಲಪತಿಗಳು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿದ್ದಾರೆ.

ಕೆಲವರು ತಮ್ಮ ಕಚೇರಿಯ ನವೀಕರಣಕ್ಕೆ ಬಳಸಿದ್ದರೆ ಇನ್ನೂ ಕೆಲವರು ವಿವಿಯ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಿದ್ದಾರೆ. ಮತ್ತೂ ಕೆಲವರು ವೈಯಕ್ತಿಕ ಖಾತೆಯಲ್ಲಿ ಹಣ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಚರ್ಚೆ ಮಾಡಲು ಅಧಿವೇಶನ ಮುಗಿದ ಬಳಿಕ ವಿವಿಗಳ ಕುಲಪತಿಗಳ ಸಭೆ ಕರೆಯಲು ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ಆಗ ಮಧ್ಯ ಪ್ರವೇಶ ಮಾಡಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು, ಉಪಯೋಜನೆಯ ಹಣವನ್ನು ಇತರೆ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಪರಾಧ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X