Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನಪ್ರತಿನಿಧಿಗಳು ಸದನದಲ್ಲಿ ಜನರ ಧ್ವನಿ...

ಜನಪ್ರತಿನಿಧಿಗಳು ಸದನದಲ್ಲಿ ಜನರ ಧ್ವನಿ ಹಾಗೂ ಭಾವನೆಯಾಗಿರಬೇಕು: ಸ್ಪೀಕರ್ ಕಾಗೇರಿ

ವಾರ್ತಾಭಾರತಿವಾರ್ತಾಭಾರತಿ25 March 2021 8:55 PM IST
share
ಜನಪ್ರತಿನಿಧಿಗಳು ಸದನದಲ್ಲಿ ಜನರ ಧ್ವನಿ ಹಾಗೂ ಭಾವನೆಯಾಗಿರಬೇಕು: ಸ್ಪೀಕರ್ ಕಾಗೇರಿ

ಬೆಂಗಳೂರು, ಮಾ.25: ಸದನದಲ್ಲಿ ಸಚಿವರು ಮತ್ತು ಸದಸ್ಯರ ಹಾಜರಾತಿಯೂ ಒಳಗೊಂಡಂತೆ ಪಾಲ್ಗೊಳ್ಳುವಿಕೆ ಇನ್ನೂ ಹೆಚ್ಚು ಇರಬೇಕಿತ್ತು ಎಂಬ ಅಭಿಪ್ರಾಯವನ್ನು ಹೊರ ಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸದನದ ಕಾರ್ಯ ಕಲಾಪಗಳಲ್ಲಿ ಸದಸ್ಯರಲ್ಲಿ ಸ್ವಯಂ ಜಾಗೃತಿ ಮತ್ತು ಸ್ವಯಂ ಶಿಸ್ತು ಅಗತ್ಯ ಎಂದು ಆಗ್ರಹಪೂರ್ವಕವಾಗಿ ಹೇಳಿದರು. 

ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಾಸಕರು, ಸಚಿವರು ನೆಪ ಹೇಳಿ ಸದನಕ್ಕೆ ಗೈರು ಹಾಜರಾಗುವುದು ಹಾಗೂ ಸಕ್ರಿಯವಾಗಿ ಪಾಲ್ಗೊಳ್ಳದೆ ಇರುವುದು ಸಮಂಜಸವೂ ಅಲ್ಲ, ಸಮರ್ಪಕವೂ ಅಲ್ಲ ಎಂದು ಬಣ್ಣಿಸಿದರು. 

ಪ್ರಜಾಪ್ರಭುತ್ವದ ದೇಗುಲದಲ್ಲಿ ಅನಿವಾರ್ಯ ಕಾರಣಗಳು ಹಾಗೂ ತುರ್ತು ಸಂದರ್ಭಗಳು ಹೊರತುಪಡಿಸಿ ಅನಗತ್ಯವಾಗಿ ಗೈರು ಹಾಜರಾಗುವುದು ಸಾಧುವಲ್ಲ. ಜನಪ್ರತಿನಿಧಿಗಳು ಸದನದಲ್ಲಿ ತಾವು ಜನರ ಧ್ವನಿಯಾಗಬೇಕು ಹಾಗೂ ಸದನದಲ್ಲಿ ತಾವು ಜನರ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಬೇಕು ಎಂಬುದನ್ನು ಸದಸ್ಯರು ಸದನ ಪ್ರಾರಂಭಗೊಳ್ಳುವ ಮುನ್ನ ಸಂಕಲ್ಪ ಮಾಡಬೇಕು ಎಂದು ಅವರು ಸಲಹೆ ಮಾಡಿದರು. 

ಮಾರ್ಚ್ 4 ಮತ್ತು 5 ರಂದು ಸದನದಲ್ಲಿ ನಿಗದಿಗೊಳಿಸಿದ್ದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಚರ್ಚೆಯಲ್ಲಿ ಪ್ರತಿಪಕ್ಷಗಳು ಪಾಲ್ಗೊಳ್ಳದಿರುವುದು ತಮಗೆ ನೋವು ತಂದಿದೆ. ಆಡಳಿತ ಪಕ್ಷದ ಸಭಾನಾಯಕರಿಗೆ ಇರುವಂತೆಯೇ ಪ್ರತಿ ಪಕ್ಷದ ನಾಯಕರಿಗೂ ಕರ್ತವ್ಯ ಮತ್ತು ಜವಾಬ್ದಾರಿ ಇರುತ್ತದೆ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯಭೇದಗಳು ಹಾಗೂ ಭಿನ್ನಾಭಿಪ್ರಾಯಗಳು ಸಹಜ ಎಂದು ಸ್ಪೀಕರ್ ಹೇಳಿದರು.

ಚರ್ಚೆಯಲ್ಲಿ ಪಾಲ್ಗೊಂಡು ಪ್ರತಿಪಕ್ಷಗಳು ತಮ್ಮ ಅಭಿಪ್ರಾಯವನ್ನು ದಾಖಲಿಸಬಹುದಿತ್ತು. ಚರ್ಚೆಯಲ್ಲಿಯೆ ಭಾಗವಹಿಸದೆ ಅಸಹಕಾರ ತೋರಿದ್ದು, ಕಲಾಪ ಸಲಹಾ ಸಮಿತಿಯಲ್ಲಿ ಪಾಲ್ಗೊಳ್ಳದೆ ಹಾಗೂ ಕಲಾಪದಲ್ಲಿ ಪ್ರತಿಭಟನೆ ನಡೆಸಿ ಅಧಿವೇಶನವನ್ನು ಮೊಟಕುಗೊಳಿಸುವಂತೆ ಮಾಡಿದ್ದು ಅಕ್ಷಮ್ಯ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ವಿಧಾನಸಭೆಯ ಸದಸ್ಯರಲ್ಲಿ ಅನುಭವ, ಹಿರಿತನ ಸಾಂವಿಧಾನಿಕ ಮೌಲ್ಯಗಳು ಹಾಗೂ ಗೌರವಕ್ಕೆ ಯಾವುದೇ ಕೊರತೆ ಇಲ್ಲ. ಸದನದಲ್ಲಿ ಪ್ರತಿಭಟನೆಗಳು, ಧರಣಿಗಳು ಮತ್ತು ಸಭಾತ್ಯಾಗಗಳು ಪ್ರಾರಂಭಿಕ ಅಸ್ತ್ರವಾದರೂ ಸರಿ ಅಥವಾ ಅಂತಿಮ ಅಸ್ತ್ರವಾದರೂ ಸರಿ ಒಂದು ವಿಷಯ ಪ್ರಸ್ತಾಪಿಸಿದ ನಂತರ ಮತ್ತೊಂದು ವಿಷಯ ಪ್ರಸ್ತಾಪಿಸುವ ವೇಳೆಗೆ ಎಲ್ಲ ಸದಸ್ಯರು ಸದನದೊಳಗೆ ಪ್ರವೇಶಿಸಿ ಸಕ್ರಿಯವಾಗಿ ಪಾಲ್ಗೊಂಡು ಕಲಾಪವನ್ನು ನಡೆಸಲು ಅನುವು ಮಾಡಿಕೊಡಬೇಕೆಂಬುದು ಪ್ರತಿಪಕ್ಷದವರಲ್ಲಿ ತಮ್ಮ ಕಳಕಳಿಯ ಮನವಿ. ಕಲಾಪವನ್ನು ನಿರ್ಬಂಧಿಸುವ ಹಾಗೂ ಚರ್ಚೆಗೆ ತಡೆಒಡ್ಡುವ ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸದಿರಲಿ ಎಂದು ಅವರು ಹೇಳಿದರು.

ಸಚಿವ ಸುಧಾಕರ್ ನೀಡಿದ ಹೇಳಿಕೆಯಿಂದ ಸದನದ ಎಲ್ಲ ಸದಸ್ಯರೂ ಮುಜುಗರಕ್ಕೆ ಈಡಾದ ವಿಷಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಪೀಕರ್, ಈಗಾಗಲೇ ಸಚಿವರು ಸ್ಪಷ್ಟೀಕರಣ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಂದುವರಿಸಲು ತಮಗೆ ಇಷ್ಠವಿಲ್ಲ. ಆದರೆ ಕಾಂಗ್ರೆಸ್ ಸದಸ್ಯರು ಲಿಖಿತ ದೂರು ನೀಡಿರುವ ಹಿನ್ನಲೆಯಲ್ಲಿ ಕಾನೂನು ಪ್ರಕಾರ ಹಾಗೂ ನಿಯಮಾವಳಿಗಳ ಚೌಕಟ್ಟಿಯನಲ್ಲಿ ದೂರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X