Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ತಿಂಗಳಲ್ಲಿ ಶೇ.1ಕ್ಕೂ ಕಡಿಮೆ...

ಮೂರು ತಿಂಗಳಲ್ಲಿ ಶೇ.1ಕ್ಕೂ ಕಡಿಮೆ ಕೋವಿಡ್ ಸ್ಯಾಂಪಲ್‌ಗಳ ವಂಶವಾಹಿ ಅನುಕ್ರಮಣಿಕೆ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ25 March 2021 8:13 PM IST
share

ಹೊಸದಿಲ್ಲಿ, ಮಾ.25: ಈ ವರ್ಷದ ಜನವರಿಯಿಂದ ಮಾರ್ಚ್ 18ರ ನಡುವಿನ ಅವಧಿಯಲ್ಲಿ ದೇಶದಲ್ಲಿಯ ಒಟ್ಟು ಕೊರೋನವೈರಸ್ ಪಾಸಿಟಿವ್ ಸ್ಯಾಂಪಲ್‌ಗಳ ಪೈಕಿ ಶೇ.1ಕ್ಕೂ ಕಡಿಮೆ,ಅಂದರೆ 7,664 ಸ್ಯಾಂಪಲ್‌ಗಳನ್ನು ಮಾತ್ರ ಜಿನೋಮ್ ಸೀಕ್ವೆನ್ಸಿಂಗ್ ಅಥವಾ ವಂಶವಾಹಿ ಅನುಕ್ರಮಣಿಕೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡೌನ್ ಟು ಅರ್ತ್ ತನ್ನ ವರದಿಯಲ್ಲಿ ತಿಳಿಸಿದೆ.

ವಂಶವಾಹಿ ಅನುಕ್ರಮಣಿಕೆಯು ಕಾಲಕ್ರಮೇಣ ವೈರಸ್‌ನ ಸ್ವರೂಪದಲ್ಲಿ ಪತ್ತೆಯಾಗುವ ವಂಶವಾಹಿ ಮಾಹಿತಿಯನ್ನು ಓದುವ ಮತ್ತು ವ್ಯಾಖ್ಯಾನಿಸುವ ತಂತ್ರಜ್ಞಾನವಾಗಿದೆ. ಈ ವೈಜ್ಞಾನಿಕ ಪದ್ಧತಿಯು ಕೊರೋನವೈರಸ್‌ನ ರೂಪಾಂತರಿ ಪ್ರಭೇದಗಳ ಪರಿಣಾಮವನ್ನು ತಿಳಿದುಕೊಳ್ಳಲು ಮತ್ತು ಪ್ರಕರಣಗಳ ಅಥವಾ ಸಾವುಗಳ ಸಂಖ್ಯೆಯಲ್ಲಿ ಏರಿಕೆಗೆ ಕಾರಣವಾಗಿರುವ ಪ್ರಭೇದಗಳನ್ನು ಗುರುತಿಸುವಲ್ಲಿ ಮಹತ್ವದ ಸಾಧನವಾಗಿದೆ.

ಇಂಡಿಯನ್ ಸಾರ್ಸ್-ಕೋವ್-2 ಜಿನೊಮಿಕ್ಸ್ ಕನ್ಸಾರ್ಟಿಯಂ ಡಿ.30ರಿಂದ ತನ್ನ ವಂಶವಾಹಿ ಅನುಕ್ರಮಣಿಕೆ ಪರೀಕ್ಷೆಗಳನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಪ್ರಕಟಿಸಿತ್ತು. ಪ್ರತಿ ರಾಜ್ಯದಿಂದ ಶೇ.5ರಷ್ಟು ಕೋವಿಡ್ ಪಾಸಿಟಿವ್ ಸ್ಯಾಂಪಲ್‌ಗಳು ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಂದ ಎಲ್ಲ ಪಾಸಿಟಿವ್ ಸ್ಯಾಂಪಲ್‌ಗಳ ಶೇ.100ರಷ್ಟನ್ನು ವಂಶವಾಹಿ ಅನುಕ್ರಮಣಿಕೆ ಪರೀಕ್ಷೆಗೊಳಪಡಿಸಲು ಯೋಜಿಸಲಾಗಿತ್ತು. ಕೊರೋನವೈರಸ್ ಕಣ್ಗಾವಲಿನ ಭಾಗವಾಗಿ ಸಂಭಾವ್ಯ ವೈರಸ್ ಆಸ್ಫೋಟನೆ ಮತ್ತು ಸಂಬಂಧಿತ ಪ್ರಭೇದಗಳನ್ನು ಗುರುತಿಸುವುದು ಇದರ ಉದ್ದೇಶವಾಗಿದೆ ಎಂದು ಕೇಂದ್ರ ಸರಕಾರವು ಮಾ.19ರಂದು ಸಂಸತ್ತಿನಲ್ಲಿ ತಿಳಿಸಿತ್ತು. ಆದರೆ ವಂಶವಾಹಿ ಅನುಕ್ರಮಣಿಕೆ ಪರೀಕ್ಷೆ ಅತ್ಯಂತ ನಿಧಾನಗತಿಯಲ್ಲಿ ನಡೆಯುತ್ತಿದೆ.

ಡಿಸೆಂಬರ್ ಮತ್ತು ಮಾರ್ಚ್ ನಡುವೆ ಭಾರತದಲ್ಲಿ 10,22,335 ಹೊಸ ಕೊರೋನವೈರಸ್ ಪ್ರಕರಣಗಳು ವರದಿಯಾಗಿವೆ. ಶೇ.5ರಂತೆ ವಂಶವಾಹಿ ಅನುಕ್ರಮಣಿಕೆ ಪರೀಕ್ಷೆಗಾಗಿ ಸಂಗ್ರಹಿತ ಸ್ಯಾಂಪಲ್ ಪ್ರಕರಣಗಳ ಸಂಖ್ಯೆ ಈ ಅವಧಿಯಲ್ಲಿ 51,117 ಆಗಿರಬೇಕಿತ್ತು ಎಂದು ಡೌನ್ ಟು ಅರ್ತ್ ಹೇಳಿದೆ.

ಆದರೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ ಭೂಷಣ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ವಿನೋದ ಪಾಲ್ ಸೇರಿದಂತೆ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಈ ಅವಧಿಯಲ್ಲಿ ವಂಶವಾಹಿ ಅನುಕ್ರಮಣಿಕೆಗೆ ಒಳಪಡಿಸಲಾದ ಸ್ಯಾಂಪಲ್‌ಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X