ಸಿಎಂ, ಸ್ಪೀಕರ್ ಸಹಿತ ಎಲ್ಲ ಬಿಜೆಪಿ ಶಾಸಕರು ತಮ್ಮ ವೈವಾಹಿಕ ವಿವರ ಬಹಿರಂಗಪಡಿಸಲಿ : ಸಿದ್ದರಾಮಯ್ಯ
ಸಚಿವ ಸುಧಾಕರ್ ಹೇಳಿಕೆ ಹಿನ್ನೆಲೆ

ಬೆಂಗಳೂರು : ರಾಜ್ಯದ ಎಲ್ಲಾ 224 ಶಾಸಕರೂ ಏಕಪತ್ನಿ ವ್ರತಸ್ಥರೇ ? ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿಕೆ ನೀಡಿರುವುದು ಭಾರೀ ವಿವಾದವಾಗಿದೆ. ಗುರುವಾರ ಬೆಳಗ್ಗೆ ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ, ಸ್ಪೀಕರ್ ಸಹಿತ ಎಲ್ಲ ಬಿಜೆಪಿ ಶಾಸಕರು ತಮ್ಮ ವೈವಾಹಿಕ ವಿವರ ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.
ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವ ಇಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡ ಸಿಎಂ ಅವರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮ ಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
"ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ" ಎಂಬ ಸಚಿವ @mla_sudhakar ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಮತ್ತು @BSYBJP ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು. #ಏಕಪತ್ನಿವ್ರತಸ್ಥ
— Siddaramaiah (@siddaramaiah) March 25, 2021
1/3
.@mla_sudhakar ಹೇಳಿಕೆಯನ್ನು @BJP4Karnataka ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ @CMofKarnataka ಅವರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು.#ಏಕಪತ್ನಿವ್ರತಸ್ಥ
— Siddaramaiah (@siddaramaiah) March 25, 2021
2/3
ಸಚಿವ @mla_sudhakar ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು.
— Siddaramaiah (@siddaramaiah) March 25, 2021
1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ.#ಏಕಪತ್ನಿವ್ರತಸ್ಥ
3/3







