Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಸುಧಾಕರ್ ರನ್ನು ಅನರ್ಹಗೊಳಿಸಲು...

ಸಚಿವ ಸುಧಾಕರ್ ರನ್ನು ಅನರ್ಹಗೊಳಿಸಲು ಮಹಿಳಾ ಕಾಂಗ್ರೆಸ್ ಆಗ್ರಹ: ಸಿಡಿ ಪ್ರದರ್ಶಿಸಿ ಪ್ರತಿಭಟನೆ

ಮಹಿಳೆಯರ ಕುರಿತು ವಿವಾದಿತ ಹೇಳಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ25 March 2021 8:50 PM IST
share
ಸಚಿವ ಸುಧಾಕರ್ ರನ್ನು ಅನರ್ಹಗೊಳಿಸಲು ಮಹಿಳಾ ಕಾಂಗ್ರೆಸ್ ಆಗ್ರಹ: ಸಿಡಿ ಪ್ರದರ್ಶಿಸಿ ಪ್ರತಿಭಟನೆ

ಬೆಂಗಳೂರು, ಮಾ.25: ಮಹಿಳೆಯರ ಕುರಿತು ವಿವಾದಿತ ಹೇಳಿಕೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸಬೇಕು ಎಂದು ಕಾಂಗ್ರೆಸ್ ಮಹಿಳಾ ಶಾಸಕಿಯರು ಒಕ್ಕೂಲಿನಿಂದ ಆಗ್ರಹಿಸಿದರು.

ಗುರುವಾರ ನಗರದ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಸೌಮ್ಯರೆಡ್ಡಿ, ರೂಪಾ ಶಶಿಧರ್ ಸೇರಿದಂತೆ ಪ್ರಮುಖರು, ರಾಜಕೀಯಕ್ಕೆ ಬಂದ ಮಹಿಳೆಯರನ್ನು ಸಂಶಯದಿಂದ ನೋಡುವ ರೀತಿಯಲ್ಲಿ ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ ಎಂದು ದೂರಿದರು.

ಪುಷ್ಪಾ ಅಮರನಾಥ್ ಮಾತನಾಡಿ, ಮಹಿಳೆ ರಾಜಕೀಯಕ್ಕೆ ಯಾಕೆ ಬರಬೇಕೆಂಬ ಪ್ರಶ್ನೆ ಹಿಂದೆ ಇತ್ತು. ಆದರೆ, ಈಗ ಎಲ್ಲ ಪಕ್ಷದಲ್ಲೂ ಶಾಸಕಿಯರಿದ್ದಾರೆ. ಪುರುಷರಿಗೂ ಮೀರಿ ಉತ್ತಮ ಕಾರ್ಯನಿರ್ವಣೆ ಮಾಡಿದ್ದಾರೆ. ಇಂದು ಜನಪ್ರತಿನಿಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಸುಧಾಕರ್ ಸಚಿವರಲ್ಲ, ಶಾಸಕರಾಗಿ ಇರಲೂ ಅರ್ಹರಲ್ಲ. ನ್ಯಾಯಾಲಯದ ಮೊರೆ ಹೋಗಿರುವ ಎಲ್ಲ ಆರು ಸಚಿವರು ನೈತಿಕತೆ, ಯೋಗ್ಯತೆ ಕಳೆದಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಶ್ರೀರಾಮನ ಪಕ್ಷ ಎನ್ನುವ ಬಿಜೆಪಿಯಲ್ಲಿ ಇವರಿಗೆ ಇಂತಹ ಅವಕಾಶ ಯಾರು ಮಾಡಿಕೊಟ್ಟರು. ಬಿಜೆಪಿ ಶಾಸಕಿಯರು ಇಂತಹವರ ಮಾತನ್ನು ಒಪ್ಪುತ್ತಾರಾ. ಅಲ್ಲದೆ, ಎಲ್ಲರನ್ನೂ ಎಳೆದು ಅವಹೇಳನ ಮಾಡುವುದು ಎಷ್ಟು ಸರಿ. ಸಿಎಂ ಇವರ ಹೇಳಿಕೆ ಗಮನಿಸಬೇಕು. ಸುಧಾಕರ್ ನೀಡಿರುವ ಹೇಳಿಕೆಯ ದಾಖಲೆಯನ್ನು ನಾವು ಮುಖ್ಯಮಂತ್ರಿಗೆ ಕಳುಹಿಸಿಕೊಡುತ್ತೇವೆ. ಸಾಕ್ಷ್ಯ ಇದ್ದರೆ ಅವರು ಪ್ರಸ್ತುತಪಡಿಸಲಿ ಎಂದು ಸವಾಲು ಹಾಕಿದರು.

ರಾಜಕಾರಣದಲ್ಲಿ ಮೌಲ್ಯ ಉಳಿಸಿಕೊಂಡು ಸಾಗುವವರಿದ್ದಾರೆ. ಆದರೆ, ಸುಧಾಕರ್ ಊರು ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು ಹಾಕುವ ರೀತಿ ಕ್ಷಮೆ ಕೋರಿದರು. ಇವರು ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದ ಅವರು, ಇನ್ನು ಮುಂದೆ ನಾವು ಸುಧಾಕರ್ ಅವರನ್ನು ಆರೋಗ್ಯ ಮಂತ್ರಿ ಎಂದು ಕರೆಯುವುದಿಲ್ಲ. ಅನಾರೋಗ್ಯ ಮಂತ್ರಿ ಎಂದು ಕರೆಯುತ್ತೇವೆ ಎಂದು ತಿಳಿಸಿದರು.

ಶಾಸಕಿ ರೂಪಾ ಶಶಿಧರ್ ಮಾತನಾಡಿ, ಶಾಸಕ ಹಾಗೂ ಸಚಿವ ಸ್ಥಾನ ಎಂಬುದು ಪವಿತ್ರವಾದ ಹುದ್ದೆಗಳು. ಅದರಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸುಧಾಕರ್ ಹೇಳಿಕೆ ಹೆಣ್ಣುಮಕ್ಕಳನ್ನು ತೇಜೋವಧೆ ಮಾಡಿದಂತಾಗಿದೆ. ಅಲ್ಲದೆ, ರಾಜ್ಯದ ಜನ ಗೌರವಯುತವಾಗಿ ಗೆಲ್ಲಿಸಿ ಕಳಿಸುತ್ತಾರೆ. ಪ್ರಜ್ಞಾವಂತರಾಗಿ ಉತ್ತಮ ನಿರ್ಧಾರ ಕೈಗೊಳ್ಳಲಿ ಎಂದು ಜನ ಆಯ್ಕೆ ಮಾಡಿ ಕಳುಹಿಸಿಕೊಡುತ್ತಾರೆ ಎಂದರು.

ಜಯನಗರ ಶಾಸಕಿ ಸೌಮ್ಯರೆಡ್ಡಿ ಮಾತನಾಡಿ, ಸಮಾಜವನ್ನು ಕಾಡುವ ನಾನಾ ರೀತಿಯ ಸಮಸ್ಯೆಗಳಿವೆ. ಬಡತನ, ನಿರುದ್ಯೋಗ ಸೇರಿದಂತೆ ಜನರ ಸಮಸ್ಯೆಗಳ ಬಗ್ಗೆ ನಾವು ಚರ್ಚೆ ಮಾಡಬೇಕಿತ್ತು. ಆದರೆ, ಸಚಿವರು ಯಾವ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ಏನು ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಯಾವ ಮಗುವನ್ನೇ ಕೇಳಿ ಅದು ರಾಜಕಾರಣಿಯಾಗಬೇಕೆಂದು ಬಯಸುವುದಿಲ್ಲ. ಅಂತಹ ವಾತಾವರಣ ಸೃಷ್ಟಿಯಾಗಿದೆ. ಸಚಿವರ ನಡವಳಿಕೆಗಳು ಮತ್ತಷ್ಟು ವಾತಾವರಣವನ್ನು ಕಲುಷಿತಗೊಳಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಡಿ ಪ್ರದರ್ಶಿಸಿ ಪ್ರತಿಭಟನೆ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಖಂಡಿಸಿ ಇಲ್ಲಿನ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು, ಖಾಲಿ ಸಿಡಿ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು.

ಮಹಿಳಾ ಜನ ಪ್ರತಿನಿಧಿಗಳು ಸೇರಿದಂತೆ 224 ಶಾಸಕರನ್ನು ಹಾಗೂ ಆಯ್ಕೆ ಮಾಡಿ ಕಳುಹಿಸಿದ ಮತದಾರರನ್ನು ಸುಧಾಕರ್ ಅವಮಾನಿಸಿದ್ದಾರೆ. ಅವರು ಈ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಒತ್ತಡ ಹೇರಿಯಾದರೂ, ರಾಜೀನಾಮೆ ಪಡೆಯಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಸಿಎಂ ಮನೆಗೆ ಮುತ್ತಿಗೆ, ವಶಕ್ಕೆ

ಡಾ.ಕೆ.ಸುಧಾಕರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸ್ಥಾನದಿಂದ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ 15ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X